ಬ್ರೇಕಿಂಗ್ ನ್ಯೂಸ್
04-08-25 01:58 pm Mangalore Correspondent ಕರಾವಳಿ
ಮಂಗಳೂರು, ಆ 04 : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಆರೋಪಿಸಿ ಅನಾಮಿಕ ವ್ಯಕ್ತಿಯೊಬ್ಬ ದೂರು ನೀಡಿದ ಪ್ರಕರಣ ರಾಜ್ಯದಾದ್ಯಂತ ತೀವ್ರ ಕುತೂಹಲವನ್ನುಂಟು ಮಾಡಿದೆ. ಈ ಗಂಭೀರ ಆರೋಪದ ತನಿಖೆಗಾಗಿ ಎಸ್ಐಟಿ ತಂಡ ತೀವ್ರ ಕಾರ್ಯಾಚರಣೆಯಲ್ಲಿ ತೊಡಗಿದೆ. ಇದೀಗ ಅನಾಮಿಕ ಗುರುತಿಸಿದ್ದ 13 ಸ್ಥಳಗಳ ಪಕಿ 11ನೇ ಪಾಯಿಂಟ್ನಲ್ಲಿ ಕಾರ್ಯಾಚರಣೆ ಮಾಡಲಾಗ್ತಿದೆ. ಆದರೆ ಇದೀಗ 11 ನೇ ಪಾಯಿಂಟ್ನಲ್ಲಿ ಮೇಜರ್ ಟ್ವಿಸ್ಟ್ ಸಿಕ್ಕಿದೆ.
ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ ತೀವ್ರ ಕಾರ್ಯಾಚರಣೆಯಲ್ಲಿ ತೊಡಗಿದೆ. ಆದರೆ, ಈ ಪ್ರಕರಣದಲ್ಲಿ ಇದೀಗ ಪಾಯಿಂಟ್ ನಂಬರ್ 11ರ ಸ್ಥಳದಲ್ಲಿ ಅನಾಮಿಕ ದೂರದಾರನಿಂದ ಉಂಟಾದ ಟ್ವಿಸ್ಟ್ ಎಸ್ಐಟಿಗೆ ಗೊಂದಲವನ್ನುಂಟುಮಾಡಿದೆ.

ಅನಾಮಿಕ ವ್ಯಕ್ತಿ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸುತ್ತಮುತ್ತಲಿನ ದಟ್ಟ ಕಾಡಿನಲ್ಲಿ ಸದ್ಯಕ್ಕೆ 13 ಸ್ಥಳಗಳನ್ನು ಶವಗಳನ್ನು ಹೂತಿಟ್ಟಿರುವ ಜಾಗಗಳೆಂದು ಗುರುತಿಸಿದ್ದಾನೆ. ಇದರಲ್ಲಿ ಇದೀಗ ಕಾರ್ಯಾಚರಣೆ ನಡೆಯುತ್ತಿದ್ದು, 11 ನೇ ಪಾಯಿಂಟ್ನಿಂದ ಇಂದು ಕಾರ್ಯಾಚರಣೆ ನಡೆಯುತ್ತಿದೆ. ಈ ವೇಳೆ ದೂರುದಾರ 11ನೇ ಸ್ಥಳದ ತನಿಖೆಯ ಸಂದರ್ಭದಲ್ಲಿ ಅನಿರೀಕ್ಷಿತ ತಿರುವು ನೀಡಿದ್ದಾನೆ. 11ನೇ ಪಾಯಿಂಟ್ ಅಗೆಯದೆ ಮೇಲ್ಭಾಗಕ್ಕೆ ಕರೆದುಕೊಂಡು ಹೋಗಿದ್ದಾನೆ.
ಗುಡ್ಡದ ಮೇಲ್ಭಾಗಕ್ಕೆ ಕರೆದೊಯ್ದ ದೂರುದಾರ!
ಪಾಯಿಂಟ್ ನಂಬರ್ 11 ಮೊದಲು ಅನಾಮಿಕ ಗುರುತಸಿದ್ದ. ಇದೀಗ ಈ ಸ್ಥಳದಲ್ಲಿ ಉತ್ಖನನ ಆರಂಭಿಸುವ ಮೊದಲು, ದೂರದಾರನು ಎಸ್ಐಟಿ ತಂಡವನ್ನು ಗುಡ್ಡದ ಕೆಳಗಿನಿಂದ ಮೇಲಕ್ಕೆ ಕರೆದೊಯ್ದು, ಸ್ಥಳವನ್ನು ಗುರುತಿಸುವ ಬದಲು, ಗುಡ್ಡದ ಮೇಲಿರುವ ಒಂದು ನಿರ್ದಿಷ್ಟ ಪ್ರದೇಶವನ್ನು ತೋರಿಸಿದ್ದಾನೆ. ಈ ಅನಾಮಿಕ ವ್ಯಕ್ತಿಯು ಗುಡ್ಡದ ಮೇಲ್ಭಾಗಕ್ಕೆ ಇಡೀ ತಂಡವನ್ನು ಕರೆದೊಯ್ದು, ಅಗೆಯುವಿಕೆಗೆ ಸಂಬಂಧಿಸಿದಂತೆ ಸ್ಪಷ್ಟ ಮಾಹಿತಿ ನೀಡದೇ, ಗೊಂದಲದಿಂದಿರುವಂತೆ ವರ್ತಿಸಿದ್ದಾನೆ. ಇದೀಗ ಇದು ಎಸ್ಐಟಿಗೆ ಹಲವು ಅನುಮಾನಕ್ಕೆ ಕಾರಣವಾಗಿದೆ.
ಎಸ್ಐಟಿಯು ಈಗ ಈ ಸ್ಥಳದಲ್ಲಿ ಉತ್ಖನನವನ್ನು ಮುಂದುವರಿಸಲು ತಯಾರಿ ನಡೆಸಿದೆ. ಆದರೆ, ದೂರದಾರನ ಹೇಳಿಕೆಯ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ. ಈಗಾಗಲೇ 13 ಸ್ಥಳಗಳ ಪೈಕಿ ಒಂದರಲ್ಲಿ ಮಾತ್ರ ಮೂಳೆಗಳ ಕುರುಹು ಸಿಕ್ಕಿರುವುದು, ಆತನ ಆರೋಪಗಳ ಸತ್ಯಾಸತ್ಯತೆಯನ್ನು ಪರೀಕ್ಷಿಸುವಂತೆ ಮಾಡಿದೆ. ಎಸ್ಐಟಿಯು ಈ ಸ್ಥಳದಲ್ಲಿ ಶಸ್ತ್ರಸಜ್ಜಿತ ಸಿಬ್ಬಂದಿಯೊಂದಿಗೆ ಭದ್ರತೆಯನ್ನು ಕಾಪಾಡಿಕೊಂಡು, ವಿಡಿಯೋ ರೆಕಾರ್ಡಿಂಗ್ ಮೂಲಕ ತನಿಖೆಯನ್ನು ದಾಖಲಿಸುತ್ತಿದೆ.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm