ಬ್ರೇಕಿಂಗ್ ನ್ಯೂಸ್
19-07-25 10:01 pm Mangalore Correspondent ಕರಾವಳಿ
ಮಂಗಳೂರು, ಜುಲೈ.19: MRPL ಘಟಕದ ಸುತ್ತ ಹಸಿರು ವಲಯ ನಿರ್ಮಾಣಕ್ಕೆ ಸಂಬಂಧಿಸಿ ಬಾಳ, ಜೋಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 27 ಎಕರೆ ಭೂಸ್ವಾಧೀನಕ್ಕೆ ಉದ್ದೇಶಿಸಲಾಗಿದ್ದು ವಸತಿ ಕಳಕೊಳ್ಳುವವರಿಗೆ ಸೂಕ್ತ ಪರಿಹಾರ ಒದಗಿಸಲು ಸಂಸದ ಕ್ಯಾ.ಬ್ರಿಜೇಶ್ ಚೌಟ ಸೂಚಿಸಿದ್ದಾರೆ.
ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅಧ್ಯಕ್ಷತೆಯಲ್ಲಿ ಎಂಆರ್ ಪಿಎಲ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಯಿತು.
ಪ್ರತಿ ಎಕರೆಗೆ 80 ಲಕ್ಷ ರೂ. ಪರಿಹಾರ, ಉದ್ಯೋಗ ಬದಲು ಪ್ರತಿ ಕುಟುಂಬಕ್ಕೆ 20 ಲಕ್ಷ ರೂ. ನಗದು ಮತ್ತು ನಿವೇಶನ ಸೇರಿದಂತೆ ಪರಿಹಾರ ನೀಡಲು ಎಂಆರ್ ಪಿಎಲ್ ಕಂಪನಿ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಹಲವು ವರ್ಷಗಳಿಂದ ಬಾಕಿ ಇರುವ ಈ ವಿಷಯವನ್ನು ಎಲ್ಲರಿಗೂ ತೃಪ್ತಿಕರವಾಗಿ ಇತ್ಯರ್ಥ ಪಡಿಸಬೇಕು. ನಿರ್ವಸಿತರ ಸಮಸ್ಯೆಯ ತೀವ್ರತೆ ತನಗೆ ಅರಿವಿದ್ದು, ಉತ್ತಮ ಪ್ಯಾಕೇಜ್ ದೊರಕಬೇಕು ಎಂದು ಸಂಸದ ಚೌಟ ಹೇಳಿದರು.

ಹಸಿರು ವಲಯಕ್ಕೆ ಗುರುತಿಸಲಾದ 27 ಎಕರೆಯಲ್ಲಿ 408 ಡೋರ್ ನಂಬರ್ ಗಳಿದ್ದು, 93.96 ಕೋಟಿ ರೂ. ಭೂಸ್ವಾಧೀನಕ್ಕೆ ವೆಚ್ಚವಾಗುವ ಸಾಧ್ಯತೆ ಇದೆ ಎಂದು ಸಮೀಕ್ಷೆ ನಡೆಸಿದ ಕೆಪಿಟಿ ಸಂಸ್ಥೆ ವರದಿ ನೀಡಿದೆ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮಾತನಾಡಿ, MRPL ಸಲ್ಲಿಸಿರುವ ಪ್ಯಾಕೇಜ್ ಬಗ್ಗೆ ಶೀಘ್ರದಲ್ಲೇ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ಹೇಳಿದರು. ಭೂಸ್ವಾಧೀನಕ್ಕೆ ಗುರುತಿಸಿದ 27 ಎಕರೆ ಜಮೀನು ಜೋಕಟ್ಟೆ ಮತ್ತು ಬಾಳ ಗ್ರಾ.ಪಂ ಹಾಗೂ ಬಜಪೆ ಪ.ಪಂ. ವ್ಯಾಪ್ತಿಯಲ್ಲಿದ್ದು, ಈ ಪ್ರದೇಶಗಳಲ್ಲಿ ಹೊಸದಾಗಿ ಡೋರ್ ನಂಬರ್ ಗಳನ್ನು ನೀಡದಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್, MRPL ಎಂ.ಡಿ. ಶ್ಯಾಂಪ್ರಸಾದ್, ಕೆಐಎಡಿಬಿ ಭೂಸ್ವಾಧೀನಾಧಿಕಾರಿ ರಾಜು, ನಿರ್ವಸಿತರ ಮುಖಂಡರಾದ ಮುನೀರ್ ಕಾಟಿಪಳ್ಳ ಮತ್ತಿತರರು ಇದ್ದರು.
To facilitate the development of a green zone around the MRPL (Mangalore Refinery and Petrochemicals Limited) plant, around 27 acres of land in the jurisdiction of Bala and Jokatte Gram Panchayats have been earmarked for acquisition. MP Capt. Brijesh Chowta has directed officials to ensure fair and adequate compensation for those who will be displaced from their residences.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am