ಬ್ರೇಕಿಂಗ್ ನ್ಯೂಸ್
03-07-25 10:50 pm Mangalore Correspondent ಕರಾವಳಿ
ಮಂಗಳೂರು, ಜುಲೈ 3 : ತನ್ನ ಮಗ ಡ್ರಗ್ಸ್ ವ್ಯಸನಕ್ಕೀಡಾಗಿದ್ದಾನೆಂದು ಆತನ ಹೆತ್ತವರು ಬಂದು ದೂರಿಕೊಂಡ ಹಿನ್ನೆಲೆಯಲ್ಲಿ ಸಿಇಎನ್ ಕ್ರೈಮ್ ತಂಡದ ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು 200 ಮಂದಿ ಉದ್ಯೋಗಸ್ಥರು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಐವರು ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಹೆತ್ತವರ ದೂರಿನಂತೆ ಏನಾಗಿದೆ ಎಂದು ತಿಳಿಯಲು ಸಿಇಎನ್ ವಿಭಾಗದಿಂದ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ, ಡ್ರಗ್ಸ್ ಪೂರೈಕೆಯ ಜಾಲ ಗೊತ್ತಾಗಿದ್ದು, 5 ಮಂದಿಯನ್ನು ಬಂಧಿಸಲಾಗಿದೆ. ಅವರಿಂದ 6 ಕೇಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಒಬ್ಬರು ಬಂದ ದೂರು ನೀಡಿದ್ದರಿಂದ 200 ಜನಕ್ಕೆ ಡ್ರಗ್ಸ್ ಪೂರೈಸುತ್ತಿದ್ದ ಐವರನ್ನು ಬಂಧಿಸಲಾಗಿದೆ. ಇದೇ ರೀತಿ ಹತ್ತು ಜನ ದೂರು ಕೊಟ್ಟರೆ ಎರಡು ಸಾವಿರ ಮಂದಿಗೆ ಡ್ರಗ್ಸ್ ಪೂರೈಕೆ ಆಗುವುದನ್ನು ತಪ್ಪಿಸಬಹುದು. ನೂರು ಮಂದಿ ಬಂದು ಖಚಿತವಾಗಿ ದೂರು ನೀಡಿದಲ್ಲಿ ಇಡೀ ಮಂಗಳೂರು ನಗರದಲ್ಲಿ ಡ್ರಗ್ಸ್ ಪೂರೈಕೆ ಆಗದಂತೆ ಮಾಡಬಹುದು.


ಹೀಗಾಗಿ ಯಾರೇ ಆದರೂ ಡ್ರಗ್ಸ್ ಬಗ್ಗೆ ಮಾಹಿತಿ ಇದ್ದಲ್ಲಿ ನೇರವಾಗಿ ಬಂದು ಹಂಚಿಕೊಳ್ಳಿ. ಯಾರೇ ಡ್ರಗ್ಸ್ ವ್ಯಸನಿಗಳಿದ್ದರೂ ಅವರನ್ನು ಸಂತ್ರಸ್ತರೆಂದು ಪರಿಗಣಿಸುತ್ತೇವೆ. ಅವರಿಗೆ ಡ್ರಗ್ಸ್ ಪೂರೈಸುವವರನ್ನು ಪೆಡ್ಲರ್ ಗಳೆಂದು ಪರಿಗಣಿಸಿ ಕಠಿಣ ಕ್ರಮ ಜರುಗಿಸುತ್ತೇವೆ. ಡ್ರಗ್ಸ್ ಜಾಲ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರ ಮುಖ್ಯ ಎಂದು ಪೊಲೀಸ್ ಕಮಿಷನರ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
Acting on a complaint by a distressed parent whose son was addicted to drugs, the Commissionerate’s CEN Crime team launched a special operation. As a result, five drug peddlers—who reputedly supplied narcotics to about 200 working adults and college students—have been arrested, Police Commissioner Sudhir Kumar Reddy announced today.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm