ಬ್ರೇಕಿಂಗ್ ನ್ಯೂಸ್
28-07-25 10:41 pm Mangalore Correspondent ಕರಾವಳಿ
ಮಂಗಳೂರು, ಜುಲೈ 28 : ಧರ್ಮಸ್ಥಳ ಹೆಣ ಹೂತ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ದೂರುದಾರ ವ್ಯಕ್ತಿಯನ್ನು ಸೋಮವಾರ ಧರ್ಮಸ್ಥಳಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಿದ್ದಾರೆ. ಮಧ್ಯಾಹ್ನದಿಂದ ಸಂಜೆಯ ಆರು ಗಂಟೆ ವರೆಗೆ ಸಮಾಧಿ ಸ್ಥಳವನ್ನು ಗುರುತಿಸಲಾಗಿದ್ದು, 13 ಜಾಗಗಳನ್ನು ಗುರುತಿಸಿ ಪೊಲೀಸ್ ಭದ್ರತೆ ನೀಡಲಾಗಿದೆ.
ಮಧ್ಯಾಹ್ನ ವೇಳೆಗೆ ಬಿಗಿ ಭದ್ರತೆಯಲ್ಲಿ ಪೊಲೀಸರು ದೂರುದಾರ ವ್ಯಕ್ತಿಯನ್ನು ನೇತ್ರಾವತಿ ಸ್ನಾನಘಟ್ಟದ ಬಳಿಗೆ ಕರೆತಂದಿದ್ದು, ಅಲ್ಲಿಂದ ರಸ್ತೆ ಬದಿಯ ರಕ್ಷಿತಾರಣ್ಯದ ಒಳಗಡೆ ತೆರಳಿದ್ದಾರೆ. ಎಸ್ಐಟಿ ಅಧಿಕಾರಿಗಳು, ಸ್ಥಳೀಯ ಪೊಲೀಸರು ಮತ್ತು ಡಿಎಆರ್ ಪೊಲೀಸರು ಇದ್ದರು. ಇದಲ್ಲದೆ, ಎಎನ್ಎಫ್ ಪೊಲೀಸ್ ತುಕಡಿಯನ್ನೂ ಸ್ಥಳಕ್ಕೆ ಕರೆಸಲಾಗಿದೆ.





ಕಾಡಿನ ಒಳಗಡೆ ಒಂದೊಂದೇ ಜಾಗವನ್ನು ಗುರುತಿಸಲಾಗಿದ್ದು, ಸಂಜೆಯ ವರೆಗೆ 13 ಸ್ಥಳಗಳನ್ನು ಗುರುತು ಹಾಕಲಾಗಿದೆ ಎಂದು ಅಧಿಕಾರಿಗಳಿಂದ ತಿಳಿದುಬಂದಿದೆ. 15 ಸಮಾಧಿ ಜಾಗವನ್ನು ಗುರುತಿಸಲು ಲೆಕ್ಕ ಹಾಕಿದ್ದರೂ, ಸಂಜೆಯ ವೇಳೆಗೆ ಮಳೆ ಬಂದಿದ್ದು ಮತ್ತು ಕತ್ತಲು ಆವರಿಸಿದ್ದರಿಂದ ಸ್ಥಳ ಶೋಧವನ್ನು ನಿಲ್ಲಿಸಲಾಯಿತು. ಪೊಲೀಸ್ ಬ್ಯಾರಿಕೇಡ್ ಹಾಕಿ ಸಮಾಧಿ ಸ್ಥಳವನ್ನು ಮಾರ್ಕ್ ಹಾಕಲಾಗಿದ್ದು, ಅಲ್ಲಿ ಎಎನ್ಎಫ್ ಪಡೆಯ ಶಸ್ತ್ರಸಜ್ಜಿತ ಪಡೆಯನ್ನು ನಿಯೋಜಿಸಲಾಗಿದೆ. ಒಂದೊಂದು ಜಾಗದಲ್ಲಿ ಇಬ್ಬರು ಪೊಲೀಸರನ್ನು ಕಾವಲು ಹಾಕಲಾಗಿದೆ.
ಎಸ್ಐಟಿ ತಂಡದ ಎಸ್ಪಿಗಳಾದ ಜಿತೇಂದ್ರ ದಯಾಮ ಮತ್ತು ಸಿಎ ಸೈಮನ್ ನೇತೃತ್ವದಲ್ಲಿ ಸ್ಥಳ ಗುರುತು ಹಾಕಲಾಗಿದೆ. ತಂಡಕ್ಕೆ ನಿಯೋಜನೆಗೊಂಡಿರುವ ವಿವಿಧ ಠಾಣೆಗಳ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರುಗಳೂ ಜೊತೆಗಿದ್ದರು. ದೂರುದಾರ ವ್ಯಕ್ತಿಯನ್ನು ಸ್ಥಳಕ್ಕೆ ಕರೆತರುತ್ತಿದ್ದಂತೆ ಭಾರೀ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿದ್ದು, ಕುತೂಹಲದ ಕಣ್ಣು ನೆಟ್ಟಿದ್ದರು. ಸಮಾಧಿಯನ್ನು ಈಗಲೇ ಅಗೆಯುತ್ತಾರೆಯೇ ಎಂದು ಸ್ಥಳೀಯ ಜನರು ಮತ್ತು ಪೊಲೀಸರು ಮಾಧ್ಯಮ ಮಂದಿಯಲ್ಲಿ ಕೇಳುವಂತಾಗಿತ್ತು. ಆದರೆ ಯಾರ ಪ್ರಶ್ನೆಗಳಿಗೂ ಎಸ್ಐಟಿ ತಂಡ ಉತ್ತರ ನೀಡುತ್ತಿರಲಿಲ್ಲ. ತಮ್ಮ ಪಾಡಿಗೆ ತನಿಖೆಯತ್ತ ಗಮನ ನೆಟ್ಟಿತ್ತು.
ಸದ್ಯಕ್ಕೆ ಸ್ಥಳ ಗುರುತು ಹಾಕುವ ಕೆಲಸ ಮುಂದುವರಿಯುವ ಸಾಧ್ಯತೆಯಿದ್ದು, ಸಮಾಧಿ ಅಗೆತದ ಬಗ್ಗೆ ಬೆಳ್ತಂಗಡಿ ಕೋರ್ಟಿನಿಂದ ಅನುಮತಿ ಪಡೆದು ಶೋಧ ನಡೆಯಲಿದೆ. ತಹಸೀಲ್ದಾರ್ ಅಥವಾ ವಿಭಾಗಾಧಿಕಾರಿ ಸಮ್ಮುಖದಲ್ಲಿ ಸಮಾಧಿ ಅಗೆತ ಆಗಲಿದೆ. ಸದ್ಯಕ್ಕೆ ಗುರುತು ಹಾಕಿರುವ ಸ್ಥಳ ರಕ್ಷಿತಾರಣ್ಯವಾಗಿದ್ದು, ಸ್ಥಳದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಕಂದಾಯ ಅಧಿಕಾರಿಗಳು ಕೂಡ ಇದ್ದರು. ಗುರುತು ಹಾಕಿರುವ ಜಾಗ ಕೆಲವು ಕಡೆ ರಸ್ತೆ ಬದಿಯಲ್ಲಿಯೂ ಇದ್ದು, 15-20 ವರ್ಷಗಳ ಹಿಂದಿನ ಘಟನೆಯಾದ್ದರಿಂದ ಆನಂತರ ಭೌಗೋಳಿಕ ಸ್ಥಿತಿ ಬದಲಾವಣೆ ಆಗಿರುವ ಸಾಧ್ಯತೆಯಿದೆ. ಸ್ನಾನಘಟ್ಟದ ಬಳಿಯ ನೇತ್ರಾವತಿ ತಟದ ಕಾಡಿನಲ್ಲೇ ಸದ್ಯಕ್ಕೆ ಮಾರ್ಕ್ ಹಾಕಲಾಗಿದೆ. ಕಾಡಿನಲ್ಲಿ ಮಳೆಯಿಂದಾಗಿ ತಿಗಣೆ ಕಾಟವೂ ಜೋರಾಗಿದ್ದು ಪೊಲೀಸರು ಅದನ್ನು ಸಹಿಸಿಕೊಂಡೇ ಕೆಲಸ ನಿರ್ವಹಿಸಬೇಕಿದ್ದರೆ, ಮಾಧ್ಯಮ ತಂಡವನ್ನು ದೂರವೇ ನಿಲ್ಲಿಸಿದ್ದರಿಂದ ತಿಗಣೆ ಕಾಟ ತಪ್ಪಿತು ಎಂದು ನಿಟ್ಟುಸಿರು ಬಿಡುವಂತಾಗಿತ್ತು.
In a significant development in the Dharmasthala human burial investigation, the Special Investigation Team (SIT) has intensified its probe. On Monday, investigators escorted the main complainant to the suspected burial site near the Netravati riverbank for an on-ground inspection, which lasted from noon until 6 PM.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am