ಬ್ರೇಕಿಂಗ್ ನ್ಯೂಸ್
13-07-25 11:11 pm Mangalore Correspondent ಕರಾವಳಿ
ಉಳ್ಳಾಲ, ಜು.13 : ರಾಜ್ಯದಾದ್ಯಂತ ಪ್ರಾದೇಶಿಕ/ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ ನಿರ್ಮಾಣ ನಡೆಯುತ್ತಿದ್ದು, ಹಲವೆಡೆ ಕಟ್ಟಡ ಕಾಮಗಾರಿ ಸಂಪೂರ್ಣಗೊಂಡರೆ, ಇನ್ನು ಕೆಲವೆಡೆ ಪ್ರಗತಿಯಲ್ಲಿವೆ. ರಾಜ್ಯದ ಸಾರಿಗೆ ಇಲಾಖೆಯ ಪ್ರತಿ ಅಧೀನ ಕಚೇರಿಗೂ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ನಿರ್ಮಿಸುವ ಉದ್ದೇಶದಡಿ, ರಾಜ್ಯದ ಏಳು ಕಡೆಗಳಲ್ಲಿ ಅತ್ಯಾಧುನಿಕ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥಗಳನ್ನು ನಿರ್ಮಿಸಲಾಗಿದ್ದು, ಪ್ರಸ್ತುತ ಅವು ಕಾರ್ಯ ನಿರ್ವಹಿಸುತ್ತಿವೆ. ಅದೇ ಮಾದರಿಯಲ್ಲಿ ಮಂಗಳೂರಿನಲ್ಲೂ 7.5 ಕೋಟಿ ವೆಚ್ಚದಲ್ಲಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ನಿರ್ಮಿಸಲಾಗಿದ್ದು ದೇಶದಲ್ಲೇ ಅತೀ ಹೆಚ್ಚು ಡ್ರೈವಿಂಗ್ ಟ್ರಾಕ್ ಇರೋ ರಾಜ್ಯ ನಮ್ಮದಾಗಿದೆ ಎಂದು ರಾಜ್ಯ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿದರು.
ದಕ್ಷಿಣ ಕನ್ನಡ ಸಾರಿಗೆ ಇಲಾಖೆಯಿಂದ ಪಜೀರು ಗ್ರಾಮದ ಕಂಬಳಪದವಿನಲ್ಲಿ ನಿರ್ಮಾಣಗೊಂಡಿರುವ ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥಗಳ ಕೇಂದ್ರವನ್ನು ಭಾನುವಾರ ಅವರು ಉದ್ಘಾಟಿಸಿ ಮಾತನಾಡಿದರು. ಪ್ರಾದೇಶಿಕ/ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು ಮೂವತ್ತಾರು ಕೋಟಿ ವೆಚ್ಚದಲ್ಲಿ ಧಾರವಾಡ ಪೂರ್ವ, ಕೊಪ್ಪಳ, ಚಿಂತಾಮಣಿ, ಶಿರಸಿ, ದಾಂಡೇಲಿ, ಭಾಲ್ಕಿ ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ಕಟ್ಟಡ ಕಾಮಗಾರಿ ಸಂಪೂರ್ಣಗೊಂಡಿದೆ. ಬೀದರ್, ಕಲಬುರಗಿ, ಯಾದಗಿರಿ, ಚಂದಾಪುರ, ಕೆಜಿಎಫ್ ಮತ್ತು ಬೆಳಗಾವಿ ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ಒಟ್ಟು ನಲ್ವತ್ತೆರಡು ಕೋಟಿ ರೂಪಾಯಿ ವೆಚ್ಚದ ಕಾಮಗಾರಿ ಪ್ರಗತಿಯಲ್ಲಿದೆ. ಇಪ್ಪತ್ತೆಂಟು ಕೋಟಿ ರೂಪಾಯಿ ವೆಚ್ಚದಲ್ಲಿ ರಾಣೆ ಬೆನ್ನೂರು, ಗೋಕಾಕ್, ಸಕಲೇಶಪುರ ಕಚೇರಿ ಕಟ್ಟಡ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಮಧುಗಿರಿ ಮತ್ತು ಹೊನ್ನಾವರ ಕಚೇರಿ ಕಟ್ಟಡದ ಕಾಮಗಾರಿಗಳನ್ನ ಶೀಘ್ರ ಪಾರಂಭಿಸಲಾಗುವುದೆಂದರು. ರಾಜ್ಯದ ಬೆಂಗಳೂರು, ಮಂಗಳೂರು ಸೇರಿದಂತೆ ಎಂಟು ನಗರಕ್ಕೆ ಕೇಂದ್ರದಿಂದ ತಲಾ ನೂರು ಇಲೆಕ್ಟ್ರಿಕ್ ಬಸ್ಸುಗಳು ಮಂಜೂರಾಗಿದ್ದು ಬಸ್ಸುಗಳ ನಿರ್ವಹಣೆಗೆ ನಮಗೆ ಡಿಪೋಗಳ ಅಗತ್ಯವಿದೆ. ಮಂಗಳೂರಿನಲ್ಲಿ ಜಾಗ ಕೊಟ್ಟರೆ ಡಿಪೋಗಳನ್ನ ಇಲಾಖೆಯಿಂದ ನಿರ್ಮಿಸಿಕೊಡುತ್ತೇವೆಂದರು.







ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ ವಿದ್ಯುನ್ಮಾನ ವಾಹನ ಚಾಲನಾ ಪಥ ನಿರ್ಮಾಣವು ಪರೋಕ್ಷವಾಗಿ ಕ್ಷೇತ್ರದ ಅಭಿವೃದ್ಧಿಗೆ ಪೂರಕ ಯೋಜನೆಯಾಗಿದೆ. ಜಿಲ್ಲೆಯ ಯಾವುದೇ ಮೂಲೆಯ ಜನರೂ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಇನ್ನು ಮುಂದೆ ಇಲ್ಲಿಗೆ ಬರಲೇಬೇಕು. ಜನರು ಇಲ್ಲಿಗೆ ಬರೋದರಿಂದ ಆರ್ಥಿಕ ಚಲನವಲನ ಹೆಚ್ಚಾಗಿ ಹೊಸ ಉದ್ಯಮಗಳೂ ಹುಟ್ಟಿಕೊಳ್ಳುತ್ತವೆ. ಹೊಸ ಕೇಂದ್ರದಲ್ಲಿ ಉದ್ಯೋಗಾವಕಾಶ ಇದ್ದರೆ ಅಧಿಕಾರಿಗಳು ಮೊದಲಿಗೆ ಊರವರನ್ನ ಪರಿಗಣಿಸಬೇಕು. ಮೊನ್ನೆಯಷ್ಟೇ ಉಳ್ಳಾಲದಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಗೃಹ ಸಚಿವರಿಂದ ಶಿಲಾನ್ಯಾಸ ನೆರವೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಬ್ಯಾರಿ ಭವನ ಮತ್ತು ಅಬ್ಬಕ್ಕ ಭವನ ನಿರ್ಮಾಣಕ್ಕೂ ಶೀಘ್ರದಲ್ಲೇ ಚಾಲನೆ ನೀಡಲಾಗುವುದೆಂದರು.
ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಾಜಿ ಸಚಿವ ಅಭಯಚಂದ್ರ ಜೈನ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿಎಸ್ ಗಟ್ಟಿ, ಪಜೀರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹಮ್ಮದ್ ರಫೀಕ್ ಮೊದಲಾದವರು ಉಪಸ್ಥಿತರಿದ್ದರು.
Karnataka now boasts the highest number of automated driving tracks in the country, said State Transport Minister Ramalinga Reddy, during the inauguration of a state-of-the-art Electric Vehicle Driving Test Track Centre at Kambalapadavu, Pajir village near Ullal in Dakshina Kannada.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm