ಬ್ರೇಕಿಂಗ್ ನ್ಯೂಸ್
            
                        16-07-25 01:01 pm Mangalore Correspondent ಕರಾವಳಿ
            ಮಂಗಳೂರು, ಜುಲೈ 16 : ಜಿಲ್ಲೆಯಲ್ಲಿ ಮರಳು, ಕೆಂಪು ಕಲ್ಲು ಅಭಾವದಿಂದ ಜನರಿಗೆ, ಕಾರ್ಮಿಕರಿಗೆ ತೊಂದರೆಯಾಗಿದೆ. ಸಮಸ್ಯೆ ಆಗದಂತೆ ನೋಡಿಕೊಳ್ಳುವುದು ಸರ್ಕಾರದ ಕರ್ತವ್ಯ. ಹಾಗಂತ, ಕಾಂಗ್ರೆಸ್ ಸರ್ಕಾರದ ನೀತಿಯಿಂದ ಈ ಸಮಸ್ಯೆ ಆಗಿದ್ದಲ್ಲ. ಬಿಜೆಪಿ ಸರ್ಕಾರ ಇದ್ದಾಗಲೇ ಈ ಸಮಸ್ಯೆ ಇತ್ತು. ಈಗ ಸಮಸ್ಯೆ ನಿವಾರಿಸಲು ಚುನಾಯಿತ ಜನಪ್ರತಿನಿಧಿಗಳು ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಬೇಕೇ ವಿನಾ ಕಾಂಗ್ರೆಸ್ ಸರ್ಕಾರದ ಮೇಲೆ ಗೂಬೆ ಕೂರಿಸುವುದಲ್ಲ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ರಮಾನಾಥ ರೈ ಹೇಳಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ರಾಜ್ಯದಲ್ಲಿ ಕೆಂಪು ಕಲ್ಲು ಮೇಲಿನ ರಾಯಲ್ಟಿ ಹೆಚ್ಚಿರುವುದನ್ನು ಕಡಿಮೆ ಮಾಡುವಂತೆ ಉಸ್ತುವಾರಿ ಸಚಿವರು ಮತ್ತು ಗಣಿ ಇಲಾಖೆ ಅಧಿಕಾರಿಗಳೊಂದಿಗೆ ಮಾತಾಡಿದ್ದೇನೆ. ಕೇರಳದಲ್ಲಿ 32 ರೂ., ರಾಜ್ಯದಲ್ಲಿ 280 ರೂ. ರಾಯಲ್ಟಿ ಇದೆ ಎನ್ನುವುದನ್ನು ಕೆಂಪು ಕಲ್ಲಿನ ವ್ಯಾಪಾರಸ್ಥರು ಒಪ್ಪುವುದಿಲ್ಲ. ಇದರ ಬಗ್ಗೆ ಕಾರ್ಮಿಕರಲ್ಲಿ, ವ್ಯಾಪಾರಸ್ಥರಲ್ಲಿ ನೋವು ಇದೆ. ಹಾಗಂತ ಬಿಜೆಪಿಗರು ರಾಜಕೀಯ ಮಾಡೋದಲ್ಲ. ಸರ್ಕಾರದ ಮೇಲೆ ಗೂಬೆ ಕೂರಿಸುವುದಲ್ಲ. ಇದಕ್ಕೆ ಕಾಂಗ್ರೆಸ್ ಸರ್ಕಾರದ ನೀತಿ ಕಾರಣ ಅಲ್ಲ. ಬೀದಿಯಲ್ಲಿ ನಿಂತು ಮಾತಾಡಿದರೆ ಸಮಸ್ಯೆ ಪರಿಹಾರ ಆಗಲ್ಲ.

ಚುನಾಯಿತ ಜನಪ್ರತಿನಿಧಿಗಳಿಗೆ ಜವಾಬ್ದಾರಿ ಬೇಡವೇ, ತಮ್ಮ ಕೆಲಸ ಮಾಡಬೇಕು. ಸರ್ಕಾರದ ಮಟ್ಟದಲ್ಲಿ ಮಾತುಕತೆ ಮಾಡಿ ಜನರ ಸಮಸ್ಯೆ ಬಗೆಹರಿಸೋದನ್ನು ಮಾಡಬೇಕು. ಸರ್ಕಾರ ಯಾವುದೇ ಹೊಸ ನೀತಿ ಜಾರಿಗೊಳಿಸಿಲ್ಲ, ಕಾಂಗ್ರೆಸ್ ಸರ್ಕಾರವನ್ನು ದೂರುವುದು ಯಾಕೆಂದು ಪ್ರಶ್ನಿಸಿದ ರಮಾನಾಥ ರೈ, ಹಿಂದೆ ನಮ್ಮ ಸರ್ಕಾರ ಇದ್ದಾಗ ನಾನ್ ಸಿಆರ್ ಝೆಡ್ ಮರಳು ತೆಗೆಸಿಕೊಡಲು ಬಹಳಷ್ಟು ಪ್ರಯತ್ನ ಪಟ್ಟಿದ್ದು ನಾನು. ಬೆಂಗಳೂರಿನಲ್ಲಿ 50-60 ಮೀಟಿಂಗ್ ಮಾಡಿ ನಾನ್ ಸಿಆರ್ ಝೆಡ್ ಮರಳಿನ ಲೈಸನ್ಸ್ ತೆಗೆಸಿಕೊಟ್ಟಿದ್ದೆ. ಇದರ ವಿಚಾರ ನಮ್ಮ ಮರಳು ವ್ಯಾಪಾರಿಗಳಿಗೂ ತಿಳಿದಿದೆ.
ಆದರೆ ಈಗ ಮರಳು ಬ್ಲಾಕ್ ಗಳನ್ನು ಟೆಂಡರ್ ಮಾಡದೆ ಬ್ಲಾಕ್ ಮಾಡಿದ್ದಾರೆ. ಇದರಿಂದ ಸಮಸ್ಯೆ ಆಗಿದೆ, ಅಕ್ರಮ ಮರಳುಗಾರಿಕೆ ವಿಚಾರದಲ್ಲಿ ಪೊಲೀಸರು ಕ್ರಮ ತೆಗೆದುಕೊಂಡದ್ದು ಸರಿ ಇದೆ. ಅಧಿಕಾರಿಗಳು, ಜಿಲ್ಲಾಡಳಿತ, ಚುನಾಯಿತ ಪ್ರತಿನಿಧಿಗಳು ಕುಳಿತು ಚರ್ಚಿಸಿ ಸಮಸ್ಯೆ ಸರಿಪಡಿಸಬೇಕು. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆಗೂ ಮಾತಾಡಿದ್ದು ಸಮಸ್ಯೆ ಬಗೆಹರಿಸಲು ಹೇಳಿದ್ದೇನೆ ಎಂದು ರೈ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಶಶಿಧರ್ ಹೆಗ್ಡೆ, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲೀಂ, ಪ್ರಕಾಶ್ ಸಾಲ್ಯಾನ್ ಇದ್ದರು.
            
            
            Senior Congress leader and former minister Ramanath Rai has stated that the current shortage of sand and laterite stone in the district is not a result of the Congress government’s policies, but rather a longstanding issue that also existed during the previous BJP government’s tenure. He urged elected representatives to take responsibility and work with senior officials to resolve the crisis instead of blaming the government.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm