ಬ್ರೇಕಿಂಗ್ ನ್ಯೂಸ್
26-07-25 08:20 pm Mangalore Correspondent ಕರಾವಳಿ
ಮಂಗಳೂರು, ಜುಲೈ 26 : ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ನೇಮಿಸಿರುವ ವಿಶೇಷ ತನಿಖಾ ತಂಡದಿಂದ ಎಸ್ಪಿ ಸಿ.ಎ.ಸೈಮನ್ ತಮ್ಮನ್ನು ಹೊರಗಿಡುವಂತೆ ಪತ್ರ ಬರೆದಿದ್ದಾರೆ.
ಈಗಾಗಲೇ ಐಪಿಎಸ್ ಅಧಿಕಾರಿ ಸೌಮ್ಯಲತಾ ಎಸ್ಐಟಿ ತಂಡದಿಂದ ಹೊರಗುಳಿಯುವುದಾಗಿ ಪತ್ರ ಬರೆದು ಕೇಳಿಕೊಂಡಿದ್ದರು. ಇದೀಗ ಎಸ್ಪಿ ಸೈಮನ್ ಕೂಡ ತಮ್ಮನ್ನು ತನಿಖಾ ತಂಡದಿಂದ ಕೈಬಿಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಸೈಮನ್ ಅವರು ಧರ್ಮಸ್ಥಳ ಶಿಕ್ಷಣ ಸಂಸ್ಥೆಗೆ ಸೇರಿದ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದ ಹಿನ್ನಲೆ ನಿಷ್ಪಕ್ಷಪಾತ ತನಿಖೆಗೆ ಅಡ್ಡಿಯಾಗಬಹುದು ಎಂಬ ನೆಲೆಯಲ್ಲಿ ತನಿಖಾ ತಂಡದಿಂದ ಹಿಂದೆ ಸರಿಯುತ್ತಿರುವುದಾಗಿ ಮನವಿ ಸಲ್ಲಿಸಿದ್ದಾರೆ.
ರಾಜ್ಯ ಸರ್ಕಾರವು ಕಳೆದ ಭಾನುವಾರ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಂತಿ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಹಿರಿಯ ಐಪಿಎಸ್ ಅಧಿಕಾರಿಗಳಾದ ಎಂ.ಎನ್ ಅನುಚೇತ್, ಸೌಮ್ಯಲತಾ ಮತ್ತು ಜಿತೇಂದ್ರ ಕುಮಾರ್ ದಯಾಮ ಅವರನ್ನು ತಂಡಕ್ಕೆ ಸೇರಿಸಲಾಗಿತ್ತು. ಸೌಮ್ಯಲತಾ ಅವರು ವೈಯಕ್ತಿಕ ಕಾರಣಕ್ಕೆ ತಮ್ಮನ್ನು ಕೈಬಿಡುವಂತೆ ಮನವಿ ಮಾಡಿದ್ದರು. ಆ ಜಾಗಕ್ಕೆ ಬೇರೊಬ್ಬ ಮಹಿಳಾ ಅಧಿಕಾರಿಯನ್ನು ನೇಮಕ ಮಾಡುವುದಾಗಿ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದರು.
ಇದೇ ವೇಳೆ, ಡಿಐಜಿ ಅನುಚೇತ್ ಮತ್ತು ದಯಾಮ ಅವರನ್ನು ಒಳಗೊಂಡ ತನಿಖಾ ತಂಡ ಪ್ರಕರಣದ ತನಿಖೆ ಆರಂಭಿಸಿದೆ. ಸೈಮನ್ ಅವರು ಡಿಸಿಆರ್ ಇ ಮಂಗಳೂರು ವಿಭಾಗದಲ್ಲಿ ಎಸ್ಪಿ ಆಗಿ ಕರ್ತವ್ಯದಲ್ಲಿದ್ದಾರೆ.
In a new development in the Dharmasthala buried bodies case, Superintendent of Police (SP) C.A. Simon has requested to be relieved from the Special Investigation Team (SIT) constituted by the Karnataka government. He cited a potential conflict of interest due to his past association with an educational institution in Dharmasthala where he studied.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm