ಬ್ರೇಕಿಂಗ್ ನ್ಯೂಸ್
05-08-25 08:22 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.5: ಧರ್ಮಸ್ಥಳ ಹೆಣ ಹೂತ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳ ತನಿಖೆ ಮುಂದುವರಿದಿದ್ದು ನೇತ್ರಾವತಿ ಸ್ನಾನಘಟ್ಟದ ಬಳಿಯ ಕಾಡಿನಲ್ಲಿ ಗುರುತಿಸಿರುವ 11 ಮತ್ತು 12ನೇ ಸ್ಥಳಗಳಲ್ಲಿ ಮಂಗಳವಾರ ಸಮಾಧಿ ಅಗೆದಿದ್ದು ಯಾವುದೇ ಹೆಣ ಹೂತಿರುವ ಸಾಕ್ಷ್ಯ ಲಭ್ಯವಾಗಿಲ್ಲ.
ಪ್ರಕರಣದಲ್ಲಿ ಸ್ಥಳ ಶೋಧ ತನಿಖೆ ಕೈಗೊಂಡು ಏಳನೇ ದಿನವಾದ ಮಂಗಳವಾರ ಇಡೀ ದಿನ ಸ್ನಾನಘಟ್ಟದ ಬಳಿಯ ಹೆದ್ದಾರಿ ಬದಿಯಲ್ಲಿ ಶೋಧ ಕಾರ್ಯ ನಡೆಯಿತು. ರಸ್ತೆಗೆ ಅಡ್ಡಲಾಗಿ ಪ್ಲಾಸ್ಟಿಕ್ ಪರದೆ ಹಾಕಿದ್ದು ಕಾರ್ಮಿಕರು ಮತ್ತು ಹಿಟಾಚಿ ಬಳಸಿ ಅಗೆಯಲಾಗಿದೆ. ಆರು ಅಡಿ ಆಳ ಮತ್ತು ಐದು ಅಡಿ ಅಗಲಕ್ಕೆ ಅಗೆಯಲಾಗಿದ್ದು ಹೆಣ ಹೂತಿರುವ ಅಥವಾ ಎಲುಬುಗಳ ಸಾಕ್ಷ್ಯ ಸಿಕ್ಕಿಲ್ಲ.





ಆ.4ರ ಸೋಮವಾರ ಹಠಾತ್ತಾಗಿ ದೂರುದಾರ ವ್ಯಕ್ತಿ 11ನೇ ಪಾಯಿಂಟ್ ನಿಂದ 120 ಮೀಟರ್ ದೂರದ ಬೆಟ್ಟಕ್ಕೆ ಪೊಲೀಸರನ್ನು ಕರೆದೊಯ್ದಿದ್ದ. ಈ ವೇಳೆ, ಪೊಲೀಸರೇ ಬೆಚ್ಚಿಬೀಳುವ ರೀತಿ ಕಾಡಿನ ಮಧ್ಯೆ ಮೇಲ್ಭಾಗದಲ್ಲಿಯೇ ಅಸ್ಥಿಪಂಜರ ಪತ್ತೆಯಾಗಿತ್ತು. ಸುಮಾರು ಒಂದು ವರ್ಷದಷ್ಟು ಹಳೆಯ ಅಸ್ಥಿಪಂಜರ ಎನ್ನಲಾಗುತ್ತಿದ್ದು ಸ್ಥಳದಲ್ಲಿ ಅಲ್ಲಲ್ಲಿ ಎಲುಬಿನ ತುಂಡುಗಳು ಬಿದ್ದುಕೊಂಡಿದ್ದವು. ಅದನ್ನು ವೈಜ್ಞಾನಿಕ ರೀತಿಯಲ್ಲೇ ಹೆಕ್ಕಿ ತೆಗೆದು ಪ್ಲಾಸ್ಟಿಕ್ ಬಕೆಟ್ ನಲ್ಲಿ ಗುಡ್ಡದಿಂದ ತರಲಾಗಿತ್ತು. ಈ ಮೂಳೆಗಳ ಚೂರುಗಳನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯ ಪ್ರಯೋಗಾಲಯಕ್ಕೆ ಮತ್ತು ವಿಧಿ ವಿಜ್ಞಾನ ಕೇಂದ್ರಕ್ಕೆ ಒಯ್ಯಲಾಗಿದೆ.
ಗುಡ್ಡದ ಮೇಲ್ಭಾಗದ ಬಂಡೆ ಕಲ್ಲಿನ ಎಡೆಯಲ್ಲಿ ಅಸ್ಥಿಪಂಜರ ಪತ್ತೆಯಾಗಿದ್ದು ಮರದಲ್ಲಿ ಸೀರೆಯನ್ನು ಕಟ್ಟಿದ ರೀತಿ ಇತ್ತು. ಹೀಗಾಗಿ ಸೀರೆಯನ್ನು ಬಳಸಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆಯಿದೆ. ಇದು ಪುರುಷನದ್ದೋ, ಮಹಿಳೆಯದ್ದೋ ಎನ್ನುವುದು ಗೊತ್ತಾಗಿಲ್ಲ. ಆದರೆ ಸುಜಾತ ಭಟ್ ಪರ ವಕೀಲ ಮಂಜುನಾಥ್ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು ಸ್ಥಳದಲ್ಲಿ ಮೂರು ಶವಗಳ ಅಸ್ಥಿಪಂಜರ ಸಿಕ್ಕಿದೆ, ಅದರಲ್ಲೊಂದು ಮಹಿಳೆಯದ್ದು ಎನ್ನುವ ಮಾಹಿತಿ ಇದೆ ಎಂದಿದ್ದಾರೆ.
ಗುಡ್ಡದ ಮೇಲ್ಭಾಗದಲ್ಲಿ ಅಸ್ಥಿಪಂಜರ ಸಿಕ್ಕಿರುವುದನ್ನು ದೂರುದಾರ ವ್ಯಕ್ತಿಯ ಪ್ರಕರಣದಲ್ಲಿ ಸೇರಿಸುವುದಕ್ಕೆ ಆಗುವುದಿಲ್ಲ. ಅನಾಥ ಶವದ ಅಸ್ಥಿಪಂಜರ ಆಗಿರುವುದರಿಂದ ಮತ್ತು ಒಂದು ವರ್ಷ ಹಿಂದಿನದ್ದು ಎನ್ನುವ ಗುಮಾನಿ ಇರುವುದರಿಂದ ಈ ಪ್ರಕರಣವನ್ನೂ ಎಸ್ಐಟಿ ತನಿಖೆಗೆ ಪರಿಗಣಿಸುತ್ತಾ ಗೊತ್ತಿಲ್ಲ. ಇದೇ ವೇಳೆ ಆರ್ಟಿಐ ಕಾರ್ಯಕರ್ತ ಜಯನ್ ಧರ್ಮಸ್ಥಳ ಠಾಣೆಯಲ್ಲಿ ನೀಡಿರುವ, 15 ವರ್ಷಗಳ ಹಿಂದೆ ಬಾಲಕಿಯನ್ನು ಹೂತ ಪ್ರಕರಣವನ್ನು ಡಿಜಿಪಿಯವರ ಸೂಚನೆಯಂತೆ ಎಸ್ಐಟಿ ತಂಡಕ್ಕೆ ಹಸ್ತಾಂತರ ಮಾಡಲಾಗಿದೆ ಎಂದು ದ.ಕ. ಎಸ್ಪಿ ಡಾ.ಅರುಣ್ ತಿಳಿಸಿದ್ದಾರೆ.
The Special Investigation Team (SIT) probing the alleged human burial case in Dharmasthala continued excavations on Tuesday at the 11th and 12th identified spots near the Netravathi river bathing ghat. However, no human remains or evidence of burial were found at either location.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am