ಬ್ರೇಕಿಂಗ್ ನ್ಯೂಸ್
05-08-25 08:22 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.5: ಧರ್ಮಸ್ಥಳ ಹೆಣ ಹೂತ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳ ತನಿಖೆ ಮುಂದುವರಿದಿದ್ದು ನೇತ್ರಾವತಿ ಸ್ನಾನಘಟ್ಟದ ಬಳಿಯ ಕಾಡಿನಲ್ಲಿ ಗುರುತಿಸಿರುವ 11 ಮತ್ತು 12ನೇ ಸ್ಥಳಗಳಲ್ಲಿ ಮಂಗಳವಾರ ಸಮಾಧಿ ಅಗೆದಿದ್ದು ಯಾವುದೇ ಹೆಣ ಹೂತಿರುವ ಸಾಕ್ಷ್ಯ ಲಭ್ಯವಾಗಿಲ್ಲ.
ಪ್ರಕರಣದಲ್ಲಿ ಸ್ಥಳ ಶೋಧ ತನಿಖೆ ಕೈಗೊಂಡು ಏಳನೇ ದಿನವಾದ ಮಂಗಳವಾರ ಇಡೀ ದಿನ ಸ್ನಾನಘಟ್ಟದ ಬಳಿಯ ಹೆದ್ದಾರಿ ಬದಿಯಲ್ಲಿ ಶೋಧ ಕಾರ್ಯ ನಡೆಯಿತು. ರಸ್ತೆಗೆ ಅಡ್ಡಲಾಗಿ ಪ್ಲಾಸ್ಟಿಕ್ ಪರದೆ ಹಾಕಿದ್ದು ಕಾರ್ಮಿಕರು ಮತ್ತು ಹಿಟಾಚಿ ಬಳಸಿ ಅಗೆಯಲಾಗಿದೆ. ಆರು ಅಡಿ ಆಳ ಮತ್ತು ಐದು ಅಡಿ ಅಗಲಕ್ಕೆ ಅಗೆಯಲಾಗಿದ್ದು ಹೆಣ ಹೂತಿರುವ ಅಥವಾ ಎಲುಬುಗಳ ಸಾಕ್ಷ್ಯ ಸಿಕ್ಕಿಲ್ಲ.





ಆ.4ರ ಸೋಮವಾರ ಹಠಾತ್ತಾಗಿ ದೂರುದಾರ ವ್ಯಕ್ತಿ 11ನೇ ಪಾಯಿಂಟ್ ನಿಂದ 120 ಮೀಟರ್ ದೂರದ ಬೆಟ್ಟಕ್ಕೆ ಪೊಲೀಸರನ್ನು ಕರೆದೊಯ್ದಿದ್ದ. ಈ ವೇಳೆ, ಪೊಲೀಸರೇ ಬೆಚ್ಚಿಬೀಳುವ ರೀತಿ ಕಾಡಿನ ಮಧ್ಯೆ ಮೇಲ್ಭಾಗದಲ್ಲಿಯೇ ಅಸ್ಥಿಪಂಜರ ಪತ್ತೆಯಾಗಿತ್ತು. ಸುಮಾರು ಒಂದು ವರ್ಷದಷ್ಟು ಹಳೆಯ ಅಸ್ಥಿಪಂಜರ ಎನ್ನಲಾಗುತ್ತಿದ್ದು ಸ್ಥಳದಲ್ಲಿ ಅಲ್ಲಲ್ಲಿ ಎಲುಬಿನ ತುಂಡುಗಳು ಬಿದ್ದುಕೊಂಡಿದ್ದವು. ಅದನ್ನು ವೈಜ್ಞಾನಿಕ ರೀತಿಯಲ್ಲೇ ಹೆಕ್ಕಿ ತೆಗೆದು ಪ್ಲಾಸ್ಟಿಕ್ ಬಕೆಟ್ ನಲ್ಲಿ ಗುಡ್ಡದಿಂದ ತರಲಾಗಿತ್ತು. ಈ ಮೂಳೆಗಳ ಚೂರುಗಳನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯ ಪ್ರಯೋಗಾಲಯಕ್ಕೆ ಮತ್ತು ವಿಧಿ ವಿಜ್ಞಾನ ಕೇಂದ್ರಕ್ಕೆ ಒಯ್ಯಲಾಗಿದೆ.
ಗುಡ್ಡದ ಮೇಲ್ಭಾಗದ ಬಂಡೆ ಕಲ್ಲಿನ ಎಡೆಯಲ್ಲಿ ಅಸ್ಥಿಪಂಜರ ಪತ್ತೆಯಾಗಿದ್ದು ಮರದಲ್ಲಿ ಸೀರೆಯನ್ನು ಕಟ್ಟಿದ ರೀತಿ ಇತ್ತು. ಹೀಗಾಗಿ ಸೀರೆಯನ್ನು ಬಳಸಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆಯಿದೆ. ಇದು ಪುರುಷನದ್ದೋ, ಮಹಿಳೆಯದ್ದೋ ಎನ್ನುವುದು ಗೊತ್ತಾಗಿಲ್ಲ. ಆದರೆ ಸುಜಾತ ಭಟ್ ಪರ ವಕೀಲ ಮಂಜುನಾಥ್ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು ಸ್ಥಳದಲ್ಲಿ ಮೂರು ಶವಗಳ ಅಸ್ಥಿಪಂಜರ ಸಿಕ್ಕಿದೆ, ಅದರಲ್ಲೊಂದು ಮಹಿಳೆಯದ್ದು ಎನ್ನುವ ಮಾಹಿತಿ ಇದೆ ಎಂದಿದ್ದಾರೆ.
ಗುಡ್ಡದ ಮೇಲ್ಭಾಗದಲ್ಲಿ ಅಸ್ಥಿಪಂಜರ ಸಿಕ್ಕಿರುವುದನ್ನು ದೂರುದಾರ ವ್ಯಕ್ತಿಯ ಪ್ರಕರಣದಲ್ಲಿ ಸೇರಿಸುವುದಕ್ಕೆ ಆಗುವುದಿಲ್ಲ. ಅನಾಥ ಶವದ ಅಸ್ಥಿಪಂಜರ ಆಗಿರುವುದರಿಂದ ಮತ್ತು ಒಂದು ವರ್ಷ ಹಿಂದಿನದ್ದು ಎನ್ನುವ ಗುಮಾನಿ ಇರುವುದರಿಂದ ಈ ಪ್ರಕರಣವನ್ನೂ ಎಸ್ಐಟಿ ತನಿಖೆಗೆ ಪರಿಗಣಿಸುತ್ತಾ ಗೊತ್ತಿಲ್ಲ. ಇದೇ ವೇಳೆ ಆರ್ಟಿಐ ಕಾರ್ಯಕರ್ತ ಜಯನ್ ಧರ್ಮಸ್ಥಳ ಠಾಣೆಯಲ್ಲಿ ನೀಡಿರುವ, 15 ವರ್ಷಗಳ ಹಿಂದೆ ಬಾಲಕಿಯನ್ನು ಹೂತ ಪ್ರಕರಣವನ್ನು ಡಿಜಿಪಿಯವರ ಸೂಚನೆಯಂತೆ ಎಸ್ಐಟಿ ತಂಡಕ್ಕೆ ಹಸ್ತಾಂತರ ಮಾಡಲಾಗಿದೆ ಎಂದು ದ.ಕ. ಎಸ್ಪಿ ಡಾ.ಅರುಣ್ ತಿಳಿಸಿದ್ದಾರೆ.
The Special Investigation Team (SIT) probing the alleged human burial case in Dharmasthala continued excavations on Tuesday at the 11th and 12th identified spots near the Netravathi river bathing ghat. However, no human remains or evidence of burial were found at either location.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm