ಬ್ರೇಕಿಂಗ್ ನ್ಯೂಸ್
05-07-25 02:32 pm Mangalore Correspondent ಕರಾವಳಿ
ಮಂಗಳೂರು, ಜುಲೈ 5 : ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರು ನಾಮಕರಣ ಮಾಡುವ ಬಗ್ಗೆ ಹೋರಾಟಗಳು ತೀವ್ರಗೊಂಡಿದ್ದು, ಸರ್ವ ಧರ್ಮ-ಪಕ್ಷ -ಸಂಘಟನೆಗಳು ಒಗ್ಗೂಡಿರುವ "ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿ" ಸಂಚಾಲಕನಾಗಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತೇನೆಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಪೋರ್ಚುಗೀಸರು, ಬ್ರಿಟಿಷರ ಕಾಲದಲ್ಲಿ ತುಳುನಾಡು ಹೋಗಿ ಸೌತ್ ಕೆನರಾ ಆಯ್ತು, ಸ್ವತಂತ್ರ ಭಾರತದಲ್ಲಿ ರಾಜ್ಯ ವಿಂಗಡಣೆ ಸಂದರ್ಭದಲ್ಲಿ ಸೌತ್ ಕೆನರಾ ದಕ್ಷಿಣ ಕನ್ನಡವಾಗಿ ಬದಲಾಯಿತು, ಹಾಗಾಗಿ ಈ ನೆಲಕ್ಕೂ ದಕ್ಷಿಣ ಕನ್ನಡ ಹೆಸರಿಗೂ ಯಾವುದೇ ಸಂಬಂಧವಿಲ್ಲ ಎಂದು ಇತಿಹಾಸದ ಪುಟಗಳು ಹೇಳುತ್ತವೆ. ಜಿಲ್ಲೆಗೆ ಮರು ನಾಮಕರಣದ ಬಗ್ಗೆ ಹೋರಾಟಗಳು ನಿನ್ನೆ ಮೊನ್ನೆ ಆರಂಭವಾಗಿದ್ದಲ್ಲ. ಸುಮಾರು ನೂರು ವರ್ಷಗಳ ಹಿಂದಿನಿಂದಲೂ ಆಗ್ರಹವಿದೆ. ಜಿಲ್ಲೆಯ ಹೆಸರು ಬದಲಾವಣೆಯಾದಲ್ಲಿ ತುಳು
ಭಾಷೆಯ ಹೋರಾಟಕ್ಕೂ ಇನ್ನಷ್ಟು ಪುಷ್ಟಿ ಸಿಗಲಿದೆ. ಈಗಾಗಲೇ ನಮ್ಮ ಜಿಲ್ಲೆಗೆ ಆರ್ಥಿಕವಾಗಿ ಬಹಳಷ್ಟು ಅನ್ಯಾಯವಾಗುತ್ತಿದ್ದರೂ ಸಹಿಸಿಕೊಂಡಿದ್ದೇವೆ. ಆದರೆ ಇಲ್ಲಿನ ಸಂಸ್ಕೃತಿಯ ಮೇಲೆ ಅನ್ಯಾಯವಾಗುವುದನ್ನು ಸ್ವಾಭಿಮಾನಿಗಳಾದ ತುಳುವರು ಸಹಿಸುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉತ್ತರ ಪ್ರದೇಶ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಸ್ಥಳೀಯ ಹೆಸರುಗಳ ಮರು ನಾಮಕರಣಕ್ಕೆ ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆಯೋ ಅದೇ ರೀತಿಯಲ್ಲೇ ಕಾನೂನು ಬದ್ಧವಾಗಿ ಈ ಪ್ರಕ್ರಿಯೆಗಳು ನಡೆಯಲಿ. ಅದಕ್ಕೆ ಅಗತ್ಯವಿರುವ ಯಾವುದೇ ಕಾರ್ಯಕ್ಕೂ ಶಾಸಕನಾಗಿ, ಸಮಿತಿಯ ಸಂಚಾಲಕನಾಗಿ ನಾನು ಬದ್ಧನಾಗಿದ್ದೇನೆ. ಇದೇ ಸಂದರ್ಭದಲ್ಲಿ ತುಳುನಾಡಿನ ಪ್ರತಿಯೊಂದು ಮನೆಯ, ಪ್ರತಿಯೊಬ್ಬ ತುಳುವನೂ ಈ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದು ವಿನಂತಿಸುತ್ತಾ, ಕೂಡಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಸಮಸ್ತ ತುಳುವರ ಅಭಿಪ್ರಾಯಕ್ಕೆ ಬೆಲೆ ನೀಡಬೇಕು ಎಂದು ಶಾಸಕರು ಸರ್ಕಾರವನ್ನು ಆಗ್ರಹಿಸಿದ್ದಾರೆ.
As demands intensify to rename Dakshina Kannada district as "Mangaluru," BJP MLA Vedavyas Kamath has extended full support to the cause, stating that the existing name has no cultural or historical connection to Tulu Nadu.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am