ಬ್ರೇಕಿಂಗ್ ನ್ಯೂಸ್
05-07-25 02:32 pm Mangalore Correspondent ಕರಾವಳಿ
ಮಂಗಳೂರು, ಜುಲೈ 5 : ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರು ನಾಮಕರಣ ಮಾಡುವ ಬಗ್ಗೆ ಹೋರಾಟಗಳು ತೀವ್ರಗೊಂಡಿದ್ದು, ಸರ್ವ ಧರ್ಮ-ಪಕ್ಷ -ಸಂಘಟನೆಗಳು ಒಗ್ಗೂಡಿರುವ "ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿ" ಸಂಚಾಲಕನಾಗಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತೇನೆಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಪೋರ್ಚುಗೀಸರು, ಬ್ರಿಟಿಷರ ಕಾಲದಲ್ಲಿ ತುಳುನಾಡು ಹೋಗಿ ಸೌತ್ ಕೆನರಾ ಆಯ್ತು, ಸ್ವತಂತ್ರ ಭಾರತದಲ್ಲಿ ರಾಜ್ಯ ವಿಂಗಡಣೆ ಸಂದರ್ಭದಲ್ಲಿ ಸೌತ್ ಕೆನರಾ ದಕ್ಷಿಣ ಕನ್ನಡವಾಗಿ ಬದಲಾಯಿತು, ಹಾಗಾಗಿ ಈ ನೆಲಕ್ಕೂ ದಕ್ಷಿಣ ಕನ್ನಡ ಹೆಸರಿಗೂ ಯಾವುದೇ ಸಂಬಂಧವಿಲ್ಲ ಎಂದು ಇತಿಹಾಸದ ಪುಟಗಳು ಹೇಳುತ್ತವೆ. ಜಿಲ್ಲೆಗೆ ಮರು ನಾಮಕರಣದ ಬಗ್ಗೆ ಹೋರಾಟಗಳು ನಿನ್ನೆ ಮೊನ್ನೆ ಆರಂಭವಾಗಿದ್ದಲ್ಲ. ಸುಮಾರು ನೂರು ವರ್ಷಗಳ ಹಿಂದಿನಿಂದಲೂ ಆಗ್ರಹವಿದೆ. ಜಿಲ್ಲೆಯ ಹೆಸರು ಬದಲಾವಣೆಯಾದಲ್ಲಿ ತುಳು
ಭಾಷೆಯ ಹೋರಾಟಕ್ಕೂ ಇನ್ನಷ್ಟು ಪುಷ್ಟಿ ಸಿಗಲಿದೆ. ಈಗಾಗಲೇ ನಮ್ಮ ಜಿಲ್ಲೆಗೆ ಆರ್ಥಿಕವಾಗಿ ಬಹಳಷ್ಟು ಅನ್ಯಾಯವಾಗುತ್ತಿದ್ದರೂ ಸಹಿಸಿಕೊಂಡಿದ್ದೇವೆ. ಆದರೆ ಇಲ್ಲಿನ ಸಂಸ್ಕೃತಿಯ ಮೇಲೆ ಅನ್ಯಾಯವಾಗುವುದನ್ನು ಸ್ವಾಭಿಮಾನಿಗಳಾದ ತುಳುವರು ಸಹಿಸುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉತ್ತರ ಪ್ರದೇಶ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಸ್ಥಳೀಯ ಹೆಸರುಗಳ ಮರು ನಾಮಕರಣಕ್ಕೆ ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆಯೋ ಅದೇ ರೀತಿಯಲ್ಲೇ ಕಾನೂನು ಬದ್ಧವಾಗಿ ಈ ಪ್ರಕ್ರಿಯೆಗಳು ನಡೆಯಲಿ. ಅದಕ್ಕೆ ಅಗತ್ಯವಿರುವ ಯಾವುದೇ ಕಾರ್ಯಕ್ಕೂ ಶಾಸಕನಾಗಿ, ಸಮಿತಿಯ ಸಂಚಾಲಕನಾಗಿ ನಾನು ಬದ್ಧನಾಗಿದ್ದೇನೆ. ಇದೇ ಸಂದರ್ಭದಲ್ಲಿ ತುಳುನಾಡಿನ ಪ್ರತಿಯೊಂದು ಮನೆಯ, ಪ್ರತಿಯೊಬ್ಬ ತುಳುವನೂ ಈ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದು ವಿನಂತಿಸುತ್ತಾ, ಕೂಡಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಸಮಸ್ತ ತುಳುವರ ಅಭಿಪ್ರಾಯಕ್ಕೆ ಬೆಲೆ ನೀಡಬೇಕು ಎಂದು ಶಾಸಕರು ಸರ್ಕಾರವನ್ನು ಆಗ್ರಹಿಸಿದ್ದಾರೆ.
As demands intensify to rename Dakshina Kannada district as "Mangaluru," BJP MLA Vedavyas Kamath has extended full support to the cause, stating that the existing name has no cultural or historical connection to Tulu Nadu.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am