ಬ್ರೇಕಿಂಗ್ ನ್ಯೂಸ್
23-07-25 10:25 pm Mangalore Correspondent ಕರಾವಳಿ
ಮಂಗಳೂರು, ಜುಲೈ 23 : ಇತ್ತೀಚೆಗೆ ಜೈಲಿನಲ್ಲಿ ಸಹ ಕೈದಿಯೊಬ್ಬನಿಗೆ ಮೂವರು ಕೈದಿಗಳು ಸೇರಿ ಹೊಡೆದು ಹಲ್ಲೆ ಮಾಡಿದ್ದಲ್ಲದೆ, ಆತನಿಗೆ ಒತ್ತಡ ಹೇರಿ ಹಫ್ತಾ ವಸೂಲಿ ಮಾಡಿದ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜೈಲು ಒಳಗಡೆಯೇ ಹಫ್ತಾ ವಸೂಲಿ ಪ್ರಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ, ಆರೋಪಿತ ನಾಲ್ವರು ಕೈದಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಉಳ್ಳಾಲ ಭಾಗದ ಕ್ರಿಮಿನಲ್ ಗಳಾದ ಧನುಷ್ ಭಂಡಾರಿ ಅಲಿಯಾಸ್ ಧನು, ದಿಲೇಶ್ ಬಂಗೇರ, ಲಾಯ್ ವೇಗಸ್, ಸಚಿನ್ ತಲಪಾಡಿ ಎಂಬ ನಾಲ್ವರು ಕೈದಿಗಳ ವಿರುದ್ಧ ಬಿಎನ್ಎಸ್ ಸೆಕ್ಷನ್ 308(4) ಮತ್ತು 395) ಪ್ರಕಾರ ಜೈಲಿನೊಳಗಡೆ ಹಫ್ತಾ ವಸೂಲಿ ಮಾಡಿದ ಬಗ್ಗೆ ಪ್ರಕರಣ ದಾಖಲಿಸಲಾಗಿತ್ತು. ಇವರು ಹಲ್ಲೆ ಮಾಡಿದ್ದಲ್ಲದೆ, ವಿಧೇಯ ಕೈದಿಯೊಬ್ಬನಿಗೆ ಒತ್ತಡ ಹೇರಿ ಆತನ ಪತ್ನಿಯ ಮೂಲಕ 20 ಸಾವಿರ ರೂ. ವಸೂಲಿ ಮಾಡಿದ್ದರು. ಕೈದಿ ತನ್ನ ಪತ್ನಿಗೆ ಹೇಳಿ, ಆರೋಪಿತರು ಸೂಚಿಸಿದ್ದ ಗೂಗಲ್ ಪೇ ನಂಬರಿಗೆ 20 ಸಾವಿರ ರೂಪಾಯಿ ಹಾಕಿಸಿದ್ದ.
ಇತ್ತೀಚೆಗೆ ಎಸಿಪಿ ನೇತೃತ್ವದ ಪೊಲೀಸರು ಜೈಲು ತಪಾಸಣೆ ಸಂದರ್ಭದಲ್ಲಿ ಶೋಷಣೆಗೊಳಗಾದ ಕೈದಿ ಸ್ವತಃ ಈ ಬಗ್ಗೆ ದೂರು ಹೇಳಿಕೊಂಡಿದ್ದು, 20 ಸಾವಿರ ರೂ. ಮೊತ್ತವನ್ನು ಪತ್ನಿಯ ಮೂಲಕ ಹಾಕಿಸಿದ್ದಾಗಿಯೂ ತಿಳಿಸಿದ್ದ. ಈ ವಿಚಾರದಲ್ಲಿ ಬರ್ಕೆ ಠಾಣೆಯಲ್ಲಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು. ಇದಲ್ಲದೆ, ಆರೋಪಿಗಳು ಈಗಾಗಲೇ ಒಂದು ಕೇಸಿನಲ್ಲಿ ಜೈಲಿನಲ್ಲಿದ್ದು, ಒಂದಕ್ಕಿಂತ ಹೆಚ್ಚು ಕೇಸಿನಲ್ಲಿ ಭಾಗಿಯಾಗಿ ಕೂಟ ಕಟ್ಟಿಕೊಂಡು ಅಪರಾಧ ಎಸಗುತ್ತಿದ್ದರೆ ಅಂತಹವರ ಮೇಲೆ ಕೋಕಾ ಕಾಯ್ದೆ ಹೇರಬಹುದಾಗಿದೆ. ಸಂಘಟಿತ ಅಪರಾಧ ಚಟುವಟಿಕೆ, ಕಾನೂನು ವಿರೋಧಿ ಕೃತ್ಯ ನಡೆಸುತ್ತಿದ್ದಾರೆಂಬ ನೆಲೆಯಲ್ಲಿ ಕೆ.-ಕೋಕಾ ಕಾಯ್ದೆಯಡಿ ನಾಲ್ವರ ವಿರುದ್ಧವೂ ಕೇಸು ದಾಖಲಿಸಲಾಗಿದೆ.
ಕೋಕಾ ಪ್ರಕರಣದಲ್ಲಿ ಆರೋಪ ಸಾಬೀತಾದರೆ ಕನಿಷ್ಠ 5 ವರ್ಷ ಅಥವಾ ಜೀವಾವಧಿ ಶಿಕ್ಷೆಗೆ ಅವಕಾಶ ಇದೆ. ಇವರ ಕೃತ್ಯದಿಂದಾಗಿ ಸಂತ್ರಸ್ತರು ಮೃತಪಟ್ಟರೆ ಆರೋಪಿಗಳಿಗೆ ಜೀವಾವಧಿ ಅಥವಾ ಗಲ್ಲು ಶಿಕ್ಷೆಯನ್ನೂ ವಿಧಿಸಬಹುದಾಗಿದೆ. ಸಂಘಟಿತ ಅಪರಾಧ ಕೃತ್ಯದಲ್ಲಿ ಯಾವುದೇ ವ್ಯಕ್ತಿ ಭಾಗಿಯಾಗಿದ್ದಾನೆ ಅಂದರೂ, ಆತ ಇನ್ನಾವುದೇ ಕೇಸಿನಲ್ಲಿ ಇಲ್ಲದಿದ್ದರೂ ಅವರಿಗೆ 5 ವರ್ಷ ಶಿಕ್ಷೆ ವಿಧಿಸಲು ಅವಕಾಶ ಇರುತ್ತದೆ. ಈ ಪ್ರಕರಣವನ್ನು ಡಿಎಸ್ಪಿ ದರ್ಜೆಯ ಅಧಿಕಾರಿ ತನಿಖೆ ನಡೆಸಬೇಕೆಂಬ ನಿಯಮವಿದ್ದು ಇದರಂತೆ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಶ್ರೀಕಾಂತ್ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
In a shocking incident reported from a Mangaluru prison, four inmates have been booked under the stringent Karnataka Control of Organised Crimes Act (KCOCA) for allegedly assaulting and extorting money from a fellow inmate. The accused reportedly forced the victim to make a payment of ₹20,000 through Google Pay via his wife.
02-09-25 02:37 pm
HK News Desk
Man sets woman on fire, Bangalore: ತನ್ನನ್ನು ಬ...
01-09-25 10:53 pm
Karnataka Police, Warning to Social Media Use...
01-09-25 06:59 pm
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 04:44 pm
Mangalore Correspondent
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
02-09-25 04:31 pm
Mangalore Correspondent
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm