ಬ್ರೇಕಿಂಗ್ ನ್ಯೂಸ್
            
                        19-07-25 02:32 pm Mangalore Correspondent ಕರಾವಳಿ
            ಪುತ್ತೂರು, ಜುಲೈ 19 : ಯಕ್ಷಗಾನ ಕಲಾ ಪರಂಪರೆಯ ಹಳೆಯ ಕೊಂಡಿ, ಸ್ತ್ರೀಯರನ್ನೇ ನಾಚಿಸುವ ರೀತಿಯಲ್ಲಿ ಸ್ತ್ರೀ ವೇಷಗಳನ್ನು ಮಾಡಿ ಐವತ್ತು ವರ್ಷಗಳ ಹಿಂದೆಯೇ ಕರಾವಳಿ ಜನರ ಮನಸೂರೆಗೊಳಿಸಿದ್ದ, ತೆಂಕು ಬಡಗು ತಿಟ್ಟಿನಲ್ಲಿ ಬೆರಗು ಮೂಡಿಸಿದ್ದ ಕಲಾವಿದರಾಗಿ ವಯೋ ನಿವೃತ್ತಿಯಲ್ಲಿದ್ದ ಪಾತಾಳ ವೆಂಕಟರಮಣ ಭಟ್ (92) ಇನ್ನಿಲ್ಲ. ಶನಿವಾರ ಅವರು ಹೃದಯಾಘಾತಕ್ಕೀಡಾಗಿ ಸ್ವಗೃಹ ಉಪ್ಪಿನಂಗಡಿಯಲ್ಲಿ ಇಹಲೋಕ ತ್ಯಜಿಸಿದ್ದಾರೆ.
ತೆಂಕು ಹಾಗೂ ಬಡಗು ತಿಟ್ಟುಗಳಲ್ಲಿ ಅನನ್ಯ ರೀತಿಯಲ್ಲಿ ವೇಷಗಳನ್ನು ಮಾಡಿ ಲಕ್ಷಾಂತರ ಯಕ್ಷಾಭಿಮಾನಿಗಳನ್ನು ಪಡೆದಿದ್ದ ಪಾತಾಳ ಎಂಬ ನಾಮಾಂಕಿತದಲ್ಲೇ ಪ್ರಸಿದ್ಧಿ ಪಡೆದಿದ್ದರು. 1933ರ ನವೆಂಬರ್ 16ರಂದು ಪುತ್ತೂರು ಸಮೀಪದ ಬೈಪದವು ಎಂಬಲ್ಲಿ ಜನಿಸಿದ್ದ ಅವರು, ಚಿಕ್ಕಂದಿನಲ್ಲೇ ಯಕ್ಷಗಾನ ಆಸಕ್ತಿ ಬೆಳೆಸಿಕೊಂಡು ಕಲೆಯನ್ನು ತಪಸ್ಸಿನಂತೆ ಆಚರಿಸಿಕೊಂಡು ಬಂದವರು. ದೇಶಕ್ಕೆ ಸ್ವಾತಂತ್ರ್ಯ ಸಿಗುವುದಕ್ಕೂ ಮೊದಲೇ ಆ ಕಾಲದ ಯಕ್ಷಗಾನ ಗುರು ಪುತ್ತೂರು ಕೃಷ್ಣ ಭಟ್ಟರಿಂದ ತೆಂಕುತಿಟ್ಟು ಯಕ್ಷಗಾನದ ಪಟ್ಟುಗಳನ್ನು ಕಲಿತು, ಪೂರ್ಣಕಾಲಿಕ ಕಲಾವಿದರಾಗಿ ರೂಪುಗೊಂಡಿದ್ದರು. ಆಗಿನ ಕಾಲದಲ್ಲಿ ಕೃಷಿ ಬಿಟ್ಟರೆ, ಮನರಂಜನೆಗೆ ಯಕ್ಷಗಾನ ಮಾತ್ರ ಇದ್ದ ಕಾಲದಲ್ಲಿ ಅದನ್ನು ವೃತ್ತಿಪರ ಕಲಾವಿದರಾಗಿದ್ದರು.
ಮೊದಲಿಗೆ ಸೌಕೂರು ಮೇಳ, ಆನಂತರ 1954ರಲ್ಲಿ ಮೂಲ್ಕಿ ಮೇಳ, 1963ರಲ್ಲಿ ಧರ್ಮಸ್ಥಳ ಮೇಳಕ್ಕೆ ಸೇರಿದ ನಂತರ ಪಾತಾಳ ಅನ್ನುವ ಹೆಸರಿಗೆ ಯಕ್ಷಗಾನ ಪ್ರಿಯರಲ್ಲಿ ಹೊಸ ವ್ಯಾಖ್ಯಾನ ದೊರಕಿತ್ತು. ಧರ್ಮಸ್ಥಳ ಮೇಳದ ತಿರುಗಾಟವು ಪಾತಾಳ ವೆಂಕಟ್ರಮಣ ಭಟ್ಟರ ಕಲಾ ಜೀವನದ ಸುವರ್ಣ ಯುಗವಾಗಿತ್ತು. ಸ್ತ್ರೀಯರನ್ನೇ ನಾಚಿಸುವ ರೀತಿಯ ಅಭಿನಯ ಜನಮನ ಸೂರೆಗೊಂಡಿದ್ದು ಆ ಕಾಲದಲ್ಲೇ.
ಪೌರಾಣಿಕ ಪ್ರಸಂಗಗಳಲ್ಲಿ ರಂಭೆ, ಊರ್ವಶಿ, ಮೇನಕೆ, ಸತ್ಯಭಾಮೆ, ದೌಪದಿ, ಮೀನಾಕ್ಷಿ ಮೊದಲಾದ ಪಾತ್ರಗಳಿಗೆ ಜೀವ ತುಂಬಿದವರು ವೆಂಕಟರಮಣ ಭಟ್ಟರು. ಪಾತಾಳ ಭಟ್ಟರು ಇದ್ದಾರೆಂದರೆ ಯಕ್ಷಗಾನ ರೈಸುತ್ತದೆ ಎಂದೇ ಲೆಕ್ಕ ಅನ್ನುವಷ್ಟರ ಮಟ್ಟಿಗೆ ಅವರಿಗೆ ಖ್ಯಾತಿ ಮತ್ತು ಜನಪ್ರಿಯತೆ ಇತ್ತು. ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿ, ಯಕ್ಷಗಾನ ಕಲಾರಂಗ ಪ್ರಶಸ್ತಿ, ವಿಟ್ಲ ಗೋಪಾಲಕೃಷ್ಣ ಭಟ್ ಪ್ರತಿಷ್ಟಾನ ಪ್ರಶಸ್ತಿ, ವಿದ್ಯಾಮಾನ್ಯ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ದೊರೆತಿವೆ.
            
            
            Puttur Renowned Yakshagana artist and an iconic figure in the coastal art tradition, Pataala Venkataramana Bhat—celebrated for his unmatched portrayal of female roles—passed away on Saturday at the age of 92 following a cardiac arrest at his residence in Uppinangady.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm