ಬ್ರೇಕಿಂಗ್ ನ್ಯೂಸ್
            
                        18-07-25 02:36 pm Mangalore Correspondent ಕರಾವಳಿ
            ಉಳ್ಳಾಲ, ಜು.18 : ಕಳೆದೆರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಗುರುವಾರ ರಾತ್ರಿ ತೊಕ್ಕೊಟ್ಟು ಒಳಪೇಟೆಯ ಗತಕಾಲ ವೈಭವದ ಶತಮಾನ ಕಂಡ ಹಳೆಯ ಖಾಸಗಿ ವಾಣಿಜ್ಯ& ವಸತಿ ಸಂಕೀರ್ಣದ ಹಂಚಿನ ಮೇಲ್ಛಾವಣಿ ಧರೆಗುರುಳಿ ಬಿದ್ದಿದೆ. ಮಧ್ಯರಾತ್ರಿ ಘಟನೆ ನಡೆದ ಪರಿಣಾಮ ಸಂಭವನೀಯ ಭಾರೀ ಅನಾಹುತ ತಪ್ಪಿದೆ.
ಮಧ್ಯರಾತ್ರಿ ಎರಡೂವರೆ ಗಂಟೆ ವೇಳೆಗೆ ಕಟ್ಟಡದ ಹಂಚಿನ ಛಾವಣಿ ಧರೆಗುರುಳಿ ಬಿದ್ದಿದೆ. ನೂರು ವರುಷದ ಹಿಂದಿನ ಹಳೆಯ ಶಿಥಿಲ ಕಟ್ಟಡದಲ್ಲಿ ಸ್ಥಳೀಯ ಸಂಘಟನೆಯೊಂದರ ಕಚೇರಿ ಸೇರಿದಂತೆ ಎರಡು ಬೀಡಿ ಬ್ರಾಂಚ್ ಗಳು ಕಾರ್ಯಾಚರಿಸುತ್ತಿತ್ತು. ಕಟ್ಟಡದ ಹಿಂಬದಿ ಭಾಗದಲ್ಲಿ ಎರಡು ಬಾಡಿಗೆ ಮನೆಗಳಿದ್ದು ಮನೆಮಂದಿಗೆ ಘಟನೆಯಿಂದ ಯಾವುದೇ ಹಾನಿಯಾಗಿಲ್ಲ.





ಕಟ್ಟಡದ ಹಂಚಿನ ಮೇಲ್ಚಾವಣಿಯು ತೊಕ್ಕೊಟ್ಟು ಚರ್ಚ್ ಸಂಪರ್ಕದ ಮುಖ್ಯ ರಸ್ತೆಗೆ ಕುಸಿದು ದೊಪ್ಪನೆ ಬಿದ್ದಿರುವ ದೃಶ್ಯ ಸಿಸಿಟಿವಿ ಫೂಟೇಜಲ್ಲಿ ದಾಖಲಾಗಿದೆ. ಹಗಲಿನ ವೇಳೆ ಈ ಕಟ್ಟಡದ ಮುಂಭಾಗದ ರಸ್ತೆಯಿಂದ ಶಾಲಾ ಮಕ್ಕಳು, ಜನಸಾಮಾನ್ಯರು ಸೇರಿದಂತೆ ವಾಹನಗಳು ಹಾದು ಹೋಗುತ್ತಿರುತ್ತವೆ. ಈ ವೇಳೆ ಘಟನೆ ನಡೆದಿದ್ದರೆ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತೆಂದು ಸ್ಥಳೀಯರು ತಿಳಿಸಿದ್ದಾರೆ.
ಉದ್ದವಾದ ಹಳೆಯ ಕಟ್ಟಡದ ಅಳಿದುಳಿದ ಒಂದು ಭಾಗದಲ್ಲಿ ಫ್ಯಾನ್ಸಿ ಸೆಂಟರೊಂದು ವ್ಯವಹಾರ ನಡೆಸುತ್ತಿದ್ದು, ಮತ್ತೊಂದು ಭಾಗದಲ್ಲಿ ಸ್ಥಳೀಯ ಮತ್ತೊಂದು ಸಂಘಟನೆಯ ಕಚೇರಿ ಕಾರ್ಯಚರಿಸುತ್ತಿದೆ. ದಶಕಗಳ ಹಿಂದೆ ಈ ಕಟ್ಟಡದಲ್ಲಿ ತೊಕ್ಕೊಟ್ಟಿನ ಏಕೈಕ ಶೇಂದಿ ಅಂಗಡಿ ವಹಿವಾಟು ನಡೆಸುತ್ತಿದ್ದು, ಶೇಂದಿ ಪ್ರಿಯರ ನೆಚ್ಚಿನ ಕೇಂದ್ರ ಇದಾಗಿತ್ತು. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಮತ್ತು ನಗರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಸ್ತೆಗೆ ಬಿದ್ದಿದ್ದ ಮೇಲ್ಚಾವಣಿಯ ಅವಶೇಷಗಳ ತೆರವು ಕಾರ್ಯಾಚರಣೆ ನಡೆಸಿದ್ದಾರೆ.
            
            
            Continuous heavy rains over the past two days led to the partial collapse of the roof of a century-old private commercial-cum-residential building in the heart of Tokkottu’s inner market area late Thursday night. Fortunately, the incident occurred around 2:30 AM, preventing what could have been a major tragedy.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm