ಬ್ರೇಕಿಂಗ್ ನ್ಯೂಸ್
04-07-25 10:54 pm Mangalore Correspondent ಕರಾವಳಿ
ಮಂಗಳೂರು, ಜುಲೈ 4 : ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ವ್ಯಕ್ತಿಯೊಬ್ಬರು ಬಂದು ನೀಡಿರುವ ದೂರು ಆಧರಿಸಿ ಧರ್ಮಸ್ಥಳ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ಈ ಬಗ್ಗೆ ದ.ಕ. ಎಸ್ಪಿ ಡಾ.ಅರುಣ್ ಪ್ರಕಟಣೆ ನೀಡಿದ್ದಾರೆ. ಧರ್ಮಸ್ಥಳ ಗ್ರಾಮದಲ್ಲಿ ಹಿಂದಿನಿಂದ ಹಲವಾರು ಅಪರಾಧ ಕೃತ್ಯಗಳು ನಡೆದಿದ್ದು, ದೂರುದಾರರಿಗೆ ಜೀವ ಬೆದರಿಕೆ ಒಡ್ಡಿ, ಸದ್ರಿ ಅಪರಾಧ ಕೃತ್ಯಗಳ ಮೃತದೇಹಗಳನ್ನು ರಹಸ್ಯವಾಗಿ ವಿಲೇವಾರಿ ಮಾಡಿಸಿರುತ್ತಾರೆ. ಈ ರೀತಿಯಲ್ಲಿ ಹಲವಾರು ಮೃತದೇಹಗಳನ್ನು ವಿಲೇವಾರಿ ಮಾಡಿದ್ದು, ಪ್ರಸ್ತುತ ದೂರುದಾರರಿಗೆ ಪಾಪಪ್ರಜ್ಞೆ ಕಾಡುತ್ತಿರುವುದರಿಂದ, ತನಗೆ ಹಾಗೂ ತನ್ನ ಕುಟುಂಬಕ್ಕೆ ಕಾನೂನಾತ್ಮಕವಾಗಿ ರಕ್ಷಣೆ ದೊರೆತ ಕೂಡಲೇ, ಸದ್ರಿ ಅಪರಾಧ ಕೃತ್ಯಗಳನ್ನು ನಡೆಸಿದವರ ಸಂಪೂರ್ಣ ಮಾಹಿತಿಯನ್ನು ಹಾಗೂ ತಾನು ಮೃತದೇಹಗಳನ್ನು ವಿಲೇವಾರಿ ಮಾಡಿದ ಸ್ಥಳಗಳನ್ನು ಪೊಲೀಸರಿಗೆ ತೋರಿಸಲು ಸಿದ್ಧವಿರುವುದಾಗಿ ಜುಲೈ 3ರಂದು ಪೊಲೀಸ್ ಅಧೀಕ್ಷಕರ ಕಚೇರಿಗೆ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಗೆ ಸದ್ರಿ ವ್ಯಕ್ತಿಯಿಂದ ದೂರು ಸಲ್ಲಿಕೆಯಾಗಿರುತ್ತದೆ.
ದೂರಿನ ಬಗ್ಗೆ ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡು ಜುಲೈ 4ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 39/2025, ಕಲಂ: 211(a) ಬಿ ಎನ್ ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನುಕ್ರಮ ಜರಗಿಸಲಾಗುವುದು. ಸದ್ರಿ ದೂರುದಾರರು ದೂರಿನಲ್ಲಿ ತನ್ನ ಹೆಸರು ಮತ್ತು ಮಾಹಿತಿಯನ್ನು ಗೌಪ್ಯವಾಗಿ ಇಡುವಂತೆ ವಿನಂತಿಸಿಕೊಂಡ ಮೇರೆಗೆ, ದೂರುದಾರರ ಮಾಹಿತಿಯನ್ನು ಪೊಲೀಸ್ ಮೂಲಗಳಿಂದ ನೀಡಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ಎಸ್ಪಿ ತಿಳಿಸಿದ್ದಾರೆ.
A First Information Report (FIR) has been registered at the Dharmasthala Police Station based on a chilling complaint submitted by an individual, alleging a series of criminal activities including the secret disposal of multiple dead bodies over the years in Dharmasthala village. Dakshina Kannada Superintendent of Police, Dr. Arun, confirmed the development in an official press release. According to the complaint, the individual alleges that numerous crimes, including murders, have taken place in the area over a long period.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm