ಬ್ರೇಕಿಂಗ್ ನ್ಯೂಸ್
05-08-25 04:29 pm Mangalore Correspondent ಕರಾವಳಿ
ಮಂಗಳೂರು, ಆ.5 : ಪಾಕಿಸ್ಥಾನ ವಿರುದ್ಧ 1965 ಮತ್ತು 1971ರಲ್ಲಿ ಸೇನಾ ಕಾರ್ಯಾಚರಣೆಯಲ್ಲಿ ಬಳಕೆಯಾಗಿದ್ದ ಭಾರತೀಯ ಭೂಸೇನೆಯ ಯುದ್ಧ ಟ್ಯಾಂಕರ್ ಟಿ-55 ಸಂಸದ ಕ್ಯಾ.ಬ್ರಿಜೇಶ್ ಚೌಟರ ಕೋರಿಕೆ ಮೇರೆಗೆ ಮಂಗಳೂರಿಗೆ ಆಗಮಿಸಿದ್ದು, ಸದ್ಯಕ್ಕೆ ನಗರದ ಕದ್ರಿ ಸರ್ಕಿಟ್ ಹೌಸ್ ಬಳಿಯಲ್ಲಿ ಇರಿಸಲಾಗಿದೆ.
ಭಾರತೀಯ ಸೇನೆಯಲ್ಲಿ 1961ರಿಂದ 2001ರ ವರೆಗೆ ಸೇವೆಯಲ್ಲಿದ್ದ ಈ ಯುದ್ಧ ಟ್ಯಾಂಕರನ್ನು ಪುಣೆಯ ಕಿರ್ಕಿಯಲ್ಲಿರುವ ಭಾರತೀಯ ಸೇನೆಯ ಡಿಪೋದಲ್ಲಿ ಇರಿಸಲಾಗಿತ್ತು. ಅದನ್ನು ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ವಿಶೇಷ ಟ್ರೈಲರ್ ನಲ್ಲಿ ಮಂಗಳೂರಿಗೆ ತರಿಸಲಾಗಿದೆ. ಇತ್ತೀಚೆಗೆ ಸಂಸದ ಬ್ರಿಜೇಶ್ ಚೌಟ, ಸೇನೆಯಲ್ಲಿ ಸೇವೆಗೈದ ಟ್ಯಾಂಕರ್ ಒಂದನ್ನು ಉಚಿತವಾಗಿ ಮಂಗಳೂರಿಗೆ ನೀಡಬೇಕೆಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದ್ದರು. ಇದರಂತೆ, ಯುದ್ಧ ಟ್ಯಾಂಕ್ ಅನ್ನು ಮಂಗಳೂರು ನಗರಕ್ಕೆ ತರಿಸಲಾಗಿದೆ.


ಅಂದಹಾಗೆ, ಈ ಯುದ್ಧ ಟ್ಯಾಂಕ್ ಅನ್ನು ಕದ್ರಿಯಲ್ಲಿರುವ ವಾರ್ ಮೆಮೋರಿಯಲ್ ಬಳಿಯಲ್ಲೇ ಇರಿಸುವ ಯೋಜನೆ ಇದೆಯಂತೆ. ವೀರ ಯೋಧರನ್ನು ಸ್ಮರಿಸುವ ಮತ್ತು ಸೇನೆಗೆ ಸೇರುವ ಯುವಕರಿಗೆ ಸ್ಫೂರ್ತಿ ನೀಡುವ ನಿಟ್ಟಿನಲ್ಲಿ ಯುದ್ಧ ಟ್ಯಾಂಕರನ್ನು ಮಂಗಳೂರು ನಗರ ಮಧ್ಯದಲ್ಲಿ ಇರಿಸಬೇಕೆಂದು ಸಂಸದ ಚೌಟರು ಯೋಚನೆ ಹೊಂದಿದ್ದಾರೆ. ಸಾಮಾನ್ಯವಾಗಿ ಯುದ್ಧದಲ್ಲಿ ಪಾಲ್ಗೊಂಡು ಸೇವೆಯಿಂದ ನಿವೃತ್ತಿಯಾಗಿರುವ ಟ್ಯಾಂಕ್ ಮತ್ತಿತರ ಸೇನೆಯ ಆಯುಧಗಳನ್ನು ಯುದ್ಧ ಸ್ಮರಣಿಕೆ ರೀತಿಯಲ್ಲಿ ಪ್ರದರ್ಶನಕ್ಕೆ ಇಡಲಾಗುತ್ತದೆ. ಕದ್ರಿ ಯುದ್ಧ ಸ್ಮಾರಕದ ಬಳಿಯಲ್ಲಿ ಸೂಕ್ತ ವೇದಿಕೆಯನ್ನು ನಿರ್ಮಿಸಿ ಯುದ್ಧ ಟ್ಯಾಂಕರ್ ಇರಿಸಬೇಕೆಂಬ ಯೋಜನೆ ಇದೆಯೆಂದು ಸಂಸದ ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಬರೋಬ್ಬರಿ 40 ಟನ್ ತೂಕವಿರುವ ಟಿ-55 ಯುದ್ಧ ಟ್ಯಾಂಕರ್ ಶುಕ್ರವಾರ ಪುಣೆಯಿಂದ ಹೊರಟಿದ್ದು ಮೂರು ದಿನದ ಪ್ರಯಾಣದ ಬಳಿಕ ಸೋಮವಾರ ರಾತ್ರಿ ಮಂಗಳೂರು ತಲುಪಿದೆ.
A historic T-55 battle tank, which was part of India’s military operations during the 1965 and 1971 wars against Pakistan, has arrived in Mangaluru and is currently stationed near the Kadri Circuit House. The tank has been brought to the city following a request by MP Capt. Brijesh Chowta.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm