ಬ್ರೇಕಿಂಗ್ ನ್ಯೂಸ್
24-12-20 05:10 pm Mangalore Correspondent ಕರಾವಳಿ
ಮಂಗಳೂರು, ಡಿ.24 : ನಗರದ ಎಲ್ಲೆಂದರಲ್ಲಿ ಕಾಮಗಾರಿ ನಡೆಸುತ್ತಾ ನಿತ್ಯ ಸಂಚಾರಿಗಳಿಗೆ ಕಿರಿಕಿರಿ ಉಂಟು ಮಾಡುತ್ತಿರುವ ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ತಾತ್ಕಾಲಿಕ ಬ್ರೇಕ್ ಬೀಳಲಿದೆ.
ಕಾಮಗಾರಿ ತಾತ್ಕಾಲಿಕ ನಿಲ್ಲಿಸುವ ಕುರಿತಾಗಿ ಪಾಲಿಕೆ ಆಯುಕ್ತ ಹಾಗೂ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಅಕ್ಷಯ್ ಶ್ರೀಧರ್ ಹೈಕೋರ್ಟ್ಗೆ ತಿಳಿಸಿದ್ದಾರೆ.

ನಿರ್ಮಾಣ ಹಾಗೂ ನೆಲಸಮ ತ್ಯಾಜ್ಯ ನಿರ್ವಹಣೆ- 2016ರ ನಿಯಮಗಳನ್ನು ಅನುಸರಿಸುವ ತನಕ ಮಂಗಳೂರಿನ ಸ್ಮಾರ್ಟ್ ಸಿಟಿ ಯೋಜನೆಗೆ ಸಂಬಂಧಿತ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗುವುದು. ಈ ಸಂಬಂಧ ಆಯಾ ಗುತ್ತಿಗೆದಾರರಿಗೆ ಸೂಚನೆ ನೀಡಲಾಗುವುದು ಎಂದು ಸ್ಮಾರ್ಟ್ ಸಿಟಿ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ.
ಪಚ್ಚನಾಡಿ, ಮಂದಾರದಲ್ಲಿ ಘನತ್ಯಾಜ್ಯ ಘಟಕದಿಂದ ಉಂಟಾದ ಅನಾಹುತಗಳ ಬಗ್ಗೆ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾ.ಎ.ಎಸ್.ಓಕಾ ಹಾಗೂ ನ್ಯಾ.ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿದ್ದು ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು.

ನ್ಯಾಯಪೀಠ, ಅಕ್ಷಯ್ ಶ್ರೀಧರ್ ಅವರನ್ನು ಪ್ರಶ್ನೋತ್ತರ ವಿಧಾನದಲ್ಲಿ ವಿಚಾರಣೆ ನಡೆಸಿದ್ದು, ಸ್ಮಾರ್ಟ್ ಸಿಟಿ ಕಾಮಗಾರಿಗಳ ಅನುಷ್ಠಾನದಲ್ಲಿ ನಿಯಮ ಪಾಲಿಸಲಾಗುತ್ತಿದೆಯೇ ಎಂದು ಪ್ರಶ್ನೆ ಮಾಡಿದೆ. ಅಲ್ಲದೆ, ನಿಯಮ ಪಾಲಿಸುತ್ತಿಲ್ಲ ಎಂದಾದರೆ ನಿಯಮಗಳನ್ನು ಪಾಲಿಸುವ ತನಕ ಕಾಮಗಾರಿ ಸ್ಥಗಿತಗೊಳಿಸುತ್ತೀರಾ ಎಂದು ಪ್ರಶ್ನಿಸಿದೆ.
ಇದಕ್ಕೆ ಉತ್ತರಿಸಿದ ಆಯುಕ್ತರು, ಸದ್ರಿ ನಿಯಮಗಳನ್ನು ಪಾಲನೆ ಮಾಡಲಾಗುತ್ತಿಲ್ಲ. 2016ರ ನಿಯಮಗಳನ್ನು ಅನುಸರಿಸುವ ತನಕ ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm