ಬ್ರೇಕಿಂಗ್ ನ್ಯೂಸ್
27-07-25 07:49 pm Mangalore Correspondent ಕರಾವಳಿ
ಮಂಗಳೂರು, ಜುಲೈ.27: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನಡೆದ ಪದ್ಮಲತಾ, ವೇದವಲ್ಲಿ, ಸೌಜನ್ಯಾ ಮತ್ತು ಯಮುನಾ ಸೇರಿದಂತೆ ಹೆಣ್ಣುಮಕ್ಕಳ ಅಸಹಜ ಸಾವಿನ ಪ್ರಕರಣಗಳನ್ನು ಮರುತನಿಖೆಗೆ ಒಳಪಡಿಸಬೇಕು ಮತ್ತು ಹೆಣಗಳನ್ನು ಹೂತು ಹಾಕಲಾಗಿದೆ ಎನ್ನಲಾಗುವ ಪ್ರಕರಣದ ನ್ಯಾಯಯುತ ತನಿಖೆ ನಡೆಯಬೇಕು ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಸಮ್ಮೇಳನ ಆಗ್ರಹಿಸಿತು.
ನಗರದಲ್ಲಿ ಭಾನುವಾರ ನಡೆದ ಸಮ್ಮೇಳನದಲ್ಲಿ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷೆ ಈಶ್ವರಿ ಬಳ್ಳುಂಜ ನಿರ್ಣಯ ಮಂಡಿಸಿದರು. ಅಧ್ಯಕ್ಷೆ ಜಯಂತಿ ಬಿ.ಶೆಟ್ಟಿ ಅನುಮೋದಿಸಿದರು. ಸಭಿಕರು ಚಪ್ಪಾಳೆ ತಟ್ಟಿ ನಿರ್ಣಯವನ್ನು ಬೆಂಬಲಿಸಿದರು.
'ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರ ನಡೆಸಿ ಕೊಲೆ ಮಾಡಲಾದ ಹಲವಾರು ಅಪರಿಚಿತ ಹೆಣ್ಣುಮಕ್ಕಳ ಜರ್ಜೆರಿತ ಮೃತದೇಹಗಳನ್ನು ನನ್ನಿಂದ ಬಲವಂತವಾಗಿ ಮಣ್ಣು ಮಾಡಿಸಿದ್ದಾರೆ' ಎಂದು ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿದ್ದುದಾಗಿ ಹೇಳಿಕೊಂಡಿರುವ ವ್ಯಕ್ತಿಯೊಬ್ಬರು ಹೇಳಿದ ನಂತರ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಹೆಣ್ಣುಮಕ್ಕಳ ಅಸಹಜ ಸಾವು, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಮತ್ತೊಮ್ಮೆ ಮುನ್ನೆಲೆಗೆ ಬಂದಿವೆ' ಎಂದು ನಿರ್ಣಯದಲ್ಲಿ ಹೇಳಲಾಗಿದೆ.
'ಸಾರ್ವಜನಿಕರ ಒತ್ತಡದ ನಂತರ ಧರ್ಮಸ್ಥಳ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಆಗಿದೆ. ಇದರಿಂದ ಜನರಲ್ಲಿ ಆಶಾಭಾವ ಮೂಡಿದೆ. ಆದರೆ ಆಡಳಿತ ಮತ್ತು ವಿರೋಧ ಪಕ್ಷಗಳು ಪ್ರಕರಣದ ಕುರಿತು ವ್ಯಕ್ತಪಡಿಸುತ್ತಿರುವ ನಿಲುವುಗಳನ್ನು ಗಮನಿಸಿದರೆ ನಿಷ್ಪಕ್ಷಪಾತ ತನಿಖೆ ನಡೆಯುವ ಬಗ್ಗೆ ಆತಂಕ ಸಂದೇಹ ಮೂಡಿದೆ' ಎಂಬ ಅಭಿಪ್ರಾಯ ನಿರ್ಣಯದಲ್ಲಿ ವ್ಯಕ್ತವಾಯಿತು.
ಜನರಲ್ಲಿ ಮೂಡಿರುವ ಆತಂಕಗಳನ್ನು ಗಮನಿಸಿ ಸರ್ಕಾರ ವಿಶೇಷ ತಂಡಕ್ಕೆ ಮುಕ್ತ ಅವಕಾಶ ನೀಡಿ, ನ್ಯಾಯಯುತ ತನಿಖೆ ನಡೆಯುವುದಾಗಿ ಖಾತರಿಪಡಿಸಬೇಕು. ಸಾಕ್ಷಿ ಮತ್ತು ಅವರ ಪರವಾದ ವಕೀಲರಿಗೆ ಗರಿಷ್ಠ ಭದ್ರತೆ ಒದಗಿಸಬೇಕು. ಹೆಣ ಹೂತುಹಾಕಲಾಗಿದೆ ಎಂಬ ಪ್ರಕರಣಕ್ಕೆ ಮಾತ್ರ ತನಿಖೆಯನ್ನು ಸೀಮಿತಗೊಳೊಸದೆ 80ರ ದಶಕದಲ್ಲಿ ಅಪಹರಣಕ್ಕೆ ಒಳಗಾಗಿ ಕೊಲೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ, ಪತ್ತೆಹಚ್ಚಲಾಗದ ಪ್ರಕರಣ ಎಂದು ಷರಾ ಬರೆದಿರುವ ವಿದ್ಯಾರ್ಥಿನಿ ಪದ್ಮಲತಾ, ಸೌಜನ್ಯಾ ಪ್ರಕರಣ, ಮಾವುತ ನಾರಾಯಣ ಅವರ ಸಹೋದರಿ ಯಮುನಾ ಕೊಲೆ ಪ್ರಕರಣಗಳನ್ನೂ ತನಿಖೆಗೆ ಒಳಪಡಿಸಬೇಕು' ಎಂದು ನಿರ್ಣಯದಲ್ಲಿ ಆಗ್ರಹಿಸಲಾಯಿತು.
A renewed demand for a thorough reinvestigation into a series of mysterious and unnatural deaths of women in Dharmasthala village—including those of Padmalatha, Vedavalli, Sowjanya, and Yamuna—has been voiced by the All India Democratic Women’s Association (AIDWA). The organization has urged the government to ensure a transparent probe by the newly formed Special Investigation Team (SIT).
19-02-26 03:11 pm
HK News Desk
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
19-02-26 04:09 pm
Mangalore Correspondent
ಐರ್ಲೆಂಡಿನಲ್ಲಿ ಕಡಬ ಮೂಲದ ಯುವಕ ನಿಗೂಢ ಸಾವು ; ಆತ್ಮ...
19-02-26 03:54 pm
ಮಂಜನಾಡಿ ದುರಂತ ; ಇಬ್ಬರು ಮಕ್ಕಳು, ತನ್ನೆರಡು ಕಾಲುಗ...
18-02-26 11:24 pm
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm