ಬ್ರೇಕಿಂಗ್ ನ್ಯೂಸ್
11-07-25 08:55 pm Mangalore Correspondent ಕರಾವಳಿ
ಮಂಗಳೂರು, ಜುಲೈ.11: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ವ್ಯಕ್ತಿ ಬೆಳ್ತಂಗಡಿ ಕೋರ್ಟಿಗೆ ಹಾಜರಾಗಿದ್ದು ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದಾರೆ.
ಇಬ್ಬರು ವಕೀಲರ ಜೊತೆಗೆ ಶುಕ್ರವಾರ ಸಂಜೆ 4 ಗಂಟೆಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ್ದು ಮುಖಕ್ಕೆ ಪೂರ್ತಿಯಾಗಿ ಕರಿಕೋಟು ಮುಚ್ಚಿಕೊಂಡು ಬಂದು ನ್ಯಾಯಾಧೀಶರ ಎದುರು ಹೇಳಿಕೆ ನೀಡಿದ್ದಾರೆ. ಇನ್ನೋವಾ ಕಾರಿನಲ್ಲಿ ಬಂದ ಆ ವ್ಯಕ್ತಿಗೆ ಪೊಲೀಸರು ಬಿಗಿ ಭದ್ರತೆ ನೀಡಿದ್ದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ.
ಸೂಟ್ ಕೇಸ್ ರೀತಿಯ ಬ್ಯಾಗ್ ಜೊತೆಗೆ ನ್ಯಾಯಾಲಯಕ್ಕೆ ಬಂದ ಆ ವ್ಯಕ್ತಿ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್ ಕೆ. ಅವರ ಮುಂದೆ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಜುಲೈ 4ರಂದು ಬೆಂಗಳೂರಿನ ವಕೀಲರ ಜೊತೆಗೆ ಧರ್ಮಸ್ಥಳ ಠಾಣೆಗೆ ಹಾಜರಾಗಿದ್ದ ಆ ವ್ಯಕ್ತಿ ಧರ್ಮಸ್ಥಳ ಗ್ರಾಮದಲ್ಲಿ ನಡೆದ ನೂರಾರು ಕೊಲೆಗಳು ಮತ್ತು ಆ ಹೆಣಗಳನ್ನು ಹೂತು ಹಾಕಿದ್ದಕ್ಕೆ ಸಾಕ್ಷಿ ಹೇಳುತ್ತೇನೆಂದು ದೂರಿನಲ್ಲಿ ಹೇಳಿದ್ದರು.
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನೂರಾರು ಕೊಲೆಗಳಿಗೆ ಈ ವ್ಯಕ್ತಿಯ ದೂರು ಸಾಕ್ಷಿ ಎನ್ನಲಾಗುತ್ತಿದ್ದು ರಾಷ್ಟ್ರೀಯ ವಾಹಿನಿಯಲ್ಲಿ ಸುದ್ದಿಯಾದ ನಂತರ ಭಾರೀ ಸಂಚಲನ ಸೃಷ್ಟಿಯಾಗಿದೆ. ಜೊತೆಗೆ ಬಂದಿದ್ದ ವಕೀಲರು ಆ ವ್ಯಕ್ತಿಗೆ ಪೊಲೀಸ್ ರಕ್ಷಣೆ ನೀಡಬೇಕೆಂದು ದ.ಕ. ಎಸ್ಪಿಗೆ ಕೇಳಿಕೊಂಡಿದ್ದು ಅದಕ್ಕೆ ಒಪ್ಪಿಗೆಯನ್ನೂ ನೀಡಿದ್ದಾರೆ.
A man who recently made shocking claims of having buried hundreds of bodies in Dharmasthala appeared before the Beltangady court on Friday. He gave a statement to the judge while keeping his face completely covered. Arriving at the court around 4 PM in an Innova vehicle, the man was accompanied by two lawyers and carried a suitcase-style bag. Tight police security was provided during his court appearance.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm