ಬ್ರೇಕಿಂಗ್ ನ್ಯೂಸ್
21-07-25 04:03 am Mangaluru Correspondent ಕರಾವಳಿ
ಮಂಗಳೂರು, ಜುಲೈ 21: ರಾಜ್ಯ ಸರ್ಕಾರ ಧರ್ಮಸ್ಥಳ ಕ್ಷೇತ್ರದ ಮೇಲೆ ಕೇಳಿಬಂದ ಆರೋಪ, ವಿವಾದಗಳ ಸತ್ಯಾಸತ್ಯತೆ ತಿಳಿಯಲು ಎಸ್ಐಟಿ ತನಿಖೆಗೆ ಆದೇಶ ನೀಡಿದ ನಿರ್ಧಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವಾಗತಿಸಿದೆ. ಸತ್ಯ ಹೊರಬರಬೇಕು. ನ್ಯಾಯಯುತ, ನಿಷ್ಪಕ್ಷಪಾತ ತನಿಖೆಯಾಗಿ ಸತ್ಯವನ್ನು ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಪರವಾಗಿ ಹೇಳಿಕೆ ಬಿಡುಗಡೆ ಮಾಡಲಾಗಿದೆ.
ಎಸ್ಐಟಿ ತನಿಖೆ ಕುರಿತು ಧರ್ಮಸ್ಥಳ ಕ್ಷೇತ್ರದ ವಕ್ತಾರ ಕೆ.ಪಾರ್ಶ್ವನಾಥ್ ಜೈನ್ ಪತ್ರಿಕಾ ಹೇಳಿಕೆ ನೀಡಿದ್ದು ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ 'ಹಲವಾರು ಶವಗಳನ್ನು ಹೂತಿದ್ದೆ' ಎಂಬ ದೂರು ಪ್ರಕರಣವು ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಊಹಾಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿದೆ. ಈ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್.ಐ.ಟಿ.)ಗೆ ರಾಜ್ಯ ಸರ್ಕಾರ ಹಸ್ತಾಂತರಿಸಿದೆ. ಸರ್ಕಾರದ ಈ ನಿಲುವು ಉತ್ತಮವಾಗಿದೆ ಎಂದು ಹೇಳಿದ್ದಾರೆ.

ಸಮಾಜದ ನೈತಿಕತೆ ಹಾಗೂ ಶ್ರದ್ಧೆಗೆ ನಿಲುಕುವ ಬಲವಾದ ಆಧಾರವೆಂದರೆ 'ಸತ್ಯ'. ಹೀಗಾಗಿ ಈ ಪ್ರಕರಣದಲ್ಲಿ ಎಸ್.ಐ.ಟಿ. ತನಿಖಾ ತಂಡ ಸತ್ಯಾಂಶವನ್ನು ಅತಿ ಶೀಘ್ರವಾಗಿ ಪ್ರಾಮಾಣಿಕ ತನಿಖೆ ನಡೆಸಿ ಹೊರತರಬೇಕಿದೆ. ಸತ್ಯವನ್ನು ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂಬುದು ನಮ್ಮ ಆಶಯ ಎಂದು ಕೆ.ಪಾರ್ಶ್ವನಾಥ್ ಜೈನ್ ಆಗ್ರಹಿಸಿದ್ದಾರೆ.
ಪದೇ ಪದೇ ಆರೋಪಗಳನ್ನು ಮಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಕುರಿತು ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುವ ಕೆಲಸಗಳು ನಡೆಯುತ್ತಿದೆ. ಹೀಗಾಗಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಇದರ ಸತ್ಯಾಸತ್ಯತೆ ಸಾರ್ವಜನಿಕರ ಮುಂದೆ ತನಿಖೆ ಮೂಲಕ ಬಹಿರಂಗಪಡಿಸಬೇಕು ಎಂದು ಧರ್ಮಸ್ಥಳ ಆಗ್ರಹಿಸುತ್ತಿದೆ ಎಂದಿದ್ದಾರೆ.
Sri Kshetra Dharmasthala has welcomed the Karnataka government’s decision to constitute a Special Investigation Team (SIT) to probe the recent allegations and controversies surrounding the temple town. In an official statement released on behalf of the institution, the management expressed hope that the SIT will conduct an impartial and transparent investigation to uncover the truth and present it before the public.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am