ಬ್ರೇಕಿಂಗ್ ನ್ಯೂಸ್
05-07-25 02:32 pm Mangalore Correspondent ಕರಾವಳಿ
ಮಂಗಳೂರು, ಜುಲೈ 5 : ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರು ನಾಮಕರಣ ಮಾಡುವ ಬಗ್ಗೆ ಹೋರಾಟಗಳು ತೀವ್ರಗೊಂಡಿದ್ದು, ಸರ್ವ ಧರ್ಮ-ಪಕ್ಷ -ಸಂಘಟನೆಗಳು ಒಗ್ಗೂಡಿರುವ "ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿ" ಸಂಚಾಲಕನಾಗಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತೇನೆಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಪೋರ್ಚುಗೀಸರು, ಬ್ರಿಟಿಷರ ಕಾಲದಲ್ಲಿ ತುಳುನಾಡು ಹೋಗಿ ಸೌತ್ ಕೆನರಾ ಆಯ್ತು, ಸ್ವತಂತ್ರ ಭಾರತದಲ್ಲಿ ರಾಜ್ಯ ವಿಂಗಡಣೆ ಸಂದರ್ಭದಲ್ಲಿ ಸೌತ್ ಕೆನರಾ ದಕ್ಷಿಣ ಕನ್ನಡವಾಗಿ ಬದಲಾಯಿತು, ಹಾಗಾಗಿ ಈ ನೆಲಕ್ಕೂ ದಕ್ಷಿಣ ಕನ್ನಡ ಹೆಸರಿಗೂ ಯಾವುದೇ ಸಂಬಂಧವಿಲ್ಲ ಎಂದು ಇತಿಹಾಸದ ಪುಟಗಳು ಹೇಳುತ್ತವೆ. ಜಿಲ್ಲೆಗೆ ಮರು ನಾಮಕರಣದ ಬಗ್ಗೆ ಹೋರಾಟಗಳು ನಿನ್ನೆ ಮೊನ್ನೆ ಆರಂಭವಾಗಿದ್ದಲ್ಲ. ಸುಮಾರು ನೂರು ವರ್ಷಗಳ ಹಿಂದಿನಿಂದಲೂ ಆಗ್ರಹವಿದೆ. ಜಿಲ್ಲೆಯ ಹೆಸರು ಬದಲಾವಣೆಯಾದಲ್ಲಿ ತುಳು
ಭಾಷೆಯ ಹೋರಾಟಕ್ಕೂ ಇನ್ನಷ್ಟು ಪುಷ್ಟಿ ಸಿಗಲಿದೆ. ಈಗಾಗಲೇ ನಮ್ಮ ಜಿಲ್ಲೆಗೆ ಆರ್ಥಿಕವಾಗಿ ಬಹಳಷ್ಟು ಅನ್ಯಾಯವಾಗುತ್ತಿದ್ದರೂ ಸಹಿಸಿಕೊಂಡಿದ್ದೇವೆ. ಆದರೆ ಇಲ್ಲಿನ ಸಂಸ್ಕೃತಿಯ ಮೇಲೆ ಅನ್ಯಾಯವಾಗುವುದನ್ನು ಸ್ವಾಭಿಮಾನಿಗಳಾದ ತುಳುವರು ಸಹಿಸುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉತ್ತರ ಪ್ರದೇಶ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಸ್ಥಳೀಯ ಹೆಸರುಗಳ ಮರು ನಾಮಕರಣಕ್ಕೆ ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆಯೋ ಅದೇ ರೀತಿಯಲ್ಲೇ ಕಾನೂನು ಬದ್ಧವಾಗಿ ಈ ಪ್ರಕ್ರಿಯೆಗಳು ನಡೆಯಲಿ. ಅದಕ್ಕೆ ಅಗತ್ಯವಿರುವ ಯಾವುದೇ ಕಾರ್ಯಕ್ಕೂ ಶಾಸಕನಾಗಿ, ಸಮಿತಿಯ ಸಂಚಾಲಕನಾಗಿ ನಾನು ಬದ್ಧನಾಗಿದ್ದೇನೆ. ಇದೇ ಸಂದರ್ಭದಲ್ಲಿ ತುಳುನಾಡಿನ ಪ್ರತಿಯೊಂದು ಮನೆಯ, ಪ್ರತಿಯೊಬ್ಬ ತುಳುವನೂ ಈ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದು ವಿನಂತಿಸುತ್ತಾ, ಕೂಡಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಸಮಸ್ತ ತುಳುವರ ಅಭಿಪ್ರಾಯಕ್ಕೆ ಬೆಲೆ ನೀಡಬೇಕು ಎಂದು ಶಾಸಕರು ಸರ್ಕಾರವನ್ನು ಆಗ್ರಹಿಸಿದ್ದಾರೆ.
As demands intensify to rename Dakshina Kannada district as "Mangaluru," BJP MLA Vedavyas Kamath has extended full support to the cause, stating that the existing name has no cultural or historical connection to Tulu Nadu.
10-07-25 09:53 pm
Bangalore Correspondent
ED Raid Congress MLA Subba Reddy: ಮಲೇಶ್ಯಾ, ಬ್...
10-07-25 12:45 pm
ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ ; ಅರ್ಧ ನ...
09-07-25 10:45 pm
Chamarajanagar Heart Attack, Student; 'ಹೃದಯ"ಕ...
09-07-25 04:12 pm
ಬೆಂಗಳೂರಿನಲ್ಲಿ ಐದು ಕಡೆ ಎನ್ಐಎ ದಾಳಿ ; ಭಯೋತ್ಪಾದಕ...
09-07-25 01:53 pm
11-07-25 12:08 pm
HK News Desk
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
Bangle Seller, Changur Baba Arrest, Uttar Pra...
10-07-25 03:24 pm
Amit Shah; ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್...
10-07-25 01:00 pm
ಗೋಮಾಂಸ ತಿನ್ನಿಸಿ ಮತಾಂತರಕ್ಕೆ ಯತ್ನ ; ಫೇಸ್ಬುಕ್ಕಲ್...
07-07-25 08:45 pm
10-07-25 07:23 pm
Mangalore Correspondent
Mangalore, Traffic Constable, Lokayukta, Tasl...
10-07-25 04:01 pm
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
Mangalore Home Minister Parameshwara, Peace M...
09-07-25 10:17 pm
Peace Meeting, Mangalore, Brijesh Chowta, Ash...
09-07-25 09:01 pm
10-07-25 08:09 pm
HK News Desk
Kerala Couple, Chit Fund Scam; ಚಿಟ್ ಫಂಡ್ ಹೆಸರ...
10-07-25 01:05 pm
Double Murder Hassan, crime: ಆಸ್ತಿ ವಿಚಾರಕ್ಕೆ...
10-07-25 12:04 pm
Drugs News, Mangalore: ಮಂಗಳೂರಿಗೆ ಡ್ರಗ್ಸ್ ಪೂರೈ...
09-07-25 10:56 pm
Kerala Chit Fund, Fraud, Mangalore: 20 ವರ್ಷಗಳ...
08-07-25 10:01 pm