ಬ್ರೇಕಿಂಗ್ ನ್ಯೂಸ್
12-08-25 01:49 pm Mangalore Correspondent ಕರಾವಳಿ
ಮಂಗಳೂರು, ಆ.12 : ಮಾಂಸ ಪೂರೈಕೆಯ ಟೆಂಡರ್ ಸಿಗದ ಕಾರಣಕ್ಕೆ ಹಿಂದಿನ ಗುತ್ತಿಗೆದಾರರು ಪಿಲಿಕುಳ ಜೈವಿಕ ಉದ್ಯಾನವನದ ಪ್ರಾಣಿಗಳನ್ನು ಕೊಲ್ಲಲು ವಿಷಪೂರಿತ ಮಾಂಸವನ್ನು ಬೆರೆಸಲು ಹುನ್ನಾರ ನಡೆಸಿದ್ದಾರೆ ಎಂದು ಪಿಲಿಕುಳ ಜೈವಿಕ ಉದ್ಯಾನದ ನಿರ್ದೇಶಕ ಡಾ| ಪ್ರಶಾಂತ್ ಪೈ ಅವರು ಕಾವೂರು ಠಾಣೆಗೆ ದೂರು ನೀಡಿದ್ದಾರೆ.
ಉದ್ಯಾನವನದ ಪ್ರಾಣಿಗಳಿಗೆ ಮಾಂಸ ನೀಡಲು ಹೊಸ ಗುತ್ತಿಗೆದಾರರು ಗುತ್ತಿಗೆ ಪಡೆದಿದ್ದಾರೆ. ಸದ್ರಿ ಮಾಂಸವನ್ನು ತಿರಸ್ಕರಿಸುವ ನಿಟ್ಟಿನಲ್ಲಿ ಹಿಂದಿನ ಟೆಂಡರುದಾರರ ನೌಕರನೊಬ್ಬ ಆಗಸ್ಟ್ 7ರಂದು ಉದ್ಯಾನವನದ ಸಿಬಂದಿಗೆ ಕರೆ ಮಾಡಿ, ಮಾಂಸದಲ್ಲಿ ವಿಷ ಬೆರೆಸುವಂತೆ ತಿಳಿಸಿದ್ದಾನೆ. ಆ ಮೂಲಕ ವಿಷಾಹಾರ ನೀಡಿ ಪ್ರಾಣಿಗಳನ್ನು ಕೊಲ್ಲಲು ಹುನ್ನಾರ ನಡೆಸಿರುವುದು ಗೊತ್ತಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿ, ಇದರ ಹಿಂದೆ ಯಾರಿದ್ದಾರೆ ಎಂದು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಅರಣ್ಯಾಧಿಕಾರಿಯೂ ಆಗಿರುವ ಪ್ರಶಾಂತ ಪೈ ಆಗ್ರಹಿದ್ದಾರೆ.
ಘಟನೆ ಬಗ್ಗೆ ಇದೇ ಆ.8ರಂದು ಪಿಲಿಕುಳ ಜೈವಿಕ ಉದ್ಯಾನವನದ ವೈಧ್ಯಾಧಿಕಾರಿ ಡಾ.ದಿವ್ಯಾ ಗಣೇಶ್ ಅವರು ಪ್ರಾಧಿಕಾರದ ನಿರ್ದೇಶಕರಿಗೆ ಈ ಕುರಿತಾಗಿ ದೂರು ನೀಡಿದ್ದರು. ಇದರಂತೆ, ಪಿಲಿಕುಳ ಜೈವಿಕ ಉದ್ಯಾನವನದ ನೌಕರ ಹರೀಶ್ ಅವರನ್ನು ವಿಚಾರಿಸಿದಾಗ, ಈ ಹಿಂದೆ ಮಾಂಸ ಪೂರೈಕೆಗೆ ಟೆಂಡರ್ ಪಡೆದಿದ್ದ ಖಾದರ್ (ಅವರು ಟೆಂಡರುದಾರರೂ ಸಹ ಆಗಿರುತ್ತಾರೆ) ನಿರ್ದೇಶನದ ಮೇರೆಗೆ ಅಬ್ಬಾಸ್ ಹಾಗೂ ಹನೀಫ್ ಎಂಬವರು ಪಿಲಿಕುಳ ಜೈವಿಕ ಉದ್ಯಾನವನದ ವನ್ಯಮೃಗಗಳಿಗೆ ಮಾಂಸವನ್ನು ವಿತರಿಸುತ್ತಿದ್ದರು. ಈ ಬಾರಿ ಬೇರೆಯವರು ಬಿಡ್ ಹಾಕಿದ್ದರಿಂದ ಟೆಂಡರ್ ಬೇರೆಯವರಿಗೆ ಹೋಗಿತ್ತು. ಆ.7ರಂದು ಅಬ್ಬಾಸ್ ಅವರ ನೌಕರ ಹನೀಫ್ ಎಂಬವರು ಪಿಲಿಕುಳದ ನೌಕರ ಹರೀಶ್ ಅವರಿಗೆ ಕರೆ ಮಾಡಿ, ಈಗಿನ ಟೆಂಡರುದಾರರು ಪೂರೈಸುತ್ತಿರುವ ಮಾಂಸಕ್ಕೆ ಕೊಳೆತ ಮಾಂಸ ಅಥವಾ ವಿಷ ಮಾಂಸವನ್ನು ಬೆರೆಸಿ, ಸದ್ರಿ ಟೆಂಡರನ್ನು ತಿರಸ್ಕರಿಸುವಂತೆ ಮಾಡಲು ಹುನ್ನಾರ ಮಾಡಿರುವುದಾಗಿ ಹೇಳಿದ್ದಾರೆ. ಅಲ್ಲದೆ ಈಗಿರುವ ಟೆಂಡರುದಾರರನ್ನು ತಿರಸ್ಕೃತಗೊಳಿಸಲು ಪಿಲಿಕುಳ ಜೈವಿಕ ಉದ್ಯಾನವನದ ವನ್ಯಮೃಗಗಳನ್ನು ಕೊಲ್ಲಲು ಹುನ್ನಾರ ಮಾಡಿರುವುದು ತಿಳಿದುಬಂದಿತ್ತು.
ಈ ವಿಷಯದ ಬಗ್ಗೆ, ಹರೀಶ್ ಮತ್ತು ಹನೀಫ್ ಅವರು ಮಾತನಾಡಿರುವ ಆಡಿಯೋ ರೆಕಾರ್ಡ್ ತುಣುಕನ್ನು ಪೊಲೀಸರಿಗೆ ನೀಡಿದ್ದಾರೆ. ಆದ್ದರಿಂದ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಕೋರುತ್ತೇನೆ ಹಾಗೂ ಅಬ್ಬಾಸ್ ಹಾಗೂ ಹನೀಫ್ ಎಂಬವರ ಮೊಬೈಲ್ ಪೋನ್ಗಳನ್ನು ಪರೀಲಿಸಿದರೆ, ಇದರ ಹಿಂದೆ ಯಾರೆಲ್ಲ ಇದ್ದಾರೆ? ಯಾರ ಕೈವಾಡ ಇರುಬಹುದು? ಎಂಬ ಬಗ್ಗೆ, ಕೂಲಂಕುಷವಾಗಿ ತನಿಖೆ ನಡೆಸಬೇಕೆಂದು ದೂರು ಸಲ್ಲಿಸಿದ್ದಾರೆ.
A shocking allegation has surfaced from the Pilikula Biological Park, where the zoo’s director, Dr. Prashanth Pai, has lodged a complaint with Kavoor Police claiming that a former meat supply contractor conspired to poison the park’s animals after losing the latest supply tender.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm