ಬ್ರೇಕಿಂಗ್ ನ್ಯೂಸ್
            
                        18-07-25 03:19 pm Mangalore Correspondent ಕರಾವಳಿ
            ಉಳ್ಳಾಲ, ಜು.18 : ಕಳೆದ ಬುಧವಾರ ಸಂಜೆ ನಿರಂತರ ಸುರಿಯುತ್ತಿದ್ದ ಧಾರಾಕಾರ ಮಳೆಗೆ ಕೆಲಸ ಬಿಟ್ಟು ಮನೆಯ ಕಡೆಗೆ ತೆರಳುತ್ತಿದ್ದ ಕೂಲಿ ಕಾರ್ಮಿಕರೋರ್ವರು ಕಾಲುಸಂಕದಲ್ಲಿ ಕಾಲುವೆ ದಾಟುತ್ತಿದ್ದ ವೇಳೆ ನೀರು ಪಾಲಾಗಿ ನಾಪತ್ತೆಯಾಗಿದ್ದು ಅವರ ಮೃತದೇಹವು ಶುಕ್ರವಾರ ಮಧ್ಯಾಹ್ನ ಸೋಮೇಶ್ವರ ಉಚ್ಚಿಲದ ಹೊಳೆಯಲ್ಲಿ ಪತ್ತೆಯಾಗಿದೆ.
ಸೋಮೇಶ್ವರ ಗ್ರಾಮದ ಕುಂಪಲ ಆಶ್ರಯ ಕಾಲೊನಿಯ ನಿವಾಸಿ ಕೇಶವ ಶೆಟ್ಟಿ(64) ಮೃತ ವ್ಯಕ್ತಿ. ಬುಧವಾರ ಸಂಜೆ ಏಳು ಗಂಟೆ ವೇಳೆಗೆ ಕೇಶವ ಅವರು ಎಡೆ ಬಿಡದೆ ಸುರಿಯುತ್ತಿದ್ದ ಮಳೆಯಲ್ಲಿ ಪಿಲಾರು ರಸ್ತೆಯಾಗಿ ಮನೆ ಕಡೆ ತೆರಳುತ್ತಿದ್ದರೆನ್ನಲಾಗಿದೆ. ಈ ವೇಳೆ ಉಕ್ಕಿ ಹರಿಯುತ್ತಿದ್ದ ಪಿಲಾರುವಿನ ರಾಜಕಾಲುವೆಯ ಕಾಲುಸಂಕವನ್ನ ದಾಟುತ್ತಿದ್ದ ವೇಳೆ ಕೇಶವ ಅವರು ನೀರುಪಾಲಾಗಿದ್ದರು. ಮನೆ ಮಂದಿ ನೆರೆಹೊರೆಯವರು ಸೇರಿ ಕಾಲುವೆಯುದ್ದಕ್ಕೂ ಸಾಕಷ್ಟು ಹುಡುಕಾಟ ನಡೆಸಿದ್ದರೂ ಕೇಶವ ಅವರು ಸಿಕ್ಕಿರಲಿಲ್ಲ. ಕೇಶವ ಅವರ ಛತ್ರಿಯು ಕಾಲುವೆಯಲ್ಲಿ ಪತ್ತೆಯಾಗಿತ್ತು. ಮನೆ ಮಂದಿ ನಿನ್ನೆ ಉಳ್ಳಾಲ ಠಾಣೆಯಲ್ಲಿ ಕೇಶವ ಅವರು ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಿಸಿದ್ದರು.

ಇಂದು ಮಧ್ಯಾಹ್ನ ಉಚ್ಚಿಲದ ಹೊಳೆಯಲ್ಲಿ ಕೇಶವ ಅವರ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಉಳ್ಳಾಲ ತಹಶೀಲ್ದಾರ್, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನ ಹೊಳೆಯಿಂದ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ಕೇಶವ ಅವರು ಪತ್ನಿ ಹಾಗೂ ಪುತ್ರ, ಪುತ್ರಿಯನ್ನ ಅಗಲಿದ್ದಾರೆ.
            
            
            A 64-year-old daily wage laborer, who went missing after being swept away in a flooded canal during heavy rains on Wednesday evening, was found dead in a lake at Uchila, Someshwara on Friday afternoon.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm