ಬ್ರೇಕಿಂಗ್ ನ್ಯೂಸ್
02-08-25 02:31 pm Mangaluru Correspondent ಕರಾವಳಿ
ಬೆಳ್ತಂಗಡಿ, ಆ.2: ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣ ತೀವ್ರ ಸಂಚಲನ ಎಬ್ಬಿಸಿರುವಾಗಲೇ ದೂರುದಾರ ವ್ಯಕ್ತಿಯನ್ನು ಎಸ್ಐಟಿ ತಂಡದ ಇನ್ಸ್ ಪೆಕ್ಟರ್ ಮಂಜುನಾಥ ಗೌಡ, ದೂರು ಹಿಂಪಡೆಯುವಂತೆ ಬೆದರಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಬಗ್ಗೆ ದೂರುದಾರನ ಪರ ವಕೀಲರು ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಅವರಿಗೆ ಇಮೇಲ್ ಮೂಲಕ ದೂರು ಸಲ್ಲಿಸಿದ್ದು, ಅದರ ಪ್ರತಿಯನ್ನು ಮಾಧ್ಯಮಕ್ಕೆ ಹಂಚಿಕೊಂಡಿದೆ.
ಬೆಳ್ತಂಗಡಿ ಎಸ್ಐಟಿ ಕಚೇರಿಯಲ್ಲಿ ಆಗಸ್ಟ್ 1ರಂದು ರಾತ್ರಿ ದೂರುದಾರ ವ್ಯಕ್ತಿಯನ್ನು ವಿಚಾರಣೆ ನಡೆಸುತ್ತಿದ್ದಾಗ ಇನ್ಸ್ ಪೆಕ್ಟರ್ ಮಂಜುನಾಥ ಗೌಡ ಬೆದರಿಕೆ ಹಾಕಿದ್ದಾರೆ. ವ್ಯಕ್ತಿಯಿಂದ ಹೇಳಿಕೆ ಪಡೆಯುವಾಗ ತನ್ನ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿದ್ದು, ಈ ವೇಳೆ ಇಷ್ಟೆಲ್ಲ ಕರಾಮತ್ತು ಮಾಡೋ ಬದಲು ದೂರು ಹಿಂಪಡೆಯಬಹುದಲ್ವಾ.. ಏನೂ ಸಿಗದಿದ್ದರೆ ನೋಡೋಣ. ಒದ್ದು ಜೈಲಿಗೆ ಹಾಕಿಸುತ್ತೇನೆ ಎಂದು ಬೆದರಿಸಿದ್ದಾರೆ ಎಂಬುದಾಗಿ ದೂರುದಾರ ವ್ಯಕ್ತಿಯ ಪರ ವಕೀಲರು ಎಸ್ಐಟಿ ಮುಖ್ಯಸ್ಥರಿಗೆ ದೂರು ನೀಡಿದ್ದಾರೆ.

ಎಸ್ಐಟಿ ತಂಡದಿಂದ ಉತ್ತಮ ರೀತಿಯಲ್ಲಿ ಕಾರ್ಯಾಚರಣೆ ನಡೆಯುತ್ತಿರುವಾಗ ಈ ರೀತಿಯ ಬೆಳವಣಿಗೆ ಸಾರ್ವಜನಿಕರಿಗೆ ತಂಡದ ಅಧಿಕಾರಿಗಳ ಬಗ್ಗೆ ಅಪನಂಬಿಕೆ ಮೂಡಿಸುತ್ತದೆ. ತಂಡದಲ್ಲಿ ಇಂತಹ ವ್ಯಕ್ತಿಗಳಿದ್ದಲ್ಲಿ ತನಿಖೆಗೆ ಅಡ್ಡಿಯಾಗಬಹುದು. ಹಾಗಾಗಿ ಅವರನ್ನು ಕೂಡಲೇ ಬದಲಿಸುವಂತೆ ಒತ್ತಾಯಿಸಿ ಎಸ್ಐಟಿ ಮುಖ್ಯಸ್ಥರಿಗೆ ಪತ್ರದಲ್ಲಿ ವಕೀಲರು ಆಗ್ರಹ ಮಾಡಿದ್ದಾರೆ. ವಕೀಲೆ ಅನನ್ಯಾ ಗೌಡ ಹೆಸರಿನಲ್ಲಿ ಎಸ್ಐಟಿ ಮುಖ್ಯಸ್ಥರಿಗೆ ಇಮೇಲ್ ದೂರು ನೀಡಲಾಗಿದೆ. ಮಂಜುನಾಥ ಗೌಡ ಶಿರಸಿ ಗ್ರಾಮಾಂತರ ಠಾಣೆಯ ಇನ್ಸ್ ಪೆಕ್ಟರ್ ಆಗಿದ್ದು, ಎಸ್ಐಟಿ ತಂಡಕ್ಕೆ ನಿಯೋಜನೆಗೊಂಡಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಎಸ್ಐಟಿ ತಂಡದ ಹಿರಿಯ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ.
In a fresh twist to the sensational Dharmasthala human remains case, allegations have surfaced against SIT Inspector Manjunath Gowda for allegedly threatening the complainant to withdraw the case. A formal complaint in this regard has been submitted by the complainant’s legal team to SIT Chief Pranav Mohanty via email, with copies also shared with the media.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm