ಬ್ರೇಕಿಂಗ್ ನ್ಯೂಸ್
28-07-25 10:51 am Mangalore Correspondent ಕರಾವಳಿ
ಸುಳ್ಯ, ಜುಲೈ 28 : ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಚತ್ರಪ್ಪಾಡಿ ಎಂಬಲ್ಲಿ ಜುಲೈ 27ರಂದು ಬೀಸಿದ ಭಾರೀ ಗಾಳಿ ಮಳೆಯಿಂದ ವೃದ್ದೆಯೊಬ್ಬರ ಮೇಲೆ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಸಂಭವಿಸಿದೆ.
ಮೃತರನ್ನು ದಿ. ಗೋಪಾಲ ಭಂಡಾರಿ ಅವರ ಪತ್ನಿ ರುಕ್ಮಿಣಿ (62) ಎಂದು ಗುರುತ್ತಿಸಲಾಗಿದೆ. ರುಕ್ಮಿಣಿ ಅವರು ಮನೆಯಲ್ಲಿ ಒಬ್ಬರೇ ಇರುತ್ತಿದ್ದರು. ಮುಂಜಾನೆ ಮನೆಯ ಹೊರಗಡೆ ಕೆಲಸ ನಿರತರಾಗಿದ್ದಾಗ ಬಲವಾದ ಗಾಳಿ ಮತ್ತು ಮಳೆಯಿಂದಾಗಿ ಮನೆ ಸಮೀಪದ ಮರದ ಒಂದು ಭಾಗ (ಗೆಲ್ಲು) ತುಂಡಾಗಿ ಅವರ ಮೇಲೆ ಬಿದ್ದಿದೆ. ಪರಿಣಾಮವಾಗಿ ರುಕ್ಮಿಣಿಯವರು ಮರದಡಿಯಲ್ಲಿ ಸಿಲುಕಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳೀಯರು ಘಟನೆಯ ವಿಚಾರ ತಿಳಿದು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


ಹಲವು ಕಡೆಗಳಲ್ಲಿ ಅಪಾರ ಹಾನಿ:
ಸುಳ್ಯ ತಾಲೂಕಿನಾದ್ಯಂತ ಭಾರಿ ಗಾಳಿ-ಮಳೆಗೆ ಮೆಸ್ಕಾಂಗೆ ಅಪಾರ ನಷ್ಟ ಸಂಭವಿಸಿದೆ. ತಾಲೂಕಿನ ವಿವಿಧೆಡೆ ಮರ ಬಿದ್ದು ನೂರಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ವಿದ್ಯುತ್ ಪೂರೈಕೆಯಲ್ಲಿ ವ್ಯಾಪಕ ವ್ಯತ್ಯಯ ಉಂಟಾಗಿದೆ. ಮರ, ಮರದ ಗೆಲ್ಲು ಬಿದ್ದ ಪರಿಣಾಮ ಸುಮಾರು 30 ಹೆಚ್.ಟಿ. ಕಂಬಗಳು, 75ರಷ್ಟು ಎಲ್.ಟಿ. ಕಂಬಗಳು ಸೇರಿದಂತೆ ಒಟ್ಟು 105 ವಿದ್ಯುತ್ ಕಂಬಗಳು ಹಾಗೂ 3 ವಿದ್ಯುತ್ ಪರಿವರ್ತಕಗಳು ಹಾನಿಗೊಂಡಿದೆ.
ಉರುಳುತ್ತಿವೆ ಮರಗಳು:
ಮೆಸ್ಕಾಂ ವತಿಯಿಂದ ವಿದ್ಯುತ್ ಲೈನ್ ದುರಸ್ತಿ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ. ಗಾಳಿಮಳೆಗೆ ನಡುಗಲ್ಲು- ಹರಿಹರ ರಸ್ತೆಯ ಕೊರಂಬಟ ಎಂಬಲ್ಲಿ ರಸ್ತೆಗೆ ಮರ ಬಿದ್ದು ಸಂಚಾರಕ್ಕೆ ತಡೆ ಉಂಟಾಯಿತು. ನಾಲ್ಕೂರು ಗ್ರಾಮದ ಹಾಲೆಮಜಲು, ಹುಲ್ಲುಕುಮೇರಿ, ಚಿಡ್ಕ ದೇರಪ್ಪಜ್ಜನಮನೆ, ಹೊಸಹಳ್ಳಿ ಪ್ರದೇಶಗಳಲ್ಲಿ ಭಾರಿ ಗಾಳಿ - ಮಳೆಗೆ ಮರ ಬಿದ್ದು ಹಾಗೂ ಗಾಳಿಗೆ ಅಡಿಕೆ ಮರಗಳು ಧರೆಗುರುಳಿ ನಷ್ಟ ಸಂಭವಿಸಿದೆ.
ತುಂಬಿ ಹರಿಯುತ್ತಿದೆ ಪಯಸ್ವಿನಿ,ಕುಮಾರಧಾರಾ:
ಅಮರಪಡ್ನೂರು ಗ್ರಾಮದ ಮೂಡೆಕಲ್ಲು ಎಂಬಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ರಸ್ತೆ ತಡೆ ಉಂಟಾಯಿತು. ಸುಳ್ಯದ ಪಯಸ್ವಿನಿ, ಬೆಳ್ಳಾರೆಯ ಗೌರಿ ಹೊಳೆಗಳು, ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿ ಸೇರಿದಂತೆ ತೋಡು, ಹಳ್ಳಗಳು ತುಂಬಿ ಹರಿಯುತ್ತಿದೆ. ಸುಳ್ಯ ನಗರ, ಬೆಳ್ಳಾರೆ, ನಿಂತಿಕಲ್ಲು ಗುತ್ತಿಗಾರು, ಜಾಲ್ಲೂರು, ಸಂಪಾಜೆ, ಕೊಲ್ಲಮೊಗ್ರು ಭಾಗಗಳಲ್ಲೂ ಧಾರಾಕಾರ ಮಳೆ ಮುಂದುವರಿದಿದೆ.
ಮನೆ ಮೇಲೆ ಬಿದ್ದ ಸಾಗುವಾನಿ ಮರ:
ಮೆಟ್ಟಿನಡ್ಕ ಎಂಬಲ್ಲಿ ಮನೆಗೆ ಮರ ಬಿದ್ದು ಮನೆ ಬಹುತೇಕ ಧ್ವಂಸವಾಗಿದೆ. ನಾಲ್ಕೂರು ಗ್ರಾಮದ ಅಮೆ ಮನೆ ಸುಧೀರ್ ಅವರ ಮನೆಗೆ ಸಾಗುವಾನಿ ಮರ ಬಿದ್ದು ಮನೆ ಸಂಪೂರ್ಣ ಧ್ವಂಸಗೊಂಡಿರುತ್ತದೆ. ಮನೆಯಲ್ಲಿದ್ದ ಅವರ ಸಹೋದರ ಕುಶಾಲಪ್ಪ ಅವರ ಹಣೆಯ ಭಾಗಕ್ಕೆ ಮತ್ತು ತುಟಿಗೆ ಗಾಯವಾಗಿದ್ದು ಇನುಳಿದಂತೆ ಇತರ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
A severe thunderstorm accompanied by strong winds in Sullia taluk caused widespread damage on July 27, including the tragic death of an elderly woman in the village of Chathrappadi, Nalakooru.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am