ಬ್ರೇಕಿಂಗ್ ನ್ಯೂಸ್
18-07-25 03:19 pm Mangalore Correspondent ಕರಾವಳಿ
ಉಳ್ಳಾಲ, ಜು.18 : ಕಳೆದ ಬುಧವಾರ ಸಂಜೆ ನಿರಂತರ ಸುರಿಯುತ್ತಿದ್ದ ಧಾರಾಕಾರ ಮಳೆಗೆ ಕೆಲಸ ಬಿಟ್ಟು ಮನೆಯ ಕಡೆಗೆ ತೆರಳುತ್ತಿದ್ದ ಕೂಲಿ ಕಾರ್ಮಿಕರೋರ್ವರು ಕಾಲುಸಂಕದಲ್ಲಿ ಕಾಲುವೆ ದಾಟುತ್ತಿದ್ದ ವೇಳೆ ನೀರು ಪಾಲಾಗಿ ನಾಪತ್ತೆಯಾಗಿದ್ದು ಅವರ ಮೃತದೇಹವು ಶುಕ್ರವಾರ ಮಧ್ಯಾಹ್ನ ಸೋಮೇಶ್ವರ ಉಚ್ಚಿಲದ ಹೊಳೆಯಲ್ಲಿ ಪತ್ತೆಯಾಗಿದೆ.
ಸೋಮೇಶ್ವರ ಗ್ರಾಮದ ಕುಂಪಲ ಆಶ್ರಯ ಕಾಲೊನಿಯ ನಿವಾಸಿ ಕೇಶವ ಶೆಟ್ಟಿ(64) ಮೃತ ವ್ಯಕ್ತಿ. ಬುಧವಾರ ಸಂಜೆ ಏಳು ಗಂಟೆ ವೇಳೆಗೆ ಕೇಶವ ಅವರು ಎಡೆ ಬಿಡದೆ ಸುರಿಯುತ್ತಿದ್ದ ಮಳೆಯಲ್ಲಿ ಪಿಲಾರು ರಸ್ತೆಯಾಗಿ ಮನೆ ಕಡೆ ತೆರಳುತ್ತಿದ್ದರೆನ್ನಲಾಗಿದೆ. ಈ ವೇಳೆ ಉಕ್ಕಿ ಹರಿಯುತ್ತಿದ್ದ ಪಿಲಾರುವಿನ ರಾಜಕಾಲುವೆಯ ಕಾಲುಸಂಕವನ್ನ ದಾಟುತ್ತಿದ್ದ ವೇಳೆ ಕೇಶವ ಅವರು ನೀರುಪಾಲಾಗಿದ್ದರು. ಮನೆ ಮಂದಿ ನೆರೆಹೊರೆಯವರು ಸೇರಿ ಕಾಲುವೆಯುದ್ದಕ್ಕೂ ಸಾಕಷ್ಟು ಹುಡುಕಾಟ ನಡೆಸಿದ್ದರೂ ಕೇಶವ ಅವರು ಸಿಕ್ಕಿರಲಿಲ್ಲ. ಕೇಶವ ಅವರ ಛತ್ರಿಯು ಕಾಲುವೆಯಲ್ಲಿ ಪತ್ತೆಯಾಗಿತ್ತು. ಮನೆ ಮಂದಿ ನಿನ್ನೆ ಉಳ್ಳಾಲ ಠಾಣೆಯಲ್ಲಿ ಕೇಶವ ಅವರು ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಿಸಿದ್ದರು.
ಇಂದು ಮಧ್ಯಾಹ್ನ ಉಚ್ಚಿಲದ ಹೊಳೆಯಲ್ಲಿ ಕೇಶವ ಅವರ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಉಳ್ಳಾಲ ತಹಶೀಲ್ದಾರ್, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನ ಹೊಳೆಯಿಂದ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ಕೇಶವ ಅವರು ಪತ್ನಿ ಹಾಗೂ ಪುತ್ರ, ಪುತ್ರಿಯನ್ನ ಅಗಲಿದ್ದಾರೆ.
A 64-year-old daily wage laborer, who went missing after being swept away in a flooded canal during heavy rains on Wednesday evening, was found dead in a lake at Uchila, Someshwara on Friday afternoon.
09-09-25 09:14 pm
Bangalore Correspondent
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 08:01 pm
Mangalore Correspondent
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm