ಬ್ರೇಕಿಂಗ್ ನ್ಯೂಸ್
05-07-25 02:32 pm Mangalore Correspondent ಕರಾವಳಿ
ಮಂಗಳೂರು, ಜುಲೈ 5 : ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರು ನಾಮಕರಣ ಮಾಡುವ ಬಗ್ಗೆ ಹೋರಾಟಗಳು ತೀವ್ರಗೊಂಡಿದ್ದು, ಸರ್ವ ಧರ್ಮ-ಪಕ್ಷ -ಸಂಘಟನೆಗಳು ಒಗ್ಗೂಡಿರುವ "ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿ" ಸಂಚಾಲಕನಾಗಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತೇನೆಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಪೋರ್ಚುಗೀಸರು, ಬ್ರಿಟಿಷರ ಕಾಲದಲ್ಲಿ ತುಳುನಾಡು ಹೋಗಿ ಸೌತ್ ಕೆನರಾ ಆಯ್ತು, ಸ್ವತಂತ್ರ ಭಾರತದಲ್ಲಿ ರಾಜ್ಯ ವಿಂಗಡಣೆ ಸಂದರ್ಭದಲ್ಲಿ ಸೌತ್ ಕೆನರಾ ದಕ್ಷಿಣ ಕನ್ನಡವಾಗಿ ಬದಲಾಯಿತು, ಹಾಗಾಗಿ ಈ ನೆಲಕ್ಕೂ ದಕ್ಷಿಣ ಕನ್ನಡ ಹೆಸರಿಗೂ ಯಾವುದೇ ಸಂಬಂಧವಿಲ್ಲ ಎಂದು ಇತಿಹಾಸದ ಪುಟಗಳು ಹೇಳುತ್ತವೆ. ಜಿಲ್ಲೆಗೆ ಮರು ನಾಮಕರಣದ ಬಗ್ಗೆ ಹೋರಾಟಗಳು ನಿನ್ನೆ ಮೊನ್ನೆ ಆರಂಭವಾಗಿದ್ದಲ್ಲ. ಸುಮಾರು ನೂರು ವರ್ಷಗಳ ಹಿಂದಿನಿಂದಲೂ ಆಗ್ರಹವಿದೆ. ಜಿಲ್ಲೆಯ ಹೆಸರು ಬದಲಾವಣೆಯಾದಲ್ಲಿ ತುಳು
ಭಾಷೆಯ ಹೋರಾಟಕ್ಕೂ ಇನ್ನಷ್ಟು ಪುಷ್ಟಿ ಸಿಗಲಿದೆ. ಈಗಾಗಲೇ ನಮ್ಮ ಜಿಲ್ಲೆಗೆ ಆರ್ಥಿಕವಾಗಿ ಬಹಳಷ್ಟು ಅನ್ಯಾಯವಾಗುತ್ತಿದ್ದರೂ ಸಹಿಸಿಕೊಂಡಿದ್ದೇವೆ. ಆದರೆ ಇಲ್ಲಿನ ಸಂಸ್ಕೃತಿಯ ಮೇಲೆ ಅನ್ಯಾಯವಾಗುವುದನ್ನು ಸ್ವಾಭಿಮಾನಿಗಳಾದ ತುಳುವರು ಸಹಿಸುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉತ್ತರ ಪ್ರದೇಶ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಸ್ಥಳೀಯ ಹೆಸರುಗಳ ಮರು ನಾಮಕರಣಕ್ಕೆ ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆಯೋ ಅದೇ ರೀತಿಯಲ್ಲೇ ಕಾನೂನು ಬದ್ಧವಾಗಿ ಈ ಪ್ರಕ್ರಿಯೆಗಳು ನಡೆಯಲಿ. ಅದಕ್ಕೆ ಅಗತ್ಯವಿರುವ ಯಾವುದೇ ಕಾರ್ಯಕ್ಕೂ ಶಾಸಕನಾಗಿ, ಸಮಿತಿಯ ಸಂಚಾಲಕನಾಗಿ ನಾನು ಬದ್ಧನಾಗಿದ್ದೇನೆ. ಇದೇ ಸಂದರ್ಭದಲ್ಲಿ ತುಳುನಾಡಿನ ಪ್ರತಿಯೊಂದು ಮನೆಯ, ಪ್ರತಿಯೊಬ್ಬ ತುಳುವನೂ ಈ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದು ವಿನಂತಿಸುತ್ತಾ, ಕೂಡಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಸಮಸ್ತ ತುಳುವರ ಅಭಿಪ್ರಾಯಕ್ಕೆ ಬೆಲೆ ನೀಡಬೇಕು ಎಂದು ಶಾಸಕರು ಸರ್ಕಾರವನ್ನು ಆಗ್ರಹಿಸಿದ್ದಾರೆ.
As demands intensify to rename Dakshina Kannada district as "Mangaluru," BJP MLA Vedavyas Kamath has extended full support to the cause, stating that the existing name has no cultural or historical connection to Tulu Nadu.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm