ಬ್ರೇಕಿಂಗ್ ನ್ಯೂಸ್
05-07-25 02:32 pm Mangalore Correspondent ಕರಾವಳಿ
ಮಂಗಳೂರು, ಜುಲೈ 5 : ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರು ನಾಮಕರಣ ಮಾಡುವ ಬಗ್ಗೆ ಹೋರಾಟಗಳು ತೀವ್ರಗೊಂಡಿದ್ದು, ಸರ್ವ ಧರ್ಮ-ಪಕ್ಷ -ಸಂಘಟನೆಗಳು ಒಗ್ಗೂಡಿರುವ "ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿ" ಸಂಚಾಲಕನಾಗಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತೇನೆಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಪೋರ್ಚುಗೀಸರು, ಬ್ರಿಟಿಷರ ಕಾಲದಲ್ಲಿ ತುಳುನಾಡು ಹೋಗಿ ಸೌತ್ ಕೆನರಾ ಆಯ್ತು, ಸ್ವತಂತ್ರ ಭಾರತದಲ್ಲಿ ರಾಜ್ಯ ವಿಂಗಡಣೆ ಸಂದರ್ಭದಲ್ಲಿ ಸೌತ್ ಕೆನರಾ ದಕ್ಷಿಣ ಕನ್ನಡವಾಗಿ ಬದಲಾಯಿತು, ಹಾಗಾಗಿ ಈ ನೆಲಕ್ಕೂ ದಕ್ಷಿಣ ಕನ್ನಡ ಹೆಸರಿಗೂ ಯಾವುದೇ ಸಂಬಂಧವಿಲ್ಲ ಎಂದು ಇತಿಹಾಸದ ಪುಟಗಳು ಹೇಳುತ್ತವೆ. ಜಿಲ್ಲೆಗೆ ಮರು ನಾಮಕರಣದ ಬಗ್ಗೆ ಹೋರಾಟಗಳು ನಿನ್ನೆ ಮೊನ್ನೆ ಆರಂಭವಾಗಿದ್ದಲ್ಲ. ಸುಮಾರು ನೂರು ವರ್ಷಗಳ ಹಿಂದಿನಿಂದಲೂ ಆಗ್ರಹವಿದೆ. ಜಿಲ್ಲೆಯ ಹೆಸರು ಬದಲಾವಣೆಯಾದಲ್ಲಿ ತುಳು
ಭಾಷೆಯ ಹೋರಾಟಕ್ಕೂ ಇನ್ನಷ್ಟು ಪುಷ್ಟಿ ಸಿಗಲಿದೆ. ಈಗಾಗಲೇ ನಮ್ಮ ಜಿಲ್ಲೆಗೆ ಆರ್ಥಿಕವಾಗಿ ಬಹಳಷ್ಟು ಅನ್ಯಾಯವಾಗುತ್ತಿದ್ದರೂ ಸಹಿಸಿಕೊಂಡಿದ್ದೇವೆ. ಆದರೆ ಇಲ್ಲಿನ ಸಂಸ್ಕೃತಿಯ ಮೇಲೆ ಅನ್ಯಾಯವಾಗುವುದನ್ನು ಸ್ವಾಭಿಮಾನಿಗಳಾದ ತುಳುವರು ಸಹಿಸುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉತ್ತರ ಪ್ರದೇಶ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಸ್ಥಳೀಯ ಹೆಸರುಗಳ ಮರು ನಾಮಕರಣಕ್ಕೆ ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆಯೋ ಅದೇ ರೀತಿಯಲ್ಲೇ ಕಾನೂನು ಬದ್ಧವಾಗಿ ಈ ಪ್ರಕ್ರಿಯೆಗಳು ನಡೆಯಲಿ. ಅದಕ್ಕೆ ಅಗತ್ಯವಿರುವ ಯಾವುದೇ ಕಾರ್ಯಕ್ಕೂ ಶಾಸಕನಾಗಿ, ಸಮಿತಿಯ ಸಂಚಾಲಕನಾಗಿ ನಾನು ಬದ್ಧನಾಗಿದ್ದೇನೆ. ಇದೇ ಸಂದರ್ಭದಲ್ಲಿ ತುಳುನಾಡಿನ ಪ್ರತಿಯೊಂದು ಮನೆಯ, ಪ್ರತಿಯೊಬ್ಬ ತುಳುವನೂ ಈ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದು ವಿನಂತಿಸುತ್ತಾ, ಕೂಡಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಸಮಸ್ತ ತುಳುವರ ಅಭಿಪ್ರಾಯಕ್ಕೆ ಬೆಲೆ ನೀಡಬೇಕು ಎಂದು ಶಾಸಕರು ಸರ್ಕಾರವನ್ನು ಆಗ್ರಹಿಸಿದ್ದಾರೆ.
As demands intensify to rename Dakshina Kannada district as "Mangaluru," BJP MLA Vedavyas Kamath has extended full support to the cause, stating that the existing name has no cultural or historical connection to Tulu Nadu.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
12-03-26 08:33 am
HK News Staffer
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am