ಬ್ರೇಕಿಂಗ್ ನ್ಯೂಸ್
12-07-25 11:00 pm Mangalore Correspondent ಕರಾವಳಿ
ಮಂಗಳೂರು, ಜುಲೈ 12 : ಧರ್ಮಸ್ಥಳದಲ್ಲಿ ಹಲವು ಕೊಲೆಗಳನ್ನು ಮಾಡಿದ್ದು ಹೆಣಗಳನ್ನು ತಾನೇ ಹೂತು ಹಾಕಿದ್ದೇನೆಂದು ವ್ಯಕ್ತಿಯೊಬ್ಬರು ನೀಡಿರುವ ದೂರಿನ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈಗಾಗಲೇ ತಾನು ಅಗೆದು ತೆಗೆದಿದ್ದೇನೆಂದು ಹೇಳಿರುವ ಅಸ್ಥಿಪಂಜರದ ತುಂಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ನಡುವೆ, ಘಟನೆ ಕುರಿತಾಗಿ ಆಭಾಸಕರ ವರದಿ ಮಾಡಿರುವ ಬಗ್ಗೆ ಯೂಟ್ಯೂಬರ್ ಸಮೀರ್ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ. ದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ, ಸಾಕ್ಷಿ ದೂರುದಾರರ ಬಗ್ಗೆ ಹಾಗೂ ಪ್ರಕರಣದ ಬಗ್ಗೆ ಇತರೆ ಹೆಚ್ಚಿನ ಮಾಹಿತಿಗಳನ್ನು ಒಳಗೊಂಡಿರುವ ಕಾಲ್ಪನಿಕವಾಗಿ (AI) ಸೃಷ್ಟಿಸಲಾದ, ಸುಳ್ಳು ಮಾಹಿತಿಗಳನ್ನೊಳಗೊಂಡ ವಿಡಿಯೋವನ್ನು ಯೂಟ್ಯೂಬ್ ಚಾನೆಲ್ ನಲ್ಲಿ ಪ್ರಸಾರ ಮಾಡಲಾಗಿದ್ದು ಉದ್ದೇಶಪೂರ್ವಕ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಹಿನ್ನೆಲೆಯಲ್ಲಿ ಸಮೀರ್ ಎಂ.ಡಿ ಎಂಬ ಯೂಟ್ಯೂಬರ್ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿಅ.ಕ್ರ : 42/2025 ಕಲಂ: 192, 240, 353(1)(b) bNS ರಂತೆ ಪ್ರಕರಣ ದಾಖಲಿಸಲಾಗಿದೆ.
ಇದಲ್ಲದೆ, ಜುಲೈ 11ರಂದು ಸಾಕ್ಷಿ ದೂರುದಾರರ ಪರವಾದ ವಕೀಲರು ಪತ್ರಿಕಾಗೋಷ್ಠಿಯಲ್ಲಿ ನೀಡಿರುವ ಕೆಲವು ಹೇಳಿಕೆಗಳು ತಪ್ಪಾಗಿರುತ್ತದೆ ಎಂದು ದ.ಕ. ಎಸ್ಪಿ ಅರುಣ್ ಅಭಿಪ್ರಾಯ ಪಟ್ಟಿದ್ದಾರೆ. ಇದೇ ವೇಳೆ, ಸದ್ರಿ ಪ್ರಕರಣದ ತನಿಖಾಧಿಕಾರಿಯನ್ನು ಬದಲಾಯಿಸಲು ಅಥವಾ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (SIT) ರಚಿಸಲು ಸಾರ್ವಜನಿಕ ಹಿತಾಸಕ್ತಿಯ ಹೆಸರಿನಲ್ಲಿ ಕೆಲವು ಗುಂಪನ್ನು ಪ್ರತಿನಿಧಿಸುತ್ತಿರುವ ವ್ಯಕ್ತಿಗಳು ಹೇಳುತ್ತಿರುವ ವಿಚಾರ ಗಮನಕ್ಕೆ ಬಂದಿದೆ. ಈ ಬಗ್ಗೆ ದೂರುದಾರರ ಪರವಾದ ವಕೀಲರಿಗೆ ಅರಿವಿದೆಯೇ ಎಂಬುದನ್ನು ಹಾಗೂ ಈ ಬಗ್ಗೆ ಸಾಕ್ಷಿ ದೂರುದಾರರ ನಿಲುವೇನು ಎಂಬುದನ್ನು ದೃಢಪಡಿಸಿಕೊಳ್ಳಬೇಕಾಗಿದೆ ಎಂದು ಎಸ್ಪಿ ಪ್ರತಿಕ್ರಿಯಿಸಿದ್ದಾರೆ.
Police have registered another FIR against YouTuber Sameer M.D. in connection with the ongoing investigation into the controversial Dharmasthala case, where a man claimed to have buried multiple murder victims himself. Authorities have already recovered skeletal remains based on his statements, and the investigation is ongoing.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm