ಬ್ರೇಕಿಂಗ್ ನ್ಯೂಸ್
21-07-25 03:11 pm Mangalore Correspondent ಕರಾವಳಿ
ಮಂಗಳೂರು, ಜುಲೈ 21 : ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದಂತೆ ಉಳ್ಳಾಲ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಹೆಣ್ಮಕ್ಕಳಿಗಾಗಿ ಎರಡು ಪ್ರತ್ಯೇಕ ವಸತಿಯುತ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲಾಗುವುದು. ವಕ್ಫ್ ಮತ್ತು ಅಲ್ಪಸಂಖ್ಯಾತ ಇಲಾಖೆಯಿಂದ ಹೆಣ್ಮಕ್ಕಳ ಶಿಕ್ಷಣದ ಉದ್ದೇಶಕ್ಕಾಗಿ ಸಂಸ್ಥೆ ತರಲಾಗುವುದು. ಅಲ್ಪಸಂಖ್ಯಾತ ಇಲಾಖೆಯ ಒಂದು ಸಂಸ್ಥೆಗೆ ಸಚಿವ ಸಂಪುಟದಲ್ಲಿ ಅನುಮತಿ ಸಿಕ್ಕಿದ್ದು, 17 ಕೋಟಿ ಬಿಡುಗಡೆ ಆಗಿದೆ. ವಕ್ಫ್ ಇಲಾಖೆಯ ಶಿಕ್ಷಣ ಸಂಸ್ಥೆಗೂ ಅನುಮತಿ ಸಿಕ್ಕಿದ್ದು, ಹಣಕಾಸು ಇಲಾಖೆ ಹಂತಲ್ಲಿದೆ. ಸದ್ಯದಲ್ಲೇ ಮಂಜೂರಾತಿ ಸಿಗಲಿದೆ ಎಂದು ಉಳ್ಳಾಲ ಕ್ಷೇತ್ರದ ಶಾಸಕ, ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಖಾದರ್, ಹೆಣ್ಮಕ್ಕಳಿಗಾಗಿ ಹಾಸ್ಟೆಲ್ ಸಹಿತ ಶಿಕ್ಷಣ ನೀಡಬೇಕೆಂಬ ಅಪೇಕ್ಷೆಯಂತೆ ಎರಡು ಪ್ರತ್ಯೇಕ ಸಂಸ್ಥೆಗಳನ್ನು ತರುತ್ತಿದ್ದೇವೆ. ಅಲ್ಪಸಂಖ್ಯಾತ ಇಲಾಖೆಯಿಂದ ವಿಟ್ಲ, ಮೆಲ್ಕಾರ್ ಭಾಗದವರಿಗೆ ಅನುಕೂಲ ಆಗುವಂತೆ ಕೋಣಾಜೆ ಅಥವಾ ಪಜೀರಿನಲ್ಲಿ ಸ್ಥಾಪಿಸಲಾಗುವುದು. ಇದು ಪ್ರಾಥಮಿಕದಿಂದ ಪದವಿ ಹಂತದ ವರೆಗೂ ಶಿಕ್ಷಣ ನೀಡಬಲ್ಲ ವಸತಿಯುತ ಶಿಕ್ಷಣ ಸಂಸ್ಥೆ ಆಗಿರುತ್ತದೆ. ಇನ್ನೊಂದು ಉಳ್ಳಾಲ ನಗರ ಭಾಗದಲ್ಲಿ ಪಿಯು ಮತ್ತು ಅದರಿಂದ ಮೇಲ್ಪಟ್ಟ ಶಿಕ್ಷಣಕ್ಕಾಗಿ ವಕ್ಫ್ ಇಲಾಖೆಯಿಂದ ಹೆಣ್ಮಕ್ಕಳ ಶಿಕ್ಷಣ ಸಂಸ್ಥೆ ತರಲಾಗುವುದು. ಎರಡು ಕಡೆಯೂ ದೂರದ ಮಕ್ಕಳಿಗೆ ಮತ್ತು ಸ್ಥಳೀಯ ಮಕ್ಕಳಿಗೂ ಅವಕಾಶ ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಎರಡು ಕಡೆಯೂ 70 ಶೇಕಡಾ ಅಲ್ಪಸಂಖ್ಯಾತರು ಮತ್ತು ಇತರರಿಗೆ 30 ಶೇಕಡಾ ಅನುಪಾತದಂತೆ ಸೇರ್ಪಡೆಗೆ ಅವಕಾಶ ಇದೆ. ಉಳ್ಳಾಲ ಕ್ಷೇತ್ರದ ಪ್ರತಿ ಗ್ರಾಮದಲ್ಲಿಯೂ ಎಲ್ಕೆಜಿಯಿಂದಲೇ ಇಂಗ್ಲಿಷ್ ಮೀಡಿಯಂ ಶಿಕ್ಷಣ ದೊರಕಿಸಲು ವ್ಯವಸ್ಥೆ ಮಾಡಿದ್ದೇವೆ. ಎಲ್ಲ ಗ್ರಾಮದಲ್ಲೂ ಹೈಸ್ಕೂಲ್ ವರೆಗಿನ ಶಿಕ್ಷಣ ಇದೆ. ಕೆಲವೊಂದು ಕಡೆ ಆಯಾ ಸಂಸ್ಥೆಯವರೇ ಎಲ್ಕೆಜಿ ನಡೆಸುತ್ತಿದ್ದಾರೆ. ಅದನ್ನೀಗ ಸರಕಾರದಿಂದಲೇ ನಡೆಸುವಂತೆ ಶಿಕ್ಷಣ ಇಲಾಖೆಯಿಂದ ಆದೇಶ ತರಿಸಲಾಗಿದೆ. ಈಗಾಗಲೇ ಎಂಟು ಸರಕಾರಿ ಶಾಲೆಗಳಲ್ಲಿ ಎಲ್ಕೆಜಿ- ಯುಕೆಜಿ ಇದೆ. ಎಲ್ಲ ಸರಕಾರಿ ಶಾಲೆಗಳಲ್ಲೂ ಇಂಗ್ಲಿಷ್ ಮೀಡಿಯಂ ತರಲಾಗುವುದು ಎಂದರು.
ಅತಿಕ್ರಮಣ ಪತ್ತೆಗೆ ಡ್ರೋಣ್ ಸರ್ವೆ
ಉಳ್ಳಾಲ ಭಾಗದಲ್ಲಿ ಪ್ರತಿ ಮಳೆಗೂ ಮುಳುಗುವ ಸ್ಥಿತಿಯಾಗಿದೆ. ಇದೇ ರೀತಿಯಾದರೆ ಸಣ್ಣ ಮಳೆಗೂ ಮುಳುಗುವ ಬೆಂಗಳೂರಿನ ಸ್ಥಿತಿ ಇಲ್ಲಿಗೂ ಬರಲಿದೆ. ರಾಜಕಾಲುವ ಅತಿಕ್ರಮಿಸಿದ್ದನ್ನು ತೆರವು ಮಾಡುವ ಕಾರ್ಯ ಆಗಬೇಕಿದೆ. ಇದಕ್ಕಾಗಿ ಡ್ರೋಣ್ ಮೂಲಕ ಸರ್ವೆ ನಡೆಸಿ, ಗುರುತು ಹಾಕಲಾಗುವುದು. ಅತಿಕ್ರಮಣ ಮಾಡಿದವರು ಅಧಿಕಾರಿಗಳಿಗೆ ಕೆಲಸ ಕೊಡದೆ ತಾವಾಗಿಯೇ ತೆರವು ಮಾಡಿದರೆ ಉತ್ತಮ ಎಂದು ಹೇಳಿದ ಖಾದರ್, ಉಳ್ಳಾಲ ರೈಲ್ವೇ ಕ್ರಾಸಿಂಗ್ ಬಹುದಿನದ ಬೇಡಿಕೆಯನ್ನು ರೈಲ್ವೇ ಇಲಾಖೆ ಒಪ್ಪಿದ್ದು ಎರಡು ಕೋಟಿ ವೆಚ್ಚದಲ್ಲಿ ಅಂಡರ್ ಪಾಸ್ ಮಾಡಲಿದೆ ಎಂದು ಹೇಳಿದರು.
As announced in the state budget by Chief Minister Siddaramaiah, two separate residential educational institutions for minority girls will be established in the Ullal constituency. These institutions will be set up under the Wakf and Minority Welfare Departments with the goal of empowering minority girls through education.
02-09-25 02:37 pm
HK News Desk
Man sets woman on fire, Bangalore: ತನ್ನನ್ನು ಬ...
01-09-25 10:53 pm
Karnataka Police, Warning to Social Media Use...
01-09-25 06:59 pm
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 04:44 pm
Mangalore Correspondent
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
02-09-25 04:31 pm
Mangalore Correspondent
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm