ಬ್ರೇಕಿಂಗ್ ನ್ಯೂಸ್
18-07-25 03:19 pm Mangalore Correspondent ಕರಾವಳಿ
ಉಳ್ಳಾಲ, ಜು.18 : ಕಳೆದ ಬುಧವಾರ ಸಂಜೆ ನಿರಂತರ ಸುರಿಯುತ್ತಿದ್ದ ಧಾರಾಕಾರ ಮಳೆಗೆ ಕೆಲಸ ಬಿಟ್ಟು ಮನೆಯ ಕಡೆಗೆ ತೆರಳುತ್ತಿದ್ದ ಕೂಲಿ ಕಾರ್ಮಿಕರೋರ್ವರು ಕಾಲುಸಂಕದಲ್ಲಿ ಕಾಲುವೆ ದಾಟುತ್ತಿದ್ದ ವೇಳೆ ನೀರು ಪಾಲಾಗಿ ನಾಪತ್ತೆಯಾಗಿದ್ದು ಅವರ ಮೃತದೇಹವು ಶುಕ್ರವಾರ ಮಧ್ಯಾಹ್ನ ಸೋಮೇಶ್ವರ ಉಚ್ಚಿಲದ ಹೊಳೆಯಲ್ಲಿ ಪತ್ತೆಯಾಗಿದೆ.
ಸೋಮೇಶ್ವರ ಗ್ರಾಮದ ಕುಂಪಲ ಆಶ್ರಯ ಕಾಲೊನಿಯ ನಿವಾಸಿ ಕೇಶವ ಶೆಟ್ಟಿ(64) ಮೃತ ವ್ಯಕ್ತಿ. ಬುಧವಾರ ಸಂಜೆ ಏಳು ಗಂಟೆ ವೇಳೆಗೆ ಕೇಶವ ಅವರು ಎಡೆ ಬಿಡದೆ ಸುರಿಯುತ್ತಿದ್ದ ಮಳೆಯಲ್ಲಿ ಪಿಲಾರು ರಸ್ತೆಯಾಗಿ ಮನೆ ಕಡೆ ತೆರಳುತ್ತಿದ್ದರೆನ್ನಲಾಗಿದೆ. ಈ ವೇಳೆ ಉಕ್ಕಿ ಹರಿಯುತ್ತಿದ್ದ ಪಿಲಾರುವಿನ ರಾಜಕಾಲುವೆಯ ಕಾಲುಸಂಕವನ್ನ ದಾಟುತ್ತಿದ್ದ ವೇಳೆ ಕೇಶವ ಅವರು ನೀರುಪಾಲಾಗಿದ್ದರು. ಮನೆ ಮಂದಿ ನೆರೆಹೊರೆಯವರು ಸೇರಿ ಕಾಲುವೆಯುದ್ದಕ್ಕೂ ಸಾಕಷ್ಟು ಹುಡುಕಾಟ ನಡೆಸಿದ್ದರೂ ಕೇಶವ ಅವರು ಸಿಕ್ಕಿರಲಿಲ್ಲ. ಕೇಶವ ಅವರ ಛತ್ರಿಯು ಕಾಲುವೆಯಲ್ಲಿ ಪತ್ತೆಯಾಗಿತ್ತು. ಮನೆ ಮಂದಿ ನಿನ್ನೆ ಉಳ್ಳಾಲ ಠಾಣೆಯಲ್ಲಿ ಕೇಶವ ಅವರು ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಿಸಿದ್ದರು.

ಇಂದು ಮಧ್ಯಾಹ್ನ ಉಚ್ಚಿಲದ ಹೊಳೆಯಲ್ಲಿ ಕೇಶವ ಅವರ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಉಳ್ಳಾಲ ತಹಶೀಲ್ದಾರ್, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನ ಹೊಳೆಯಿಂದ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ಕೇಶವ ಅವರು ಪತ್ನಿ ಹಾಗೂ ಪುತ್ರ, ಪುತ್ರಿಯನ್ನ ಅಗಲಿದ್ದಾರೆ.
A 64-year-old daily wage laborer, who went missing after being swept away in a flooded canal during heavy rains on Wednesday evening, was found dead in a lake at Uchila, Someshwara on Friday afternoon.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am