ಬ್ರೇಕಿಂಗ್ ನ್ಯೂಸ್
04-08-25 06:05 pm Mangalore Correspondent ಕರಾವಳಿ
ಮಂಗಳೂರು, ಆ.4 : ವಿದ್ಯುತ್ ಸರಬರಾಜು ನಿಗಮಗಳ ನೌಕರರಿಗೆ ಪಿಂಚಣಿ ಹಾಗೂ ಗ್ರಾಚ್ಯುಟಿ ನೀಡಲು ಸರ್ಕಾರ ಗ್ರಾಹಕರಿಂದಲೇ ಹಣ ವಸೂಲಿ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಸೋಮವಾರ ಬೆಳಗ್ಗೆ ಮರೋಳಿ-ಜೋಡುಕಟ್ಟೆ ಬಳಿಯ ಮೆಸ್ಕಾಂ ಕಚೇರಿ (ಕುಲಶೇಖರ ಉಪವಿಭಾಗ) ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ನೌಕರರ ಪಿಂಚಣಿ ಹಾಗೂ ಗ್ರಾಚ್ಯುಟಿಗೆ ನಮ್ಮ ವಿರೋಧವಿಲ್ಲ, ಖಂಡಿತವಾಗಿಯೂ ಅವರಿಗೆ ನೀಡಲೇಬೇಕು. ಅದು ರಾಜ್ಯ ಸರ್ಕಾರದ ಜವಾಬ್ದಾರಿ ಹೊರತು ಜನಸಾಮಾನ್ಯರದ್ದಲ್ಲ. ಸರ್ಕಾರ ತನ್ನ ಮೇಲಿನ ಹೊಣೆಯನ್ನು ಗ್ರಾಹಕರ ಮೇಲೆ ಹೊರಿಸಿದ್ದರಿಂದ ಸಹಜವಾಗಿ ಜನರು ಆಕ್ರೋಶಗೊಂಡಿದ್ದಾರೆ. ಯೂನಿಟಿಗೆ 36 ಪೈಸೆ ಹೆಚ್ಚಳದಂತೆ ಪ್ರತಿ ಮನೆಯಿಂದ ಕೋಟ್ಯಂತರ ರೂಪಾಯಿ ದೋಚುವ ಹುನ್ನಾರ ನಡೆದಿದೆ ಎಂದು ಆರೋಪಿಸಿದರು.
ಈಗಾಗಲೇ ವಿದ್ಯುತ್ ದರ ಹೆಚ್ಚಳ ಮಾಡಿ ಜನರನ್ನು ಸಂಕಷ್ಟಕ್ಕೆ ದೂಡಲಾಗಿದೆ. ಎರಡು ಸಾವಿರಕ್ಕೆ ಸಿಗುತ್ತಿದ್ದ ಸ್ಮಾರ್ಟ್ ಮೀಟರನ್ನು ಹತ್ತು ಸಾವಿರಕ್ಕೆ ಏರಿಕೆ ಮಾಡಿ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿದೆ. ಆದರೂ ಈ ಕಾಂಗ್ರೆಸ್ ಸರ್ಕಾರ ಬುದ್ಧಿ ಕಲಿತಿಲ್ಲ. ಜನರು ತಿರುಗಿ ಬಿದ್ದರೆ ಮಾತ್ರ ಈ ದಪ್ಪ ಚರ್ಮದ ಸರ್ಕಾರಕ್ಕೆ ಬುದ್ಧಿ ಬರುವುದಾದರೆ ಜನತೆಯೇ ಪಾಠ ಕಲಿಸಲು ಸಿದ್ಧವಾಗಬೇಕು. ಜನಪರ ಹೋರಾಟಕ್ಕೆ ಬಿಜೆಪಿ ಸದಾ ಬೆಂಬಲ ನೀಡುತ್ತದೆ ಎಂದು ಶಾಸಕ ಕಾಮತ್ ಹೇಳಿದರು.
ಪ್ರತಿಭಟನೆಯಲ್ಲಿ ರಮೇಶ್ ಕಂಡೆಟ್ಟು, ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಪೂರ್ಣಿಮಾ, ವಸಂತ ಜೆ ಪೂಜಾರಿ, ನಿತಿನ್ ಕುಮಾರ್, ರವಿಶಂಕರ್ ಮಿಜಾರ್, ಮೋನಪ್ಪ ಭಂಡಾರಿ, ನಿಕಟಪೂರ್ವ ಮನಪಾ ಸದಸ್ಯರುಗಳು, ಮಂಡಲ ಹಾಗೂ ಜಿಲ್ಲೆಯ ಬಿಜೆಪಿ ಪ್ರಮುಖರು, ವಿವಿಧ ಮೋರ್ಚಾಗಳ ಪ್ರಮುಖರು, ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.
Alleging that the Karnataka Congress government is unjustly burdening the public by collecting funds for the pensions and gratuity of electricity board employees through consumer electricity bills, the BJP’s Mangaluru South Mandal staged a protest on Monday morning outside the MESCOM office at Kulasekhara (Maroli-Jodukatte area).
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 07:38 pm
Mangalore Correspondent
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
VK Furniture & Electronics Launches 4th Annua...
04-08-25 04:48 pm
Dharmasthala Skeleton Mystery: ಧರ್ಮಸ್ಥಳ ಅಸ್ತಿ...
04-08-25 01:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಆರನೇ ಪಾಯ...
04-08-25 01:24 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm