ಬ್ರೇಕಿಂಗ್ ನ್ಯೂಸ್
11-07-25 08:55 pm Mangalore Correspondent ಕರಾವಳಿ
ಮಂಗಳೂರು, ಜುಲೈ.11: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ವ್ಯಕ್ತಿ ಬೆಳ್ತಂಗಡಿ ಕೋರ್ಟಿಗೆ ಹಾಜರಾಗಿದ್ದು ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದಾರೆ.
ಇಬ್ಬರು ವಕೀಲರ ಜೊತೆಗೆ ಶುಕ್ರವಾರ ಸಂಜೆ 4 ಗಂಟೆಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ್ದು ಮುಖಕ್ಕೆ ಪೂರ್ತಿಯಾಗಿ ಕರಿಕೋಟು ಮುಚ್ಚಿಕೊಂಡು ಬಂದು ನ್ಯಾಯಾಧೀಶರ ಎದುರು ಹೇಳಿಕೆ ನೀಡಿದ್ದಾರೆ. ಇನ್ನೋವಾ ಕಾರಿನಲ್ಲಿ ಬಂದ ಆ ವ್ಯಕ್ತಿಗೆ ಪೊಲೀಸರು ಬಿಗಿ ಭದ್ರತೆ ನೀಡಿದ್ದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ.
ಸೂಟ್ ಕೇಸ್ ರೀತಿಯ ಬ್ಯಾಗ್ ಜೊತೆಗೆ ನ್ಯಾಯಾಲಯಕ್ಕೆ ಬಂದ ಆ ವ್ಯಕ್ತಿ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್ ಕೆ. ಅವರ ಮುಂದೆ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಜುಲೈ 4ರಂದು ಬೆಂಗಳೂರಿನ ವಕೀಲರ ಜೊತೆಗೆ ಧರ್ಮಸ್ಥಳ ಠಾಣೆಗೆ ಹಾಜರಾಗಿದ್ದ ಆ ವ್ಯಕ್ತಿ ಧರ್ಮಸ್ಥಳ ಗ್ರಾಮದಲ್ಲಿ ನಡೆದ ನೂರಾರು ಕೊಲೆಗಳು ಮತ್ತು ಆ ಹೆಣಗಳನ್ನು ಹೂತು ಹಾಕಿದ್ದಕ್ಕೆ ಸಾಕ್ಷಿ ಹೇಳುತ್ತೇನೆಂದು ದೂರಿನಲ್ಲಿ ಹೇಳಿದ್ದರು.
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನೂರಾರು ಕೊಲೆಗಳಿಗೆ ಈ ವ್ಯಕ್ತಿಯ ದೂರು ಸಾಕ್ಷಿ ಎನ್ನಲಾಗುತ್ತಿದ್ದು ರಾಷ್ಟ್ರೀಯ ವಾಹಿನಿಯಲ್ಲಿ ಸುದ್ದಿಯಾದ ನಂತರ ಭಾರೀ ಸಂಚಲನ ಸೃಷ್ಟಿಯಾಗಿದೆ. ಜೊತೆಗೆ ಬಂದಿದ್ದ ವಕೀಲರು ಆ ವ್ಯಕ್ತಿಗೆ ಪೊಲೀಸ್ ರಕ್ಷಣೆ ನೀಡಬೇಕೆಂದು ದ.ಕ. ಎಸ್ಪಿಗೆ ಕೇಳಿಕೊಂಡಿದ್ದು ಅದಕ್ಕೆ ಒಪ್ಪಿಗೆಯನ್ನೂ ನೀಡಿದ್ದಾರೆ.
A man who recently made shocking claims of having buried hundreds of bodies in Dharmasthala appeared before the Beltangady court on Friday. He gave a statement to the judge while keeping his face completely covered. Arriving at the court around 4 PM in an Innova vehicle, the man was accompanied by two lawyers and carried a suitcase-style bag. Tight police security was provided during his court appearance.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm