ಬ್ರೇಕಿಂಗ್ ನ್ಯೂಸ್
14-07-25 07:56 pm Mangalore Correspondent ಕರಾವಳಿ
ಮಂಗಳೂರು, ಜುಲೈ 14 : ಎಂಆರ್ ಪಿಎಲ್ ಸ್ಥಾವರದಲ್ಲಿ ಗ್ಯಾಸ್ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಸಂಬಂಧಿಸಿ ಮೃತ ದೀಪಚಂದ್ರ ಭಾರ್ತಿ ಅವರ ಪತ್ನಿ ನೀಡಿದ ದೂರಿನಂತೆ ಎಂಆರ್ ಪಿಎಲ್ ಸಂಸ್ಥೆಯ ಆರು ಅಧಿಕಾರಿಗಳ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅನಿಲ ಸೋರಿಕೆ ಕುರಿತಾಗಿ ಪರಿಶೀಲಿಸಲು ತೆರಳಿದ್ದಾಗ ಉತ್ತರ ಪ್ರದೇಶದ ಪ್ರಯಾಗರಾಜ್ ಮೂಲದ ದೀಪಚಂದ್ರ ಭಾರ್ತಿ ಮತ್ತು ಕೇರಳ ಮೂಲದ ಬಿಜಿಲ್ ಪ್ರಸಾದ್ ಉಸಿರುಗಟ್ಟಿ ಸಾವನ್ನಪ್ಪಿದ್ದರು. ಇನ್ನಿಬ್ಬರು ಕಾರ್ಮಿಕರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.
ಮೃತ ದೀಪಚಂದ್ರ ಅವರ ಶವವನ್ನು ಪ್ರಯಾಗರಾಜ್ ಜಿಲ್ಲೆಯ ಅವರ ಊರಿಗೆ ಒಯ್ದ ಸಂದರ್ಭದಲ್ಲಿ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಎಂಆರ್ ಪಿಎಲ್ ಕಡೆಯಿಂದ ಜೊತೆಗೆ ತೆರಳಿದ್ದ ಸಹೋದ್ಯೋಗಿಗಳಿಗೆ ದಿಗ್ಬಂಧನ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂಆರ್ ಪಿಎಲ್ ಅಧಿಕಾರಿಗಳು ಯಾಕೆ ಬರಲಿಲ್ಲ. ಅವರ ನಿರ್ಲಕ್ಷ್ಯದಿಂದಲೇ ಬಡ ಕಾರ್ಮಿಕರ ಸಾವು ಆಗಿದೆ. ಪರಿಹಾರದ ಬಗ್ಗೆ ಯಾಕೆ ಇನ್ನೂ ಮಾಹಿತಿ ನೀಡಿಲ್ಲ. ಸಾವಿಗೆ ಹೊಣೆ ಯಾರು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಶವ ಕೊಂಡೊಯ್ದ ತಂಡದಲ್ಲಿದ್ದ ಪ್ರತಿನಿಧಿಯೊಬ್ಬರು ತಮ್ಮ ಸ್ಥಿತಿ ತೀರಾ ಸಂಕಷ್ಟದಲ್ಲಿದೆ. ನಮ್ಮನ್ನು ಇಲ್ಲಿನ ಜನರು ಕೂಡಿ ಹಾಕಿದ್ದಾರೆ. ಇವರನ್ನು ಹೇಗೆ ಮನವೊಲಿಸುವುದು, ಇಲ್ಲಿಂದ ಮರಳುವುದು ಹೇಗೆಂದು ತಿಳಿಯುತ್ತಿಲ್ಲ. ಕೂಡಲೇ ಎಂಆರ್ ಪಿಎಲ್ ಮ್ಯಾನೇಜ್ಮೆಂಟ್ ಪರಿಹಾರದ ಬಗ್ಗೆ ಘೋಷಣೆ ಮಾಡಬೇಕು. ನಮ್ಮ ರಕ್ಷಣೆಗೆ ಮಧ್ಯ ಪ್ರವೇಶ ಮಾಡಬೇಕು ಎಂದು ದುಃಖ ತೋಡಿಕೊಂಡು ವಿಡಿಯೋ ಮಾಡಿದ್ದು ಸಂಸ್ಥೆಯ ನೌಕರರಿದ್ದ ವಾಟ್ಸಪ್ ಗ್ರೂಪಿಗೆ ಹಾಕಿದ್ದಾರೆ. ನೂರಾರು ಜನರು ಇಲ್ಲಿಂದ ತೆರಳಿರುವ ಸಹೋದ್ಯೋಗಿಗಳಿಗೆ ಮುತ್ತಿಗೆ ಹಾಕಿದ್ದನ್ನು ವಿಡಿಯೋದಲ್ಲಿ ತೋರಿಸಿದ್ದಾರೆ.
ಮೃತರ ಕುಟುಂಬಗಳಿಗೆ ಗರಿಷ್ಠ ಪರಿಹಾರ ನೀಡಬೇಕೆಂದು ಆಗ್ರಹಿಸಿ ಸೋಮವಾರ ಎಂಆರ್ ಪಿಎಲ್ ಗೇಟ್ ಮುಂಭಾಗದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ.
Tensions have escalated following the tragic death of two contract workers due to a gas leak at the Mangalore Refinery and Petrochemicals Limited (MRPL). An FIR has been filed at the Surathkal police station against six MRPL officials, based on a complaint by the wife of deceased worker Deepchandra Bharti.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm