ಬ್ರೇಕಿಂಗ್ ನ್ಯೂಸ್
03-07-25 02:33 pm Mangalore Correspondent ಕರಾವಳಿ
ಮಂಗಳೂರು, ಜು.3 : ಹಾಸನದಲ್ಲಿ ಯುವಕ- ಯುವತಿಯರು ಹೃದಯಾಘಾತದಿಂದ ಮೃತಪಟ್ಟ ಸುದ್ದಿಗಳು ವರದಿಯಾಗುತ್ತಿರುವ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಆರೋಗ್ಯ ಇಲಾಖೆ ಎಲರ್ಟ್ ಆಗಿದೆ. ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ಪ್ರಕಾರ, ದ.ಕ. ಜಿಲ್ಲೆಯಲ್ಲಿ ಕಳೆದ ಆರು ತಿಂಗಳ ವರದಿ ಪ್ರಕಾರ 60 ವರ್ಷ ಮೇಲ್ಪಟ್ಟವರಲ್ಲಿ ಹೆಚ್ಚಿನ ಹೃದಯಾಘಾತ ಸಾವುಗಳು ಸಂಭವಿಸಿವೆ ಎಂದು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಆರು ತಿಂಗಳಲ್ಲಿ 85 ಮಂದಿ ಹೃದಯಾಘಾತಕ್ಕೀಡಾಗಿ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾಹಿತಿ ಪ್ರಕಾರ, ಜನವರಿಯಿಂದ ಜೂನ್ ವರೆಗೆ ಜಿಲ್ಲೆಯಲ್ಲಿ 380 ಜನರಿಗೆ ಹೃದಯಾಘಾತವಾಗಿದ್ದು, ಇದರಲ್ಲಿ 85 ಮಂದಿ ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ 54 ಪುರುಷರು ಮತ್ತು 31 ಮಹಿಳೆಯರು ಸೇರಿದ್ದಾರೆ.
40 ರಿಂದ 50 ವರ್ಷದ ಒಳಗಿನ 18 ಮಂದಿ, 50 ರಿಂದ 60 ವರ್ಷ ಒಳಗಿನ 18 ಮಂದಿ ಹಾಗೂ 60 ವರ್ಷ ಮೇಲ್ಪಟ್ಟ 45 ಮಂದಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವರದಿಯಲ್ಲಿ ತಿಳಿಸಿದ್ದಾರೆ. 20 ರಿಂದ 40 ವರ್ಷ ವಯಸ್ಸಿನ 4 ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಸೋಮವಾರ ಒಂದೇ ದಿನ ಹಾಸನ ಜಿಲ್ಲೆಯಲ್ಲಿ ಆರು ಹೃದಯಾಘಾತ ಪ್ರಕರಣ ವರದಿಯಾಗಿದೆ. ಸದ್ಯ ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. 40 ದಿನಗಳಲ್ಲಿ 24 ಜನರಿಗೆ ಹೃದಯಾಘಾತ ಆಗಿರುವುದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.
Following recent reports of young individuals succumbing to heart attacks in Hassan district, the health department has now raised an alert in Dakshina Kannada as well. According to the district health officer, the majority of heart attack-related deaths in Dakshina Kannada over the last six months have occurred among people aged over 60.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm