ಬ್ರೇಕಿಂಗ್ ನ್ಯೂಸ್
            
                        08-07-25 10:15 am Mangalore Correspondent ಕರಾವಳಿ
            ಮಂಗಳೂರು, ಜು.8 : ಪಿಯುಸಿ ಓದುತ್ತಿದ್ದ ಹುಡುಗ ಸೋಮವಾರ ಸಂಜೆ ಕಾಲೇಜಿನಿಂದ ಮನೆಗೆ ಬಂದು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಂಬೆ ಬಳಿ ನಡೆದಿದೆ. ತಂದೆ, ತಾಯಿ ಕೆಲಸಕ್ಕೆ ಹೋಗಿದ್ದರಿಂದ ಈ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ.
ತುಂಬೆಯ ಪರ್ಲಕ್ಕೆ ನಿವಾಸಿಗಳಾದ ಕರುಣಾಕರ ಗಟ್ಟಿ ಮತ್ತು ಶೋಭಾ ಗಟ್ಟಿ ದಂಪತಿಯ ಏಕೈಕ ಪುತ್ರ ತೇಜಸ್ ಗಟ್ಟಿ(17) ಮೃತ ವಿದ್ಯಾರ್ಥಿ. ತೇಜಸ್ ಗಟ್ಟಿ ಮೊಡಂಕಾಪು ಕಾಲೇಜಿನಲ್ಲಿ ಪಿಯುಸಿ ಎರಡನೇ ವರುಷದ ವಿದ್ಯಾರ್ಥಿಯಾಗಿದ್ದ. ನಿನ್ನೆ ಸಂಜೆ ಕಾಲೇಜಿನಿಂದ ಮನೆಗೆ ಬಂದಿದ್ದ ತೇಜಸ್ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಸಂಜೆ ವೇಳೆಗೆ ತಂದೆ ಕರುಣಾಕರ ಅವರು ಎಂದಿನಂತೆ ಮನೆಗೆ ಬಂದಾಗ ಬಾಗಿಲು ತೆರದಿದ್ದು ಒಳಗೆ ನೋಡಿದಾಗ ತೇಜಸ್ ಆತ್ಮಹತ್ಯೆಗೈದಿರೋದು ಗೊತ್ತಾಗಿದೆ.
ಕಳೆದ ಶನಿವಾರ ಕಾಲೇಜಿನಲ್ಲಿ ತೇಜಸ್ ಮೊಬೈಲ್ ಬಳಸಿ ಉಪನ್ಯಾಸಕರಿಗೆ ಸಿಕ್ಕಿಬಿದ್ದು, ಕಾಲೇಜು ಆಡಳಿತದವರು ಮೊಬೈಲ್ ವಶಪಡಿಸಿ ಪೋಷಕರಿಗೆ ವಿಚಾರ ತಿಳಿಸಿದ್ದರಂತೆ. ಕಾಲೇಜು ಆಡಳಿತವು ಸೋಮವಾರವೂ ಮೊಬೈಲನ್ನ ತೇಜಸ್ ಗೆ ವಾಪಸ್ ನೀಡಿರಲಿಲ್ಲವೆಂಬುವುದು ಒಂದು ನೆಪವಾಗಿದ್ದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ತಮಗೆ ಆಸರೆಯಾಗ ಬೇಕಿದ್ದ ಏಕೈಕ ಪುತ್ರ ಹದಿಹರೆಯದಲ್ಲೇ ಆತ್ಮಹತ್ಯೆಗೈದಿರುವುದನ್ನ ಅರಗಿಸಿಕೊಳ್ಳಲಾರದೆ ಪೋಷಕರು ದುಃಖ ಸಾಗರದಲ್ಲಿ ಮುಳುಗಿದ್ದಾರೆ.
            
            
            In a heartbreaking incident reported from Thumbe near Mangaluru, a second-year PUC student allegedly died by suicide after returning home from college on Monday evening. The 17-year-old boy was found hanging from the ceiling fan in his room while his parents were away at work.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm