ಬ್ರೇಕಿಂಗ್ ನ್ಯೂಸ್
11-07-25 08:55 pm Mangalore Correspondent ಕರಾವಳಿ
ಮಂಗಳೂರು, ಜುಲೈ.11: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ವ್ಯಕ್ತಿ ಬೆಳ್ತಂಗಡಿ ಕೋರ್ಟಿಗೆ ಹಾಜರಾಗಿದ್ದು ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದಾರೆ.
ಇಬ್ಬರು ವಕೀಲರ ಜೊತೆಗೆ ಶುಕ್ರವಾರ ಸಂಜೆ 4 ಗಂಟೆಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ್ದು ಮುಖಕ್ಕೆ ಪೂರ್ತಿಯಾಗಿ ಕರಿಕೋಟು ಮುಚ್ಚಿಕೊಂಡು ಬಂದು ನ್ಯಾಯಾಧೀಶರ ಎದುರು ಹೇಳಿಕೆ ನೀಡಿದ್ದಾರೆ. ಇನ್ನೋವಾ ಕಾರಿನಲ್ಲಿ ಬಂದ ಆ ವ್ಯಕ್ತಿಗೆ ಪೊಲೀಸರು ಬಿಗಿ ಭದ್ರತೆ ನೀಡಿದ್ದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ.
ಸೂಟ್ ಕೇಸ್ ರೀತಿಯ ಬ್ಯಾಗ್ ಜೊತೆಗೆ ನ್ಯಾಯಾಲಯಕ್ಕೆ ಬಂದ ಆ ವ್ಯಕ್ತಿ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್ ಕೆ. ಅವರ ಮುಂದೆ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಜುಲೈ 4ರಂದು ಬೆಂಗಳೂರಿನ ವಕೀಲರ ಜೊತೆಗೆ ಧರ್ಮಸ್ಥಳ ಠಾಣೆಗೆ ಹಾಜರಾಗಿದ್ದ ಆ ವ್ಯಕ್ತಿ ಧರ್ಮಸ್ಥಳ ಗ್ರಾಮದಲ್ಲಿ ನಡೆದ ನೂರಾರು ಕೊಲೆಗಳು ಮತ್ತು ಆ ಹೆಣಗಳನ್ನು ಹೂತು ಹಾಕಿದ್ದಕ್ಕೆ ಸಾಕ್ಷಿ ಹೇಳುತ್ತೇನೆಂದು ದೂರಿನಲ್ಲಿ ಹೇಳಿದ್ದರು.
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನೂರಾರು ಕೊಲೆಗಳಿಗೆ ಈ ವ್ಯಕ್ತಿಯ ದೂರು ಸಾಕ್ಷಿ ಎನ್ನಲಾಗುತ್ತಿದ್ದು ರಾಷ್ಟ್ರೀಯ ವಾಹಿನಿಯಲ್ಲಿ ಸುದ್ದಿಯಾದ ನಂತರ ಭಾರೀ ಸಂಚಲನ ಸೃಷ್ಟಿಯಾಗಿದೆ. ಜೊತೆಗೆ ಬಂದಿದ್ದ ವಕೀಲರು ಆ ವ್ಯಕ್ತಿಗೆ ಪೊಲೀಸ್ ರಕ್ಷಣೆ ನೀಡಬೇಕೆಂದು ದ.ಕ. ಎಸ್ಪಿಗೆ ಕೇಳಿಕೊಂಡಿದ್ದು ಅದಕ್ಕೆ ಒಪ್ಪಿಗೆಯನ್ನೂ ನೀಡಿದ್ದಾರೆ.
A man who recently made shocking claims of having buried hundreds of bodies in Dharmasthala appeared before the Beltangady court on Friday. He gave a statement to the judge while keeping his face completely covered. Arriving at the court around 4 PM in an Innova vehicle, the man was accompanied by two lawyers and carried a suitcase-style bag. Tight police security was provided during his court appearance.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am