ಬ್ರೇಕಿಂಗ್ ನ್ಯೂಸ್
18-07-25 02:36 pm Mangalore Correspondent ಕರಾವಳಿ
ಉಳ್ಳಾಲ, ಜು.18 : ಕಳೆದೆರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಗುರುವಾರ ರಾತ್ರಿ ತೊಕ್ಕೊಟ್ಟು ಒಳಪೇಟೆಯ ಗತಕಾಲ ವೈಭವದ ಶತಮಾನ ಕಂಡ ಹಳೆಯ ಖಾಸಗಿ ವಾಣಿಜ್ಯ& ವಸತಿ ಸಂಕೀರ್ಣದ ಹಂಚಿನ ಮೇಲ್ಛಾವಣಿ ಧರೆಗುರುಳಿ ಬಿದ್ದಿದೆ. ಮಧ್ಯರಾತ್ರಿ ಘಟನೆ ನಡೆದ ಪರಿಣಾಮ ಸಂಭವನೀಯ ಭಾರೀ ಅನಾಹುತ ತಪ್ಪಿದೆ.
ಮಧ್ಯರಾತ್ರಿ ಎರಡೂವರೆ ಗಂಟೆ ವೇಳೆಗೆ ಕಟ್ಟಡದ ಹಂಚಿನ ಛಾವಣಿ ಧರೆಗುರುಳಿ ಬಿದ್ದಿದೆ. ನೂರು ವರುಷದ ಹಿಂದಿನ ಹಳೆಯ ಶಿಥಿಲ ಕಟ್ಟಡದಲ್ಲಿ ಸ್ಥಳೀಯ ಸಂಘಟನೆಯೊಂದರ ಕಚೇರಿ ಸೇರಿದಂತೆ ಎರಡು ಬೀಡಿ ಬ್ರಾಂಚ್ ಗಳು ಕಾರ್ಯಾಚರಿಸುತ್ತಿತ್ತು. ಕಟ್ಟಡದ ಹಿಂಬದಿ ಭಾಗದಲ್ಲಿ ಎರಡು ಬಾಡಿಗೆ ಮನೆಗಳಿದ್ದು ಮನೆಮಂದಿಗೆ ಘಟನೆಯಿಂದ ಯಾವುದೇ ಹಾನಿಯಾಗಿಲ್ಲ.





ಕಟ್ಟಡದ ಹಂಚಿನ ಮೇಲ್ಚಾವಣಿಯು ತೊಕ್ಕೊಟ್ಟು ಚರ್ಚ್ ಸಂಪರ್ಕದ ಮುಖ್ಯ ರಸ್ತೆಗೆ ಕುಸಿದು ದೊಪ್ಪನೆ ಬಿದ್ದಿರುವ ದೃಶ್ಯ ಸಿಸಿಟಿವಿ ಫೂಟೇಜಲ್ಲಿ ದಾಖಲಾಗಿದೆ. ಹಗಲಿನ ವೇಳೆ ಈ ಕಟ್ಟಡದ ಮುಂಭಾಗದ ರಸ್ತೆಯಿಂದ ಶಾಲಾ ಮಕ್ಕಳು, ಜನಸಾಮಾನ್ಯರು ಸೇರಿದಂತೆ ವಾಹನಗಳು ಹಾದು ಹೋಗುತ್ತಿರುತ್ತವೆ. ಈ ವೇಳೆ ಘಟನೆ ನಡೆದಿದ್ದರೆ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತೆಂದು ಸ್ಥಳೀಯರು ತಿಳಿಸಿದ್ದಾರೆ.
ಉದ್ದವಾದ ಹಳೆಯ ಕಟ್ಟಡದ ಅಳಿದುಳಿದ ಒಂದು ಭಾಗದಲ್ಲಿ ಫ್ಯಾನ್ಸಿ ಸೆಂಟರೊಂದು ವ್ಯವಹಾರ ನಡೆಸುತ್ತಿದ್ದು, ಮತ್ತೊಂದು ಭಾಗದಲ್ಲಿ ಸ್ಥಳೀಯ ಮತ್ತೊಂದು ಸಂಘಟನೆಯ ಕಚೇರಿ ಕಾರ್ಯಚರಿಸುತ್ತಿದೆ. ದಶಕಗಳ ಹಿಂದೆ ಈ ಕಟ್ಟಡದಲ್ಲಿ ತೊಕ್ಕೊಟ್ಟಿನ ಏಕೈಕ ಶೇಂದಿ ಅಂಗಡಿ ವಹಿವಾಟು ನಡೆಸುತ್ತಿದ್ದು, ಶೇಂದಿ ಪ್ರಿಯರ ನೆಚ್ಚಿನ ಕೇಂದ್ರ ಇದಾಗಿತ್ತು. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಮತ್ತು ನಗರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಸ್ತೆಗೆ ಬಿದ್ದಿದ್ದ ಮೇಲ್ಚಾವಣಿಯ ಅವಶೇಷಗಳ ತೆರವು ಕಾರ್ಯಾಚರಣೆ ನಡೆಸಿದ್ದಾರೆ.
Continuous heavy rains over the past two days led to the partial collapse of the roof of a century-old private commercial-cum-residential building in the heart of Tokkottu’s inner market area late Thursday night. Fortunately, the incident occurred around 2:30 AM, preventing what could have been a major tragedy.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am