ಬ್ರೇಕಿಂಗ್ ನ್ಯೂಸ್
25-07-25 06:05 pm Mangalore Correspondent ಕರಾವಳಿ
ಮಂಗಳೂರು, ಜುಲೈ 25 : ಧರ್ಮಸ್ಥಳ ಹೆಣ ಹೂತ ಪ್ರಕರಣದಲ್ಲಿ ಎಸ್ಐಟಿ ರಚನೆಗೊಂಡು ಐದು ದಿನಗಳ ನಂತರ ಪೊಲೀಸ್ ಅಧಿಕಾರಿಗಳು ತನಿಖೆಗೆ ಇಳಿದಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿ, ಡಿಐಜಿ ದರ್ಜೆಯ ಎಂ.ಎನ್.ಅನುಚೇತ್ ಶುಕ್ರವಾರ ಸಂಜೆ ನಾಲ್ಕು ಗಂಟೆಗೆ ಮಂಗಳೂರಿಗೆ ಆಗಮಿಸಿದ್ದು ತನಿಖಾ ತಂಡದ ಸದಸ್ಯರ ಜೊತೆಗೆ ನಗರದ ಮಲ್ಲಿಕಟ್ಟೆ ಐಬಿಯಲ್ಲಿ ಕುಳಿತು ಸಭೆ ನಡೆಸಿದ್ದಾರೆ.
ಸಂಜೆ ನಾಲ್ಕು ಗಂಟೆಗೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಅನುಚೇತ್ ನೇರವಾಗಿ ನಗರದ ಓಷ್ಯನ್ ಪರ್ಲ್ ಹೊಟೇಲ್ ಆಗಮಿಸಿದ್ದಾರೆ. ಅಲ್ಲಿಂದ ಮಲ್ಲಿಕಟ್ಟೆಯ ಸರಕಾರಿ ಅತಿಥಿ ಬಂಗಲೆಗೆ ತೆರಳಿ ಎಸ್ಐಟಿ ತಂಡದ ಇತರ ಸದಸ್ಯರೊಂದಿಗೆ ಮಾತುಕತೆ ನಡೆಸಿದ್ದಾರೆ. ಎಸ್ಐಟಿ ತಂಡದಲ್ಲಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ಹೊರತುಪಡಿಸಿ ಉಳಿದವರು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ವಿವಿಧ ಠಾಣೆಗಳ ಇನ್ಸ್ ಪೆಕ್ಟರ್, ಎಸ್ಐ ಇನ್ನಿತರ ಸಿಬಂದಿಯನ್ನು ನೇಮಿಸಲಾಗಿದೆ.




ಏಂಟಿ ನಕ್ಸಲ್ ಟೀಮಿನಲ್ಲಿದ್ದ ಜಿತೇಂದ್ರ ಕುಮಾರ್ ದಯಾಮ ತನಿಖಾ ತಂಡದಲ್ಲಿ ಎಸ್ಪಿ ಇದ್ದಾರೆ. ಈಗ ಮಂಗಳೂರಿಗೆ ಬಂದಿರುವ ತಂಡದಲ್ಲಿ ಯಾರೆಲ್ಲ ಇದ್ದಾರೆ ಎನ್ನುವುದು ಖಚಿತವಾಗಿಲ್ಲ. 2-3 ಪೊಲೀಸರ ವಾಹನಗಳಿದ್ದು, ಐಪಿಎಸ್ ಅಧಿಕಾರಿ ಅನುಚೇತ್ ಕೂಡ ಮಂಗಳೂರಿಗೆ ಬಂದು ತನಿಖಾ ತಂಡದ ಜೊತೆ ಸೇರಿದ್ದಾರೆ. ಧರ್ಮಸ್ಥಳ ಪ್ರಕರಣದ ಬಗ್ಗೆ ದಕ್ಷಿಣ ಕನ್ನಡ ಎಸ್ಪಿಯಿಂದ ಮಾಹಿತಿ ಪಡೆದು ಆನಂತರ ಧರ್ಮಸ್ಥಳ ತೆರಳುವ ಸಾಧ್ಯತೆಯಿದೆ. ಜುಲೈ 3ರಂದು ಧರ್ಮಸ್ಥಳದಲ್ಲಿ ಈ ಹಿಂದೆ ಸ್ವಚ್ಛತಾ ಕಾರ್ಮಿಕನಾಗಿದ್ದೆ ಎಂದು ಹೇಳಿಕೊಂಡಿದ್ದ ವ್ಯಕ್ತಿ ತಾನು ನೂರಾರು ಹೆಣಗಳನ್ನು ಕಾಡಿನಲ್ಲಿ ಹೂತು ಹಾಕಿದ್ದೆ, ಪ್ರಾಯಶ್ಚಿತ್ತಕ್ಕಾಗಿ ಎಲ್ಲವನ್ನೂ ಹೇಳುತ್ತೇನೆ, ಹೆಣ ಹೂತಿದ್ದನ್ನು ತೆಗೆದು ತೋರಿಸುತ್ತೇನೆ ಎಂದು ಹೇಳಿದ್ದ. ಈ ವಿಚಾರ ಇಡೀ ದೇಶದಲ್ಲಿ ಸುದ್ದಿಯಾಗಿದ್ದಲ್ಲದೆ, ರಾಷ್ಟ್ರೀಯ ಮಾಧ್ಯಮಗಳು ಮತ್ತು ಕೇರಳದ ಮಾಧ್ಯಮಗಳು ಹೆಚ್ಚು ಬೆನ್ನು ಬಿದ್ದಿವೆ. ಇದರಿಂದ ಒತ್ತಡಕ್ಕೆ ಬಿದ್ದ ರಾಜ್ಯ ಸರಕಾರ ಘಟನೆ ಬಗ್ಗೆ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶ ಮಾಡಿತ್ತು.
Five days after the Karnataka government constituted a Special Investigation Team (SIT) to probe the alleged mass burial case in Dharmasthala, senior police officers have officially launched the investigation. DIG M.N. Anucheth, a key member of the SIT, arrived in Mangaluru on Friday evening at 4 PM to initiate proceedings on the ground.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm