ಬ್ರೇಕಿಂಗ್ ನ್ಯೂಸ್
22-07-25 01:27 pm Mangalore Correspondent ಕರಾವಳಿ
ಮಂಗಳೂರು, ಜುಲೈ 22 : ನಗರದ ಕದ್ರಿ ಕಂಬ್ಲ ಬಳಿಯಲ್ಲಿ ಕೊಡಕ್ಕೆನ ಹೆಸರಿನ ಹೊಟೇಲ್ ನಡೆಸುತ್ತಿದ್ದ ನಿತಿನ್ ಪೂಜಾರಿ (41) ಹಣಕಾಸು ಮುಗ್ಗಟ್ಟಿನಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಜೆಪಿ ನಾಯಕರು, ಶಾಸಕರ ಜೊತೆಗೆ ಒಡನಾಟದಲ್ಲಿದ್ದ ನಿತಿನ್ ಎಂಟು ತಿಂಗಳ ಹಿಂದೆ ಸ್ವಂತ ಉದ್ಯಮ ಸ್ಥಾಪನೆಯ ಉದ್ದೇಶದಿಂದ ಕದ್ರಿಯಲ್ಲಿ ಕೊಡಕ್ಕೆನ ಹೆಸರಿನ ಹೊಟೇಲ್ ಸ್ಥಾಪನೆ ಮಾಡಿದ್ದರು. ಅದಕ್ಕೂ ಹಿಂದೆ ಮುಡಿಪಿನಲ್ಲಿ ಪಾಲುದಾರಿಕೆಯಲ್ಲಿ ಹೊಟೇಲ್ ನಡೆಸುತ್ತಿದ್ದರು. ನಾನ್ ವೆಜ್ ಊಟಕ್ಕಾಗಿ ಕದ್ರಿಯ ಹೊಟೇಲ್ ಅಲ್ಪ ಸಮಯದಲ್ಲಿ ಒಳ್ಳೆಯ ಹೆಸರು ಪಡೆದಿತ್ತು.

ಇತ್ತೀಚೆಗೆ ಹೊಟೇಲ್ ಮತ್ತು ಹೈಫೈ ಲೈಫ್ ನಿಂದಾಗಿ ಆರ್ಥಿಕ ಸಂಕಷ್ಟ ಉಂಟಾಗಿತ್ತು ಎಂದು ಅವರ ಆಪ್ತರು ಹೇಳುತ್ತಾರೆ. ನಿನ್ನೆ ರಾತ್ರಿ ಮಣ್ಣಗುಡ್ಡದ ಗುಂಡೂರಾವ್ ಲೇನಲ್ಲಿರುವ ಫ್ಲಾಟ್ ನಲ್ಲಿ ವಿಷ ಸೇವಿಸಿದ್ದು ತಡರಾತ್ರಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಸುಕಿನಲ್ಲಿ ಮೃತಪಟ್ಟಿದ್ದಾರೆ. ಓರಗೆಯ ಗೆಳೆಯರು ನಿತಿನ್ ಫೋಟೊವನ್ನು ಸ್ಟೇಟಸ್ ಹಾಕಿ ಕಂಬನಿ ಗರೆದಿದ್ದಾರೆ. ನಿತಿನ್ ಅವಿವಾಹಿತರಾಗಿದ್ದು ಗೆಳೆಯರ ಒಡನಾಟ ಹೆಚ್ಚಿತ್ತು. ಮೂಲತಃ ಮರೋಳಿಯವರಾಗಿದ್ದು ಇತ್ತೀಚೆಗಷ್ಟೇ ಮಣ್ಣಗುಡ್ಡದಲ್ಲಿ ಫ್ಲಾಟ್ ಖರೀದಿಸಿ ತಾಯಿ ಜೊತೆಗೆ ನೆಲೆಸಿದ್ದರು.
In a tragic incident, Nithin Poojary (41), the owner of Hotel Kodakkene located near Kadri Kambla in Mangaluru, reportedly died by suicide after consuming poison, allegedly due to financial distress.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am