ಬ್ರೇಕಿಂಗ್ ನ್ಯೂಸ್
04-08-25 09:51 pm Mangalore Correspondent ಕರಾವಳಿ
ಮಂಗಳೂರು, ಆ.4 : ವಿದ್ಯುತ್ ಸರಬರಾಜು ನಿಗಮದ ನೌಕರರಿಗೆ ಮತ್ತು ಅವರ ಆಶ್ರಿತರಿಗೆ ಪಿಂಚಣಿ ಮತ್ತು ಗ್ರಾಚ್ಯುಟಿ ನೀಡಲು ಕಾಂಗ್ರೆಸ್ ಸರಕಾರ ಗ್ರಾಹಕರಿಂದಲೇ ಹಣ ವಸೂಲಿ ಮಾಡುತ್ತಿದೆಯೆಂಬ ಆರೋಪ ಮತ್ತು ಬಿಜೆಪಿ ಪ್ರತಿಭಟನೆ ಬಗ್ಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಮತ್ತು ಮಾಜಿ ಶಾಸಕ ಜೆ.ಆರ್ ಲೋಬೊ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ಸರಕಾರ ಇದ್ದಾಗಲೇ ಕಾನೂನಿಗೆ ತಿದ್ದುಪಡಿ ಮಾಡಿ ನೌಕರರ ಪಿಂಚಣಿಗೆ ಗ್ರಾಹಕರಿಂದಲೇ ಹಣ ಸಂಗ್ರಹಿಸಲು ಕಾನೂನು ತಂದಿತ್ತು. ಅದರ ಪ್ರಕಾರ, ಈಗ ಕಾಂಗ್ರೆಸ್ ಸರಕಾರ ನಡೆದುಕೊಳ್ಳುತ್ತಿದೆ ವಿನಾ ಹೊಸ ನೀತಿಯಲ್ಲ. ಬಿಜೆಪಿ ಸತ್ಯವನ್ನು ಸುಳ್ಳೆಂದು, ಸುಳ್ಳನ್ನು ಸತ್ಯವೆಂದು ತೋರಿಸಲು ಯತ್ನಿಸುತ್ತಿದೆ ಎಂದು ಹೇಳಿದ್ದಾರೆ.
ಕುಲಶೇಖರದ ಮೆಸ್ಕಾಂ ಕಚೇರಿ ಎದುರಲ್ಲಿ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಇಂದು ಬೆಳಗ್ಗೆ ಪ್ರತಿಭಟನೆ ನಡೆದಿತ್ತು. ಇದಕ್ಕೆ ಪ್ರತಿಯಾಗಿ ಲೋಬೊ ಸುದ್ದಿಗೋಷ್ಟಿ ನಡೆಸಿದ್ದು, 2021ರಲ್ಲಿ ಬಿಜೆಪಿ ಸರಕಾರ ಇದ್ದಾಗಲೇ ಕಾನೂನಿಗೆ ತಿದ್ದುಪಡಿ ಮಾಡಿತ್ತು. ಅದಕ್ಕೂ ಹಿಂದೆ ಪಿಂಚಣಿ ಮೊತ್ತವನ್ನು ಸರಕಾರವೇ ಭರಿಸುತ್ತಿತ್ತು. ಆಗಿಂದಾಗ್ಗೆ ಅನುದಾನ ಕೊಡುವ ಪರಿಪಾಠ ಇತ್ತು. 202ರ ವರೆಗೆ 12,700 ಕೋಟಿ ಮೊತ್ತವನ್ನು ಈ ಉದ್ದೇಶಕ್ಕಾಗಿ ನೀಡಲಾಗಿತ್ತು. ಆದರೆ 2022ರ ಮಾರ್ಚ್ 9ರಂದು ಗ್ರಾಹಕರಿಂದಲೇ ಈ ಮೊತ್ತವನ್ನು ಸಂಗ್ರಹಿಸಲು ಹೊಸ ಕಾನೂನು ತಂದು 2022ರ ಡಿಸೆಂಬರ್ ನಲ್ಲಿ ಅದನ್ನು ಜಾರಿಗೊಳಿಸಿತ್ತು. ಎಫ್ ಕೆಸಿಸಿಐ ವತಿಯಿಂದ ಇದನ್ನು ಹೈಕೋರ್ಟಿನಲ್ಲಿ ಪ್ರಶ್ನಿಸಿದ್ದರೂ, ಸರಕಾರ ಕೈಗೊಂಡ ನಿಯಮವೆಂದು 2024ರ ಮಾರ್ಚ್ 25ರಂದು ನ್ಯಾಯಾಧೀಶರು ವಿಚಾರಣೆ ಪೂರ್ತಿಗೊಳಿಸಿ ಅರ್ಜಿಯನ್ನು ವಜಾಗೊಳಿಸಿ ಕಾನೂನು ಜಾರಿಗೆ ಅವಕಾಶ ಕೊಟ್ಟಿದ್ದರು.
ಇದರಂತೆ, ಕಾನೂನು ಜಾರಿಯಾಗಿದ್ದರೂ, ಬಿಜೆಪಿ ಶಾಸಕರು ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಸರಕಾರ ತಂದ ಕಾನೂನು ಪ್ರಕಾರ 2026, 27 ಮತ್ತು 28ರ ಸಾಲಿನಲ್ಲಿ ನೌಕರರಿಗೆ ಪಿಂಚಣಿ ಮತ್ತು ಗ್ರಾಚ್ಯುಟಿ ನೀಡಲು ವರ್ಷಕ್ಕೆ ತಲಾ 766 ಕೋಟಿ ಅಗತ್ಯವಿದೆಯೆಂದು ಮನಗಂಡು ಕಾಂಗ್ರೆಸ್ ಸರಕಾರ ಗ್ರಾಹಕರಿಗೆ ತಲಾ 36 ಪೈಸೆಯಂತೆ ವಸೂಲಿ ಮಾಡಲು ಆದೇಶ ಮಾಡಿದೆ. ವೇದವ್ಯಾಸ ಕಾಮತ್ ಅಧಿವೇಶನದಲ್ಲಿ ಇದ್ದಾಗಲೇ ಈ ಕಾನೂನು ಜಾರಿಗೆ ತಂದಿದ್ದರೂ ಈಗ ಏನೂ ತಿಳಿಯದಂತೆ ವರ್ತಿಸುತ್ತಿದ್ದಾರೆ. ಮೆಸ್ಕಾಂನಲ್ಲಿ 39 ಸಾವಿರ ನೌಕರರಿದ್ದು, ಅವರ ಶ್ರೇಯೋಭಿವೃದ್ದಿಗಾಗಿ ಕೈಗೊಂಡಿದ್ದ ಕಾನೂನು ಇದಾಗಿದ್ದರೂ ಬಿಜೆಪಿ ಮೊಸಳೆ ಕಣ್ಣೀರಿನ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಪದ್ಮರಾಜ್ ಪೂಜಾರಿ, ಶಶಿಧರ ಹೆಗ್ಡೆ, ಟಿಕೆ ಸುಧೀರ್, ವಿಕಾಸ್ ಶೆಟ್ಟಿ ಮತ್ತಿತರರಿದ್ದರು.
Amid rising political heat over the collection of pension and gratuity funds for electricity corporation employees from consumers, the Congress has issued a clarification, asserting that it is simply implementing a law passed by the previous BJP government.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am