ಬ್ರೇಕಿಂಗ್ ನ್ಯೂಸ್
04-08-25 06:05 pm Mangalore Correspondent ಕರಾವಳಿ
ಮಂಗಳೂರು, ಆ.4 : ವಿದ್ಯುತ್ ಸರಬರಾಜು ನಿಗಮಗಳ ನೌಕರರಿಗೆ ಪಿಂಚಣಿ ಹಾಗೂ ಗ್ರಾಚ್ಯುಟಿ ನೀಡಲು ಸರ್ಕಾರ ಗ್ರಾಹಕರಿಂದಲೇ ಹಣ ವಸೂಲಿ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಸೋಮವಾರ ಬೆಳಗ್ಗೆ ಮರೋಳಿ-ಜೋಡುಕಟ್ಟೆ ಬಳಿಯ ಮೆಸ್ಕಾಂ ಕಚೇರಿ (ಕುಲಶೇಖರ ಉಪವಿಭಾಗ) ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ನೌಕರರ ಪಿಂಚಣಿ ಹಾಗೂ ಗ್ರಾಚ್ಯುಟಿಗೆ ನಮ್ಮ ವಿರೋಧವಿಲ್ಲ, ಖಂಡಿತವಾಗಿಯೂ ಅವರಿಗೆ ನೀಡಲೇಬೇಕು. ಅದು ರಾಜ್ಯ ಸರ್ಕಾರದ ಜವಾಬ್ದಾರಿ ಹೊರತು ಜನಸಾಮಾನ್ಯರದ್ದಲ್ಲ. ಸರ್ಕಾರ ತನ್ನ ಮೇಲಿನ ಹೊಣೆಯನ್ನು ಗ್ರಾಹಕರ ಮೇಲೆ ಹೊರಿಸಿದ್ದರಿಂದ ಸಹಜವಾಗಿ ಜನರು ಆಕ್ರೋಶಗೊಂಡಿದ್ದಾರೆ. ಯೂನಿಟಿಗೆ 36 ಪೈಸೆ ಹೆಚ್ಚಳದಂತೆ ಪ್ರತಿ ಮನೆಯಿಂದ ಕೋಟ್ಯಂತರ ರೂಪಾಯಿ ದೋಚುವ ಹುನ್ನಾರ ನಡೆದಿದೆ ಎಂದು ಆರೋಪಿಸಿದರು.


ಈಗಾಗಲೇ ವಿದ್ಯುತ್ ದರ ಹೆಚ್ಚಳ ಮಾಡಿ ಜನರನ್ನು ಸಂಕಷ್ಟಕ್ಕೆ ದೂಡಲಾಗಿದೆ. ಎರಡು ಸಾವಿರಕ್ಕೆ ಸಿಗುತ್ತಿದ್ದ ಸ್ಮಾರ್ಟ್ ಮೀಟರನ್ನು ಹತ್ತು ಸಾವಿರಕ್ಕೆ ಏರಿಕೆ ಮಾಡಿ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿದೆ. ಆದರೂ ಈ ಕಾಂಗ್ರೆಸ್ ಸರ್ಕಾರ ಬುದ್ಧಿ ಕಲಿತಿಲ್ಲ. ಜನರು ತಿರುಗಿ ಬಿದ್ದರೆ ಮಾತ್ರ ಈ ದಪ್ಪ ಚರ್ಮದ ಸರ್ಕಾರಕ್ಕೆ ಬುದ್ಧಿ ಬರುವುದಾದರೆ ಜನತೆಯೇ ಪಾಠ ಕಲಿಸಲು ಸಿದ್ಧವಾಗಬೇಕು. ಜನಪರ ಹೋರಾಟಕ್ಕೆ ಬಿಜೆಪಿ ಸದಾ ಬೆಂಬಲ ನೀಡುತ್ತದೆ ಎಂದು ಶಾಸಕ ಕಾಮತ್ ಹೇಳಿದರು.
ಪ್ರತಿಭಟನೆಯಲ್ಲಿ ರಮೇಶ್ ಕಂಡೆಟ್ಟು, ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಪೂರ್ಣಿಮಾ, ವಸಂತ ಜೆ ಪೂಜಾರಿ, ನಿತಿನ್ ಕುಮಾರ್, ರವಿಶಂಕರ್ ಮಿಜಾರ್, ಮೋನಪ್ಪ ಭಂಡಾರಿ, ನಿಕಟಪೂರ್ವ ಮನಪಾ ಸದಸ್ಯರುಗಳು, ಮಂಡಲ ಹಾಗೂ ಜಿಲ್ಲೆಯ ಬಿಜೆಪಿ ಪ್ರಮುಖರು, ವಿವಿಧ ಮೋರ್ಚಾಗಳ ಪ್ರಮುಖರು, ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.
Alleging that the Karnataka Congress government is unjustly burdening the public by collecting funds for the pensions and gratuity of electricity board employees through consumer electricity bills, the BJP’s Mangaluru South Mandal staged a protest on Monday morning outside the MESCOM office at Kulasekhara (Maroli-Jodukatte area).
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm