ಬ್ರೇಕಿಂಗ್ ನ್ಯೂಸ್
04-07-25 11:46 am Mangalore Correspondent ಕರಾವಳಿ
ಉಳ್ಳಾಲ, ಜು.4 : ಕುಡಿದ ಮತ್ತಿನಲ್ಲಿ ಮನೆಗೆ ಬಂದು ತಂದೆ ಮತ್ತು ಸಹೋದರನಲ್ಲಿ ಗಲಾಟೆ ಮಾಡಿದ ವ್ಯಕ್ತಿಯೋರ್ವ ಮನೆಯ ಬಾಲ್ಕನಿಗೆ ಅಳವಡಿಸಿದ್ದ ಅಲ್ಯುಮಿನಿಯಮ್ ಗಾಜಿಗೆ ಆವೇಶದಿಂದ ಕೈಯನ್ನ ಬಡಿದ ಪರಿಣಾಮ ರಕ್ತಸ್ರಾವದಿಂದ ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ ಉಳ್ಳಾಲ ಠಾಣೆ ವ್ಯಾಪ್ತಿಯ ಮಾಡೂರು ಅರಸುನಗರ ಎಂಬಲ್ಲಿ ನಡೆದಿದೆ.
ಮಾಡೂರು ಅರಸುನಗರ ನಿವಾಸಿ ನಿತೇಶ್ ನಾಯಕ್(36) ಸಾವನ್ನಪ್ಪಿದ ವ್ಯಕ್ತಿ. ನಿತೇಶ್ ಅವರು ತಂದೆ ಸತೀಶ್ ನಾಯಕ್ ಮತ್ತು ಸಹೋದರ ದುರ್ಗೇಶ್ ಜೊತೆ ಮಾಡೂರು ಅರಸುನಗರದಲ್ಲಿ ವಾಸವಾಗಿದ್ದು ತಂದೆ ಮಕ್ಕಳು ಕರಿದ ತಿಂಡಿ ತಿನಿಸುಗಳನ್ನ ತಯಾರಿಸಿ ಅಂಗಡಿಗಳಿಗೆ ವಿತರಿಸುವ ಉದ್ಯಮ ನಡೆಸುತ್ತಿದ್ದರು.

ನಿತೇಶ್ ಅವರಿಗೆ ಮದುವೆಯಾಗಿದ್ದು 2023 ರಲ್ಲಿ ಪತ್ನಿಯಿಂದ ವಿಚ್ಚೇದನ ಪಡಿದಿದ್ದರು ಎನ್ನಲಾಗಿದೆ. ನಿತೇಶ್ ನಿತ್ಯವೂ ಮದ್ಯಪಾನ ಮಾಡಿ ಬಂದು ಮನೆಯಲ್ಲಿ ತಂದೆ ಮತ್ತು ಅಣ್ಣನಲ್ಲಿ ಗಲಾಟೆ ನಡೆಸಿ ಕಿಟಕಿಗಳ ಗಾಜನ್ನು ಪುಡಿ ಮಾಡುತ್ತಿದ್ದರಂತೆ. ನಿನ್ನೆ ರಾತ್ರಿಯೂ ಸುಮಾರು 9 ಗಂಟೆ ವೇಳೆ ಮನೆಯಲ್ಲಿ ಗಲಾಟೆ ನಡೆದಿದೆ. ನಿತೇಶ್ ತಾಯಿ, ತಂದೆ, ಅಣ್ಣ ಮನೆಯಲ್ಲಿದ್ದ ವೇಳೆ ಗಲಾಟೆ ನಡೆದಿದ್ದು, ಈ ವೇಳೆ ನಿತೇಶ್ ಮನೆಯ ಬಾಲ್ಕನಿಗೆ ಅಳವಡಿಸಿದ್ದ ಅಲ್ಯುಮಿನಿಯಮ್ ಪಾರ್ಟಿಷನ್ ನ ಗಾಜಿಗೆ ಬಲವಾಗಿ ಕೈಯಿಂದ ಹೊಡೆದಿದ್ದು ರಕ್ತ ಸ್ರಾವವಾಗಿದೆ. ಮನೆ ಮಂದಿ ಎಂದಿನಂತೆ ಇರುವ ಗಲಾಟೆ ಎಂದು ಗ್ರಹಿಸಿ ಕೋಣೆಯೊಳಗೆ ಸೇರಿದ್ದಾರೆ.
ಕೆಲಹೊತ್ತಿನ ಬಳಿಕ ನಿತೇಶ್ ರಕ್ತಸ್ರಾವವಾಗಿ ಪ್ರಾಣ ಸಂಕಟದಿಂದ ಚೀರಾಡಿದ್ದು ಆತನ ಕೂಗು ಕೇಳಿಸಿ ಮನೆಯ ಕೆಳ ಅಂತಸ್ತಿನಲ್ಲಿ ವಾಸವಿದ್ದ ನಿತೇಶ್ ನ ಚಿಕ್ಕಪ್ಪನ ಮಗಳು ಮೇಲಕ್ಕೆ ಓಡಿ ಬಂದಿದ್ದಾರೆ. ರಕ್ತದ ಮಡುವಿನಲ್ಲಿದ್ದ ನಿತೇಶನ್ನು ಸ್ಥಳೀಯ ಬಜರಂಗದಳದ ಮುಖಂಡ ಅರ್ಜುನ್ ಮಾಡೂರು ಮತ್ತು ಸ್ನೇಹಿತರು ಆಂಬುಲೆನ್ಸಲ್ಲಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿತೇಶ್ ಸಾವನ್ನಪ್ಪಿದ್ದಾರೆ.
ವಿಧಿ ವಿಜ್ಞಾನ ತಂಡ ಮತ್ತು ಉಳ್ಳಾಲ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
In a tragic incident reported from Arasunagara in Madur, Ullal police limits, a 36-year-old man died due to excessive bleeding after slamming his hand on a glass partition in a fit of rage during a drunken altercation with his father and brother on Wednesday night.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am