ಬ್ರೇಕಿಂಗ್ ನ್ಯೂಸ್
09-08-25 11:36 am Udupi Correspondent ಕರಾವಳಿ
ಉಡುಪಿ, ಆ.9: ವರದಕ್ಷಿಣೆಗಾಗಿ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿ ಇದೀಗ ವಿದೇಶದಲ್ಲಿರುವ ಪತಿ ಅಲ್ಲಿಂದ ಮೊಬೈಲ್ನಲ್ಲೇ ತಲಾಖ್ ನೀಡಿದ್ದಾಗಿ ತೆಂಕ ಗ್ರಾಮದ ನಿವಾಸಿ ಸುಹಾನಾ (28) ಎಂಬ ಮಹಿಳೆ ಪೊಲೀಸ್ ದೂರು ನೀಡಿದ್ದು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಎರ್ಮಾಳು ಗುಜ್ಜಿಹೌಸ್ನ ಮುಬೀನ್ ಶೇಖ್ ಎಂಬವರನ್ನು 2024ರ ಅಕ್ಟೋಬರ್ನಲ್ಲಿ 12.5 ಪವನ್ ಬಂಗಾರ ವರದಕ್ಷಿಣೆ ಮದುವೆ ಮಾಡಿಸಿದ್ದರು. ಮದುವೆಗೆ 20 ಲಕ್ಷ ರೂ. ಖರ್ಚು ಮಾಡಲಾಗಿತ್ತು. ಆದರೆ ತಿಂಗಳ ಬಳಿಕ ಪತಿಯ ಮನೆಯವರು ಹೆಚ್ಚಿನ ವರದಕ್ಷಿಣೆಗಾಗಿ ಪೀಡಿಸತೊಡಗಿದ್ದು, ಆಗಲೇ ವಿದೇಶಕ್ಕೆ ತೆರಳಿದ್ದರು. ಇದೀಗ ಜುಲೈ 15ರಂದು ಇಲ್ಲ ಸಲ್ಲದ ಆರೋಪವೆಸಗಿ ಮೊಬೈಲ್ನಲ್ಲೇ ತಲಾಖ್ ನೀಡಿರುವುದಾಗಿ ಸುಹಾನಾ ದೂರಿನಲ್ಲಿ ತಿಳಿಸಿದ್ದಾರೆ.
ಮದುವೆ ನಂತರದಲ್ಲಿ ಪತಿಯ ಮನೆಯಲ್ಲಿ ಮಾವ ಉಮ್ಮರ್ ಸಾಹೇಬ್, ಅತ್ತೆ ಅಬೀದಾ, ಮೈದುನ ಮುಕ್ತಾರ್, ನಾದಿನಿ ರಿಹಾನಾ, ರಶೀನ್ ಹಾಗೂ ರಿಹಾನಾಳ ಪತಿ ಶಾಹೀದ್ರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕಿರುಕುಳ ಅನುಭವಿಸಿದ್ದೇನೆ. ಪರಿಸ್ಥಿತಿ ವಿಕೋಪಕ್ಕೆ ಹೋದಾಗ ಒಂದು ಬಾರಿ ತಂದೆ ನನ್ನನ್ನು ನೋಡಲು ಬಂದಿದ್ದಾಗ ನಾದಿನಿ ರಶೀನ್ ಕೈಯಿಂದ ಅವರ ಬೆನ್ನಿಗೆ ಹೊಡೆದಿದ್ದಾಳೆ. ಕಳೆದ ಡಿಸೆಂಬರ್ನಲ್ಲಿ ಪತಿ ವಿದೇಶಕ್ಕೆ ಹೋಗಿದ್ದು, ಆ ಬಳಿಕ ಪತಿಯ ಮನೆಯವರ ವರದಕ್ಷಿಣೆ ಕಿರುಕುಳವೂ ಹೆಚ್ಚಾಗಿತ್ತು. ಇದೀಗ ಪತಿ ಮೊಬೈಲ್ ಮೂಲಕ ತಲಾಖ್ ನೀಡಿದ್ದಾಗಿ ಸುಹಾನಾ ಪೊಲೀಸರಿಗೆ ನೀಡಿದ ದೂರಿನಲ್ಲಿ ಹೇಳಿದ್ದಾರೆ.
A 28-year-old woman from Thenka village has lodged a police complaint alleging dowry harassment and instant divorce via mobile by her husband, who is currently abroad. The Padubidri police have registered a case in this regard.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm