ಬ್ರೇಕಿಂಗ್ ನ್ಯೂಸ್
19-07-25 10:01 pm Mangalore Correspondent ಕರಾವಳಿ
ಮಂಗಳೂರು, ಜುಲೈ.19: MRPL ಘಟಕದ ಸುತ್ತ ಹಸಿರು ವಲಯ ನಿರ್ಮಾಣಕ್ಕೆ ಸಂಬಂಧಿಸಿ ಬಾಳ, ಜೋಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 27 ಎಕರೆ ಭೂಸ್ವಾಧೀನಕ್ಕೆ ಉದ್ದೇಶಿಸಲಾಗಿದ್ದು ವಸತಿ ಕಳಕೊಳ್ಳುವವರಿಗೆ ಸೂಕ್ತ ಪರಿಹಾರ ಒದಗಿಸಲು ಸಂಸದ ಕ್ಯಾ.ಬ್ರಿಜೇಶ್ ಚೌಟ ಸೂಚಿಸಿದ್ದಾರೆ.
ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅಧ್ಯಕ್ಷತೆಯಲ್ಲಿ ಎಂಆರ್ ಪಿಎಲ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಯಿತು.
ಪ್ರತಿ ಎಕರೆಗೆ 80 ಲಕ್ಷ ರೂ. ಪರಿಹಾರ, ಉದ್ಯೋಗ ಬದಲು ಪ್ರತಿ ಕುಟುಂಬಕ್ಕೆ 20 ಲಕ್ಷ ರೂ. ನಗದು ಮತ್ತು ನಿವೇಶನ ಸೇರಿದಂತೆ ಪರಿಹಾರ ನೀಡಲು ಎಂಆರ್ ಪಿಎಲ್ ಕಂಪನಿ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಹಲವು ವರ್ಷಗಳಿಂದ ಬಾಕಿ ಇರುವ ಈ ವಿಷಯವನ್ನು ಎಲ್ಲರಿಗೂ ತೃಪ್ತಿಕರವಾಗಿ ಇತ್ಯರ್ಥ ಪಡಿಸಬೇಕು. ನಿರ್ವಸಿತರ ಸಮಸ್ಯೆಯ ತೀವ್ರತೆ ತನಗೆ ಅರಿವಿದ್ದು, ಉತ್ತಮ ಪ್ಯಾಕೇಜ್ ದೊರಕಬೇಕು ಎಂದು ಸಂಸದ ಚೌಟ ಹೇಳಿದರು.
ಹಸಿರು ವಲಯಕ್ಕೆ ಗುರುತಿಸಲಾದ 27 ಎಕರೆಯಲ್ಲಿ 408 ಡೋರ್ ನಂಬರ್ ಗಳಿದ್ದು, 93.96 ಕೋಟಿ ರೂ. ಭೂಸ್ವಾಧೀನಕ್ಕೆ ವೆಚ್ಚವಾಗುವ ಸಾಧ್ಯತೆ ಇದೆ ಎಂದು ಸಮೀಕ್ಷೆ ನಡೆಸಿದ ಕೆಪಿಟಿ ಸಂಸ್ಥೆ ವರದಿ ನೀಡಿದೆ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮಾತನಾಡಿ, MRPL ಸಲ್ಲಿಸಿರುವ ಪ್ಯಾಕೇಜ್ ಬಗ್ಗೆ ಶೀಘ್ರದಲ್ಲೇ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ಹೇಳಿದರು. ಭೂಸ್ವಾಧೀನಕ್ಕೆ ಗುರುತಿಸಿದ 27 ಎಕರೆ ಜಮೀನು ಜೋಕಟ್ಟೆ ಮತ್ತು ಬಾಳ ಗ್ರಾ.ಪಂ ಹಾಗೂ ಬಜಪೆ ಪ.ಪಂ. ವ್ಯಾಪ್ತಿಯಲ್ಲಿದ್ದು, ಈ ಪ್ರದೇಶಗಳಲ್ಲಿ ಹೊಸದಾಗಿ ಡೋರ್ ನಂಬರ್ ಗಳನ್ನು ನೀಡದಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್, MRPL ಎಂ.ಡಿ. ಶ್ಯಾಂಪ್ರಸಾದ್, ಕೆಐಎಡಿಬಿ ಭೂಸ್ವಾಧೀನಾಧಿಕಾರಿ ರಾಜು, ನಿರ್ವಸಿತರ ಮುಖಂಡರಾದ ಮುನೀರ್ ಕಾಟಿಪಳ್ಳ ಮತ್ತಿತರರು ಇದ್ದರು.
To facilitate the development of a green zone around the MRPL (Mangalore Refinery and Petrochemicals Limited) plant, around 27 acres of land in the jurisdiction of Bala and Jokatte Gram Panchayats have been earmarked for acquisition. MP Capt. Brijesh Chowta has directed officials to ensure fair and adequate compensation for those who will be displaced from their residences.
19-07-25 03:05 pm
Bangalore Correspondent
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 10:01 pm
Mangalore Correspondent
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
Yakshagana Pataala Venkataramana Bhat: ಯಕ್ಷಗಾ...
19-07-25 02:32 pm
19-07-25 09:25 pm
Mangalore Correspondent
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am