ಬ್ರೇಕಿಂಗ್ ನ್ಯೂಸ್
05-07-25 02:32 pm Mangalore Correspondent ಕರಾವಳಿ
ಮಂಗಳೂರು, ಜುಲೈ 5 : ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರು ನಾಮಕರಣ ಮಾಡುವ ಬಗ್ಗೆ ಹೋರಾಟಗಳು ತೀವ್ರಗೊಂಡಿದ್ದು, ಸರ್ವ ಧರ್ಮ-ಪಕ್ಷ -ಸಂಘಟನೆಗಳು ಒಗ್ಗೂಡಿರುವ "ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿ" ಸಂಚಾಲಕನಾಗಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತೇನೆಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಪೋರ್ಚುಗೀಸರು, ಬ್ರಿಟಿಷರ ಕಾಲದಲ್ಲಿ ತುಳುನಾಡು ಹೋಗಿ ಸೌತ್ ಕೆನರಾ ಆಯ್ತು, ಸ್ವತಂತ್ರ ಭಾರತದಲ್ಲಿ ರಾಜ್ಯ ವಿಂಗಡಣೆ ಸಂದರ್ಭದಲ್ಲಿ ಸೌತ್ ಕೆನರಾ ದಕ್ಷಿಣ ಕನ್ನಡವಾಗಿ ಬದಲಾಯಿತು, ಹಾಗಾಗಿ ಈ ನೆಲಕ್ಕೂ ದಕ್ಷಿಣ ಕನ್ನಡ ಹೆಸರಿಗೂ ಯಾವುದೇ ಸಂಬಂಧವಿಲ್ಲ ಎಂದು ಇತಿಹಾಸದ ಪುಟಗಳು ಹೇಳುತ್ತವೆ. ಜಿಲ್ಲೆಗೆ ಮರು ನಾಮಕರಣದ ಬಗ್ಗೆ ಹೋರಾಟಗಳು ನಿನ್ನೆ ಮೊನ್ನೆ ಆರಂಭವಾಗಿದ್ದಲ್ಲ. ಸುಮಾರು ನೂರು ವರ್ಷಗಳ ಹಿಂದಿನಿಂದಲೂ ಆಗ್ರಹವಿದೆ. ಜಿಲ್ಲೆಯ ಹೆಸರು ಬದಲಾವಣೆಯಾದಲ್ಲಿ ತುಳು
ಭಾಷೆಯ ಹೋರಾಟಕ್ಕೂ ಇನ್ನಷ್ಟು ಪುಷ್ಟಿ ಸಿಗಲಿದೆ. ಈಗಾಗಲೇ ನಮ್ಮ ಜಿಲ್ಲೆಗೆ ಆರ್ಥಿಕವಾಗಿ ಬಹಳಷ್ಟು ಅನ್ಯಾಯವಾಗುತ್ತಿದ್ದರೂ ಸಹಿಸಿಕೊಂಡಿದ್ದೇವೆ. ಆದರೆ ಇಲ್ಲಿನ ಸಂಸ್ಕೃತಿಯ ಮೇಲೆ ಅನ್ಯಾಯವಾಗುವುದನ್ನು ಸ್ವಾಭಿಮಾನಿಗಳಾದ ತುಳುವರು ಸಹಿಸುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉತ್ತರ ಪ್ರದೇಶ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಸ್ಥಳೀಯ ಹೆಸರುಗಳ ಮರು ನಾಮಕರಣಕ್ಕೆ ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆಯೋ ಅದೇ ರೀತಿಯಲ್ಲೇ ಕಾನೂನು ಬದ್ಧವಾಗಿ ಈ ಪ್ರಕ್ರಿಯೆಗಳು ನಡೆಯಲಿ. ಅದಕ್ಕೆ ಅಗತ್ಯವಿರುವ ಯಾವುದೇ ಕಾರ್ಯಕ್ಕೂ ಶಾಸಕನಾಗಿ, ಸಮಿತಿಯ ಸಂಚಾಲಕನಾಗಿ ನಾನು ಬದ್ಧನಾಗಿದ್ದೇನೆ. ಇದೇ ಸಂದರ್ಭದಲ್ಲಿ ತುಳುನಾಡಿನ ಪ್ರತಿಯೊಂದು ಮನೆಯ, ಪ್ರತಿಯೊಬ್ಬ ತುಳುವನೂ ಈ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದು ವಿನಂತಿಸುತ್ತಾ, ಕೂಡಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಸಮಸ್ತ ತುಳುವರ ಅಭಿಪ್ರಾಯಕ್ಕೆ ಬೆಲೆ ನೀಡಬೇಕು ಎಂದು ಶಾಸಕರು ಸರ್ಕಾರವನ್ನು ಆಗ್ರಹಿಸಿದ್ದಾರೆ.
As demands intensify to rename Dakshina Kannada district as "Mangaluru," BJP MLA Vedavyas Kamath has extended full support to the cause, stating that the existing name has no cultural or historical connection to Tulu Nadu.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm