ಬ್ರೇಕಿಂಗ್ ನ್ಯೂಸ್
            
                        11-07-25 08:55 pm Mangalore Correspondent ಕರಾವಳಿ
            ಮಂಗಳೂರು, ಜುಲೈ.11: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ವ್ಯಕ್ತಿ ಬೆಳ್ತಂಗಡಿ ಕೋರ್ಟಿಗೆ ಹಾಜರಾಗಿದ್ದು ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದಾರೆ.
ಇಬ್ಬರು ವಕೀಲರ ಜೊತೆಗೆ ಶುಕ್ರವಾರ ಸಂಜೆ 4 ಗಂಟೆಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ್ದು ಮುಖಕ್ಕೆ ಪೂರ್ತಿಯಾಗಿ ಕರಿಕೋಟು ಮುಚ್ಚಿಕೊಂಡು ಬಂದು ನ್ಯಾಯಾಧೀಶರ ಎದುರು ಹೇಳಿಕೆ ನೀಡಿದ್ದಾರೆ. ಇನ್ನೋವಾ ಕಾರಿನಲ್ಲಿ ಬಂದ ಆ ವ್ಯಕ್ತಿಗೆ ಪೊಲೀಸರು ಬಿಗಿ ಭದ್ರತೆ ನೀಡಿದ್ದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ.
ಸೂಟ್ ಕೇಸ್ ರೀತಿಯ ಬ್ಯಾಗ್ ಜೊತೆಗೆ ನ್ಯಾಯಾಲಯಕ್ಕೆ ಬಂದ ಆ ವ್ಯಕ್ತಿ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್ ಕೆ. ಅವರ ಮುಂದೆ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಜುಲೈ 4ರಂದು ಬೆಂಗಳೂರಿನ ವಕೀಲರ ಜೊತೆಗೆ ಧರ್ಮಸ್ಥಳ ಠಾಣೆಗೆ ಹಾಜರಾಗಿದ್ದ ಆ ವ್ಯಕ್ತಿ ಧರ್ಮಸ್ಥಳ ಗ್ರಾಮದಲ್ಲಿ ನಡೆದ ನೂರಾರು ಕೊಲೆಗಳು ಮತ್ತು ಆ ಹೆಣಗಳನ್ನು ಹೂತು ಹಾಕಿದ್ದಕ್ಕೆ ಸಾಕ್ಷಿ ಹೇಳುತ್ತೇನೆಂದು ದೂರಿನಲ್ಲಿ ಹೇಳಿದ್ದರು.
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನೂರಾರು ಕೊಲೆಗಳಿಗೆ ಈ ವ್ಯಕ್ತಿಯ ದೂರು ಸಾಕ್ಷಿ ಎನ್ನಲಾಗುತ್ತಿದ್ದು ರಾಷ್ಟ್ರೀಯ ವಾಹಿನಿಯಲ್ಲಿ ಸುದ್ದಿಯಾದ ನಂತರ ಭಾರೀ ಸಂಚಲನ ಸೃಷ್ಟಿಯಾಗಿದೆ. ಜೊತೆಗೆ ಬಂದಿದ್ದ ವಕೀಲರು ಆ ವ್ಯಕ್ತಿಗೆ ಪೊಲೀಸ್ ರಕ್ಷಣೆ ನೀಡಬೇಕೆಂದು ದ.ಕ. ಎಸ್ಪಿಗೆ ಕೇಳಿಕೊಂಡಿದ್ದು ಅದಕ್ಕೆ ಒಪ್ಪಿಗೆಯನ್ನೂ ನೀಡಿದ್ದಾರೆ.
            
            
            A man who recently made shocking claims of having buried hundreds of bodies in Dharmasthala appeared before the Beltangady court on Friday. He gave a statement to the judge while keeping his face completely covered. Arriving at the court around 4 PM in an Innova vehicle, the man was accompanied by two lawyers and carried a suitcase-style bag. Tight police security was provided during his court appearance.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm