ಬ್ರೇಕಿಂಗ್ ನ್ಯೂಸ್
05-08-25 04:29 pm Mangalore Correspondent ಕರಾವಳಿ
ಮಂಗಳೂರು, ಆ.5 : ಪಾಕಿಸ್ಥಾನ ವಿರುದ್ಧ 1965 ಮತ್ತು 1971ರಲ್ಲಿ ಸೇನಾ ಕಾರ್ಯಾಚರಣೆಯಲ್ಲಿ ಬಳಕೆಯಾಗಿದ್ದ ಭಾರತೀಯ ಭೂಸೇನೆಯ ಯುದ್ಧ ಟ್ಯಾಂಕರ್ ಟಿ-55 ಸಂಸದ ಕ್ಯಾ.ಬ್ರಿಜೇಶ್ ಚೌಟರ ಕೋರಿಕೆ ಮೇರೆಗೆ ಮಂಗಳೂರಿಗೆ ಆಗಮಿಸಿದ್ದು, ಸದ್ಯಕ್ಕೆ ನಗರದ ಕದ್ರಿ ಸರ್ಕಿಟ್ ಹೌಸ್ ಬಳಿಯಲ್ಲಿ ಇರಿಸಲಾಗಿದೆ.
ಭಾರತೀಯ ಸೇನೆಯಲ್ಲಿ 1961ರಿಂದ 2001ರ ವರೆಗೆ ಸೇವೆಯಲ್ಲಿದ್ದ ಈ ಯುದ್ಧ ಟ್ಯಾಂಕರನ್ನು ಪುಣೆಯ ಕಿರ್ಕಿಯಲ್ಲಿರುವ ಭಾರತೀಯ ಸೇನೆಯ ಡಿಪೋದಲ್ಲಿ ಇರಿಸಲಾಗಿತ್ತು. ಅದನ್ನು ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ವಿಶೇಷ ಟ್ರೈಲರ್ ನಲ್ಲಿ ಮಂಗಳೂರಿಗೆ ತರಿಸಲಾಗಿದೆ. ಇತ್ತೀಚೆಗೆ ಸಂಸದ ಬ್ರಿಜೇಶ್ ಚೌಟ, ಸೇನೆಯಲ್ಲಿ ಸೇವೆಗೈದ ಟ್ಯಾಂಕರ್ ಒಂದನ್ನು ಉಚಿತವಾಗಿ ಮಂಗಳೂರಿಗೆ ನೀಡಬೇಕೆಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದ್ದರು. ಇದರಂತೆ, ಯುದ್ಧ ಟ್ಯಾಂಕ್ ಅನ್ನು ಮಂಗಳೂರು ನಗರಕ್ಕೆ ತರಿಸಲಾಗಿದೆ.


ಅಂದಹಾಗೆ, ಈ ಯುದ್ಧ ಟ್ಯಾಂಕ್ ಅನ್ನು ಕದ್ರಿಯಲ್ಲಿರುವ ವಾರ್ ಮೆಮೋರಿಯಲ್ ಬಳಿಯಲ್ಲೇ ಇರಿಸುವ ಯೋಜನೆ ಇದೆಯಂತೆ. ವೀರ ಯೋಧರನ್ನು ಸ್ಮರಿಸುವ ಮತ್ತು ಸೇನೆಗೆ ಸೇರುವ ಯುವಕರಿಗೆ ಸ್ಫೂರ್ತಿ ನೀಡುವ ನಿಟ್ಟಿನಲ್ಲಿ ಯುದ್ಧ ಟ್ಯಾಂಕರನ್ನು ಮಂಗಳೂರು ನಗರ ಮಧ್ಯದಲ್ಲಿ ಇರಿಸಬೇಕೆಂದು ಸಂಸದ ಚೌಟರು ಯೋಚನೆ ಹೊಂದಿದ್ದಾರೆ. ಸಾಮಾನ್ಯವಾಗಿ ಯುದ್ಧದಲ್ಲಿ ಪಾಲ್ಗೊಂಡು ಸೇವೆಯಿಂದ ನಿವೃತ್ತಿಯಾಗಿರುವ ಟ್ಯಾಂಕ್ ಮತ್ತಿತರ ಸೇನೆಯ ಆಯುಧಗಳನ್ನು ಯುದ್ಧ ಸ್ಮರಣಿಕೆ ರೀತಿಯಲ್ಲಿ ಪ್ರದರ್ಶನಕ್ಕೆ ಇಡಲಾಗುತ್ತದೆ. ಕದ್ರಿ ಯುದ್ಧ ಸ್ಮಾರಕದ ಬಳಿಯಲ್ಲಿ ಸೂಕ್ತ ವೇದಿಕೆಯನ್ನು ನಿರ್ಮಿಸಿ ಯುದ್ಧ ಟ್ಯಾಂಕರ್ ಇರಿಸಬೇಕೆಂಬ ಯೋಜನೆ ಇದೆಯೆಂದು ಸಂಸದ ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಬರೋಬ್ಬರಿ 40 ಟನ್ ತೂಕವಿರುವ ಟಿ-55 ಯುದ್ಧ ಟ್ಯಾಂಕರ್ ಶುಕ್ರವಾರ ಪುಣೆಯಿಂದ ಹೊರಟಿದ್ದು ಮೂರು ದಿನದ ಪ್ರಯಾಣದ ಬಳಿಕ ಸೋಮವಾರ ರಾತ್ರಿ ಮಂಗಳೂರು ತಲುಪಿದೆ.
A historic T-55 battle tank, which was part of India’s military operations during the 1965 and 1971 wars against Pakistan, has arrived in Mangaluru and is currently stationed near the Kadri Circuit House. The tank has been brought to the city following a request by MP Capt. Brijesh Chowta.
08-12-25 10:39 pm
Bangalore Correspondent
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 10:11 pm
Mangalore Correspondent
Mangalore, Puttur, Mahesh Shetty Timarodi: ಪ್...
08-12-25 04:52 pm
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
08-12-25 09:29 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm