ಬ್ರೇಕಿಂಗ್ ನ್ಯೂಸ್
11-08-25 11:38 am Mangalore Correspondent ಕರಾವಳಿ
ಮಂಗಳೂರು, ಆ.11 : ವ್ಯಕ್ತಿಯೊಬ್ಬರು ಬೈಕಿನಲ್ಲಿ ಸಾಗುತ್ತಿದ್ದಾಗ ತಡೆದು ನಿಲ್ಲಿಸಿ ಧರ್ಮಸ್ಥಳದಲ್ಲಿ ಹೆಣಗಳನ್ನು ಹೂತ ವಿಚಾರದಲ್ಲಿ ಪ್ರಶ್ನೆ ಮಾಡಿ ತಮ್ಮನ್ನು ಕುಡ್ಲ ರಾಂಪೇಜ್ ಯೂಟ್ಯೂಬ್ ತಂಡದವರೆಂದು ಹೇಳಿಕೊಂಡಿದ್ದು ಆನಂತರ ಹಲ್ಲೆಗೈದಿದ್ದಾರೆಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಜಿರೆ ನಿವಾಸಿ ಹರೀಶ್ ನಾಯ್ಕ (46) ಎಂಬವರು ಆ.6ರಂದು ಮಧ್ಯಾಹ್ನ ಧರ್ಮಸ್ಥಳ ಗ್ರಾಮದ ಪಾಂಗಾಳ ರಸ್ತೆ ಬಳಿ ಮೋಟಾರ್ ಸೈಕಲ್ ನಲ್ಲಿ ಹೋಗುತ್ತಿದ್ದಾಗ, ಅಲ್ಲಿ ವಿಡಿಯೋ ಕ್ಯಾಮರಾ ಹಿಡಿದು ನಿಂತಿದ್ದ ಮೂವರು ವ್ಯಕ್ತಿಗಳು ನಿಲ್ಲಿಸುವಂತೆ ಸೂಚಿಸಿದ್ದರು. ಮೋಟಾರ್ ಸೈಕಲ್ ನಿಲ್ಲಿಸಿ ವಿಚಾರಿಸಿದಾಗ, ತನ್ನನ್ನು ಕುಡ್ಲ ರಾಂ ಪೇಜ್ ಯೂಟ್ಯೂಬರ್ ಎಂದು ಪರಿಚಯಿಸಿಕೊಂಡಿದ್ದು ಧರ್ಮಸ್ಥಳ ಪರಿಸರದಲ್ಲಿ ಹೆಣಗಳನ್ನು ಹೂತಿರುವ ಬಗ್ಗೆ ವಿಚಾರಿಸಿ, ಬಳಿಕ ತಕರಾರು ತೆಗೆದಿದ್ದಾರೆ. ಕುಡ್ಲ ರಾಂಪೇಜ್ ಎಂಬ ಯೂಟ್ಯೂಬರ್ ಹಾಗು ಆತನೊಂದಿಗೆ ಇದ್ದ ಇನ್ನಿಬ್ಬರು ಏಕಾಏಕಿ ತನಗೆ ಹಲ್ಲೆ ನಡೆಸಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ:50/2025 ಕಲಂ: 126(2),115(2), 352 ಜೊತೆಗೆ 3(5) ಬಿಎನ್ ಎಸ್ ರಂತೆ ಪ್ರಕರಣ ದಾಖಲಾಗಿದೆ.

ಅಬ್ದುಲ್ ರಹಿಮಾನ್ ಕೊಲೆ ; ಮತ್ತೊಬ್ಬ ಆರೋಪಿ ಬಂಧನ
ಮೇ 27ರಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ಸಂಬಂಧಿಸಿ ಈಗಾಗಲೇ 12 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದು ಆ.10ರಂದು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಪುದು ಗ್ರಾಮದ ನಿವಾಸಿ ರಂಜಿತ್ @ ರಂಜು (35) ಎಂಬಾತ ಬಂಧಿತ. ಕೊಲೆ ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು ಸಹಕರಿಸಿದವರು, ಕೊಲೆಗೆ ಸಂಚು ನಡೆಸಿದವರು ಸೇರಿ ಎಲ್ಲರನ್ನೂ ಬಂಧಿಸುತ್ತಿದ್ದಾರೆ.
ಭಾರತೀಯ ಸೇನೆ ಹೆಸರಿನ ಫೇಸ್ಬುಕ್ ಪೇಜ್ ನಲ್ಲಿ ಕೋಮು ದ್ವೇಷದ ಪೋಸ್ಟ್
ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ "ಭಾರತೀಯ ಸೇನೆ" ಎಂಬ ಹೆಸರಿನಲ್ಲಿ ಪೇಜನ್ನು ಹೊಂದಿರುವ ವ್ಯಕ್ತಿಯೊಬ್ಬ ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗುವಂತೆ ಮತ್ತು ಕೋಮು ಸೌಹಾರ್ದಕ್ಕೆ ದಕ್ಕೆಯಾಗುವಂತೆ, ಸುಳ್ಳು ಸುದ್ದಿ ಪ್ರಸಾರ ಮಾಡಿ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡುವಂತೆ ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 70/2025 ಕಲಂ: 196(1)(a) 353(2) BNS 2023 ರಂತೆ ಸುಮೋಟೋ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ ಎಸ್ಪಿ ಡಾ.ಅರುಣ್ ತಿಳಿಸಿದ್ದಾರೆ.
A case has been registered at Dharmasthala Police Station after a man alleged that members of the ‘Kudla Rampage’ YouTube team stopped his bike and assaulted him over questions regarding the alleged burial of bodies in Dharmasthala.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm