ಬ್ರೇಕಿಂಗ್ ನ್ಯೂಸ್
08-08-25 04:42 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.8 : ಧರ್ಮಸ್ಥಳ ಹೆಣ ಹೂತ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು:ದೂರುದಾರನ ಹೇಳಿಕೆಯಂತೆ ಧರ್ಮಸ್ಥಳ - ಸುಬ್ರಹ್ಮಣ್ಯ ಹೆದ್ದಾರಿಯ ಬೋಳಿಯಾರ್ ಎಂಬ ಹೊಸ ಜಾಗದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ.
ಕಳೆದ ಎರಡು ವಾರಗಳಿಂದ ನೇತ್ರಾವತಿ ಸ್ನಾನಘಟ್ಟದ ಸಮೀಪ ದೂರುದಾರ ತೋರಿಸಿದ ಜಾಗದಲ್ಲಿ ಸಮಾಧಿ ಅಗೆಯುವ ಪ್ರಕ್ರಿಯೆ ನಡೆಸಲಾಗಿತ್ತು. ಅಲ್ಲಿ ಎರಡು ಕಡೆ ಅಸ್ಥಿಪಂಜರದ ಸಾಕ್ಷ್ಯ ಲಭಿಸಿತ್ತು. ಆನಂತರ, ಅಲ್ಲಿ ಗುರುತಿಸಿರುವ 13ನೇ ಪಾಯಿಂಟ್ ನಲ್ಲಿ ಇನ್ನೂ ಶೋಧ ಕಾರ್ಯ ನಡೆದಿಲ್ಲ.




ಈ ನಡುವೆ, ಎಸ್.ಐ.ಟಿ ತಂಡವನ್ನು ದೂರುದಾರ ಹೊಸ ಜಾಗಕ್ಕೆ ಕರೆದೊಯ್ದಿದ್ದಾನೆ. ಧರ್ಮಸ್ಥಳದಿಂದ ಎರಡು ಕಿಮೀ ದೂರದ ಬೊಳಿಯಾರ್ ಗೋಂಕ್ರತಾರ್ ಎಂಬಲ್ಲಿನ ದಟ್ಟ ಅರಣ್ಯಕ್ಕೆ ಎಸ್.ಐ.ಟಿ ತಂಡ ಆಗಮಿಸಿದೆ. ಹೊಸ ಜಾಗದಲ್ಲಿ ದೂರುದಾರ ಎಷ್ಟು ಸ್ಥಳಗಳನ್ನು ಗುರುತಿಸುತ್ತಾನೆ ಎಂಬ ಕುತೂಹಲ ಇದೆ. ಹೊಸ ಜಾಗದಲ್ಲಿ ಸ್ಥಳ ಗುರುತು ಹಾಕಲು ಎಸ್ಐಟಿ ಮುಂದಾಗಿದ್ದು ಪಾಯಿಂಟ್ ನಂ 15 ರ ಸೈನ್ ಬೋರ್ಡ್ ತೆಗೆದುಕೊಂಡು ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ.
ಕಲ್ಲೇರಿಯಿಂದ ಒಂದು ಕಿಲೋಮೀಟರ್ ದೂರದಲ್ಲಿರುವ ಹೊಸ ಜಾಗದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು ಎಸ್ಐಟಿ ತಂಡ ಮತ್ತು ಶವ ಹೂತಿದ್ದಾನೆ ಎನ್ನಲಾದ ಅರಣ್ಯದೊಳಕ್ಕೆ ದೂರುದಾರ ಕರೆದೊಯ್ದಿದ್ದಾನೆ. ಜುಲೈ 3ರಂದು ನೀಡಿದ್ದ ದೂರಿನಲ್ಲಿ ಕಲ್ಲೇರಿ ಎಂಬಲ್ಲಿ ಶಾಲಾ ಸಮವಸ್ತ್ರದ ಜೊತೆಗೆ ಬಾಲಕಿಯನ್ನು ಹೂತು ಹಾಕಿದ್ದಾಗಿ ಹೇಳಿದ್ದ. ಅಲ್ಲಿಂದ ಒಂದು ಕಿಮೀ ಮುಂದೆ ಬೊಳಿಯಾರ್ ಎಂಬಲ್ಲಿಗೆ ತಂಡ ತಲುಪಿದ್ದು ಕಾಡಿನಲ್ಲಿ ಸ್ಥಳ ಶೋಧ ಕಾರ್ಯ ಆರಂಭಿಸಲಾಗಿದೆ. ಸ್ಥಳಕ್ಕೆ ಹಾರೆ ಪಿಕ್ಕಾಸಿನ ಜೊತೆಗೆ ಕಾರ್ಮಿಕರು ಮತ್ತು ಸಣ್ಣ ಹಿಟಾಚಿಯೂ ತೆರಳಿದೆ.
The Special Investigation Team (SIT) probing the Dharmasthala burial case has launched a fresh search operation in a newly identified location near Boliyar along the Dharmasthala-Subrahmanya highway. This move follows a tip-off by the complainant, who recently guided the team to the dense forest area.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm